ಹಾಡು ಪಾಡು

ಆ ಕಾಲದ ಮೈಸೂರಿನ ಚಳಿಗೆ ಎಂಥಾ ಮುದವಿತ್ತು!

ಈಗ ಬಿಸಿಲು, ಮಳೆ, ಚಳಿ ಎಲ್ಲವೂ ಇದೆ. ಆದರೆ, ಕಾಲಕ್ಕೆ ತಕ್ಕಂತಿಲ್ಲ. ವಾತಾವರಣಕ್ಕೇ ಗೊಂದಲ ಆಗುವಷ್ಟು ಪರಿಸರ ಮಲಿನಗೊಂಡಿದೆ. 

ಬಾಪು ಸತ್ಯನಾರಾಯಣ

ನಾನು ಹುಟ್ಟಿದ್ದು ೧೯೩೨ನೇ ಇಸವಿಯಲ್ಲಿ. ೬೦ನೇ ದಶಕದ ತನಕ ವಾತಾವರಣ ಬಹಳ ಚೆನ್ನಾಗಿತ್ತು. ಸುತ್ತಲೂ ಮುಕ್ತ ಜಾಗಗಳಿದ್ದವು, ಉದ್ಯಾನಗಳಿದ್ದವು. ಅಂದು ಕಾಂಕ್ರೀಟ್ ಮನೆಗಳ ಸಂಖ್ಯೆ ಕಡಿಮೆ. ಹಂಚಿನ ಮನೆಗಳಲ್ಲಿನ ಚಳಿ ತುಂಬಾ ಚೆನ್ನಾಗಿತ್ತು. ಆ ದಿನಗಳಲ್ಲಿ ಚಳಿಯನ್ನು ತಡೆದುಕೊಳ್ಳುವ ಶಕ್ತಿಯೂ ಇತ್ತು.

ಹೊದ್ದುಕೊಂಡು ಮಲಗಿದರೆ ಸಮಯದ ಪರಿವೆಯೂ ಇರುತ್ತಿರಲಿಲ್ಲ. ನಾನು ದೆಹಲಿಯಲ್ಲಿದ್ದಾಗ ಚಳಿಗಾಲದಲ್ಲೂ ತಣ್ಣೀರಿನಲ್ಲಿ ಸ್ನಾನ ಮಾಡುತ್ತಿದ್ದೆ, ಕಷ್ಟವೆನಿಸುತ್ತಿರಲಿಲ್ಲ. ಮನಸ್ಸಿಗೆ ಬಹಳ ಮುದ ಕೊಡುತ್ತಿದ್ದ ಚಳಿಯಾಗಿತ್ತು.

೧೯೭೦ – ೮೦ರ ದಶಕದ ನಂತರ ಚಳಿಗಾಲದ ಸಂಪೂರ್ಣ ಚಿತ್ರಣವೇ ಬದಲಾಯಿತು. ವಾಹನ- ಕಟ್ಟಡಗಳು ತುಂಬಿಕೊಂಡು ಅಧ್ವಾನವಾಯಿತು. ೧೯೫೦ರಲ್ಲಿ ನಮ್ಮ ದೇಶದಲ್ಲಿ ಕೇವಲ ಮೂರು ಲಕ್ಷಗಳಷ್ಟಿದ್ದ ವಾಹನಗಳ ಸಂಖ್ಯೆ ಈಗ ಬರೋಬ್ಬರಿ ೬೬ ಲಕ್ಷಕ್ಕೇರಿದೆ. ೧೯೧೫ರಲ್ಲಿ ೨೪,೦೦೦ ಕಿಲೋಮೀಟರ್ ಇದ್ದ ರಸ್ತೆ ಈಗ ೩೫೪ ಮಿಲಿಯನ್ ಕಿಲೋಮೀಟರ್‌ಗಳಷ್ಟಾಗಿದೆ. ಶೇಕಡಾ ೩೩ರಷ್ಟು ಅರಣ್ಯಗಳಿರಬೇಕಾದಲ್ಲಿ ಈಗ ಉಳಿದಿರುವುದು ಕೇವಲ ೨೪ – ೨೫ ಪ್ರತಿಶತಕಾಡುಗಳು. ಎಲ್ಲ ಕಡೆಗಳಲ್ಲೂ ನಗರ ಎಂಬ ಕಾಂಕ್ರೀಟು ಕಾಡಿನೊಳಗೆ ಹಿಡಿ ಮಣ್ಣು ಹುಡುಕುವುದಕ್ಕೂ ಹರಸಾಹಸ ಪಡಬೇಕಾಗಿರುವುದರಿಂದ ಹವಾಮಾನ ವ್ಯತ್ಯಯಕ್ಕೆ ನೇರ ಪರಿಣಾಮವನ್ನುಂಟು ಮಾಡಿದೆ.

ಪಾತಾಳದಲ್ಲೂ ವಾಸ್ತವ್ಯ ಹೂಡುವಷ್ಟು ಮನುಷ್ಯ ಮುಂದುವರಿದಿದ್ದಾನೆ. ಇದೇ ಕಾರಣಕ್ಕೆ ವಾತಾವರಣದಲ್ಲಿ ಏರುಪೇರಾಗಿ ಮಳೆ – ಬಿಸಿಲು- ಚಳಿಗೆ ನಿರ್ದಿಷ್ಟ ಕಾಲಮಾನವೇ ಇಲ್ಲದಂತಾಗಿದೆ.

ಕಾಲಮಾನದ ಏರುಪೇರಿಗೆ ಮುಖ್ಯ ಕಾರಣ ಪರಿಸರ ಮಾಲಿನ್ಯ. ಕಾಡುಗಳು ನಾಶವಾಗಿ ಪ್ರಾಣಿಗಳು, ಉರಗಗಳು ಮನುಷ್ಯರೊಡನೆ ನೇರಾನೇರ ಸಂಘರ್ಷಕ್ಕಿಳಿದಿವೆ. ಕಾಡುಪ್ರಾಣಿಗಳು ನಾಡಿಗೆ ದಾಳಿಯಿಡುವುದು ಪರಿಸರ ಕಲುಷಿತಗೊಂಡಿರುವುದಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿದೆ. ಮಾಲಿನ್ಯದ ತೊಂದರೆಗಳನ್ನು ಕುರಿತು ಮಾತನಾಡುವ ಮೊದಲು ಸಂರಕ್ಷಣೆಯ ಬಗ್ಗೆ ಯೋಚಿಸಬೇಕು. ಸರಕಾರ ಹಸಿ ಕಸ, ಒಣಕಸ, ಎಲೆಕ್ಟ್ರಾನಿಕ್ ವೇಸ್ಟ್ ಇತ್ಯಾದಿಯಾಗಿ ವಿಂಗಡಿಸಿ ವಿಲೇವಾರಿಗೆ ಕ್ರಮ ಕೈಗೊಂಡಿದ್ದರೂ ಸುತ್ತಮುತ್ತ ಕಸ ಚೆಲ್ಲುವವರ ಸಂಖ್ಯೆ ಕಡಿಮೆಯಾಗಿಲ್ಲ.

ಮುಂದೊಂದು ದಿನ ಎಲೆಕ್ಟ್ರಾನಿಕ್ ತ್ಯಾಜ್ಯವೇ ಪ್ಲಾಸ್ಟಿಕ್‌ನಂತೆ ಬಹುದೊಡ್ಡ ಸಮಸ್ಯೆಯಾಗಿಹವಾಮಾನದ ಮೇಲೆ ಪರಿಣಾಮ ಬೀರುತ್ತದೆ. ಸ್ವಚ್ಛತೆಯ ಬಗ್ಗೆ ನಮಗಿರುವ ಉದಾಸೀಭಾವ ಶುದ್ಧ ಗಾಳಿಯ ಅಭಾವವನ್ನು ಸೃಷ್ಟಿಸುತ್ತಿದೆ. ಪ್ರತಿ ವರ್ಷ ಸರಾಸರಿ ೪೪ ಲಕ್ಷ ಜನರು ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪುತ್ತಿದ್ದಾರೆ. ಗಾಳಿಯಲ್ಲಿ ವಿಷಕಾರಿ ದೂಳಿನ ಕಣಗಳಿಂದ ಉಸಿರಾಡುವುದೇ ಕಷ್ಟವಾಗಿದೆ. ಈಗ ಬಿಸಿಲು, ಮಳೆ, ಚಳಿ ಎಲ್ಲವೂ ಇದೆ. ಆದರೆ, ಕಾಲಕ್ಕೆ ತಕ್ಕಂತಿಲ್ಲ. ವಾತಾವರಣಕ್ಕೇ ಗೊಂದಲ ಆಗುವಷ್ಟು ಪರಿಸರ ಮಲಿನಗೊಂಡಿದೆ.

ಅಂದಿನ ಹೆಂಚಿನ ಮನೆಗಳು, ಮಣ್ಣಿನ ರಸ್ತೆಗಳು, ಸೈಕಲ್ – ಎತ್ತಿನ ಗಾಡಿಗಳು ಕಣ್ಮರೆಯಾಗಿ ಕಾಂಕ್ರೀಟಿನೊಳಗೆ ಕಳೆದು ಹೋಗಿದ್ದೇವೆ. ಬಣ್ಣ ಬಣ್ಣದ ಹೊದೆವ ಕಂಬಳಿಗಳಿವೆ. ಆದರೆ ಇಂದಿನ ಚಳಿ, ಕನಸಿಗೆ ಬಣ್ಣ ತುಂಬುವ ಬದಲಾಗಿ ದೇಹಾರೋಗ್ಯದ ಕುರಿತು ಭಯ ಹುಟ್ಟಿಸುತ್ತಿದೆ.

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

12 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

12 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

13 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

13 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

14 hours ago