ಹಾಡು ಪಾಡು

ನನಗೆ ಆಮೇಲೆ ಬೇರೆ ದಾರಿಯೇ ಇರಲಿಲ್ಲ…

ಚಾಂದಿನಿ ಗಗನ  

ನಾನು ಪ್ರತಿ ಸಾರಿ ಊರಿಗೆ ಬರುವಾಗ ನನ್ನ ಚೆಂದದ ಮೈಸೂರನ್ನು ದಾಟಿಯೇ ಹೋಗುತ್ತೇನೆ. ಆ ಅರಮನೆ, ದಸರಾ, ಬೆಟ್ಟ, ವುಡ್‌ಲ್ಯಾಂಡ್ ಸಿನಿಮಾ ಥಿಯೇಟರ್ ಮುಂದಿನ ಪಾರ್ಕ್ ನನಗೂ ಈ ಜಾಗಕ್ಕೂ ಸಂಬಂಧ ಬೆಸೆದುಕೊಂಡಿದೆ.

ನಾನು ಒಮ್ಮೆ ಮಾತ್ರ ಮೈಸೂರು ದಸರಾವನ್ನು ನೇರವಾಗಿ ನೋಡಿ ಕಣ್ಣು ತುಂಬಿಕೊಂಡಿದ್ದೇನೆ. ಆ ಸಮಯದಲ್ಲಿ ನಾನು ಕಣ್ಣು ಹಾಯಿಸಿದ್ದು ಬಣ್ಣ ಬಣ್ಣದ ಸೀರೆ ತೊಟ್ಟಿದ್ದ ಹೆಂಗಸರನ್ನು. ಲಂಗ- ದಾವಣಿಯ ಹೆಣ್ಣುಮಕ್ಕಳನ್ನು ಹಾಗೂ ಮುಖ್ಯವಾಗಿ ನನಗೆ ಆಕರ್ಷಿತರಾಗುತ್ತಿದ್ದ ಯುವಕರನ್ನು. ಒಂದು ಕಡೆ ಹೆಂಗಸರನ್ನು ನೋಡುವಾಗ ಅವರಂತೆ ನಾ ಯಾವಾಗ ಆಗುವುದು ಎಂದು ಭಾವನೆಯ ಲೋಕದಲ್ಲಿಯೇ ಮುಳುಗಿಹೋಗುತ್ತಿದ್ದೆ. ಮತ್ತೆ ಮತ್ತೆ ಭ್ರಮೆಯಲ್ಲಿ ಆ ಬಣ್ಣದ ಸೀರೆಯಲ್ಲಿ ನಾನೇ ನಾನಾಗುತ್ತಿದ್ದೆ. ಹುಡುಗರನ್ನು ಕಂಡಾಗ ನನ್ನನ್ಯಾಕೆ ಯಾರೂ ಗಮನಿಸುತ್ತಿಲ್ಲ ಎಂದು ಕೋಪಿಷ್ಟಳಾಗಿದ್ದೆ. ಅವರನ್ನು ನನ್ನೆಡೆಗೆ ಹೇಗೆ ಸೆಳೆಯುವುದು ಎಂದು ಐದು ರೂಪಾಯಿಗೆ ಸಿಕ್ಕ ಮಿಂಚಿನ ಮಣಿಸರವನ್ನು ಹಾಕಿಕೊಂಡು ಅತ್ತಿತ್ತ ಓಡಾಡುತ್ತಿದ್ದೆ.

ನನ್ನ ಮೊದಲ ದಿನದ ಸೀರೆ ಅನುಭವವಂತೂ ಅಬ್ಬಾ ಅನ್ನುವಂಥದ್ದು. ಅಶೋಕಪುರಂನಲ್ಲಿ ನಮ್ಮ ಸಂಬಂಧಿಕರ ಮನೆ ಇದೆ. ಅಂದೇ ನಾನು ಮೊದಲ ದಸರಾ ಹಬ್ಬಕ್ಕೆ ಅಲ್ಲಿಗೆ ಹೋಗಿದ್ದು. ನನ್ನೂರು ತಿ. ನರಸೀಪುರದ ಹತ್ತಿರದಲ್ಲಿಯೇ ಇರುವ ಹಳೇ ಸೋಸಲೆ ಗ್ರಾಮ. ಓದುವಾಗ ಸಿನಿಮಾ ನೋಡಲು ಅನೇಕ ಬಾರಿ ಮೈಸೂರಿಗೆ ಹೋಗಿದ್ದೆ. ಆದರೆ ನನ್ನ ಭಾವನೆಯವರನ್ನು ನಾನು ಎಂದೂ ಕಂಡಿರಲಿಲ್ಲ. ರಣಜಿತ್, ಲಿಡೋ, ಚಾಮುಂಡೇಶ್ವರಿ, ಸಂಗಮ್ ನನ್ನ ಅಚ್ಚುಮೆಚ್ಚಿನ ಥಿಯೇಟರ್‌ಗಳು. ಬೆಟ್ಟಯ್ಯ ಎಂಬ ನನ್ನ ಸಮುದಾಯದವರನ್ನು ಅಲ್ಲಿ ಭೇಟಿಯಾಗಿ, ಮೊದಲು ನಾನು ಬಿಳಿಬಣ್ಣದ ಕೆಂಪು ಅಂಚಿನ ಚಿಮುಕಿ ಸೀರೆಯನ್ನುಟ್ಟು ವಸ್ತು ಪ್ರದರ್ಶನ ನೋಡಲು ಹೋಗಿದ್ದೆ. ಅಂದು ಕೆನ್ನೆಗೆ ಕೆಂಪಿನ ಬಣ್ಣ ಹಚ್ಚಿ. ತುಟಿಗೆ ಬಣ್ಣ ಹಾಗೂ ಕಣ್ಣಿಗೆ ಕಾಡಿಗೆ ಮತ್ತು ಕೈಗೆ ಕೆಂಪು ಧರಿಸಿಕೊಂಡು ಸೇರವನ್ನು ತಲೆಯ ಮೇಲೆ ಹಾಕಿಕೊಂಡು ತಲೆ ಬಗ್ಗಿಸಿ ವಯ್ಯಾರದಲ್ಲಿ ನಡೆದುಕೊಂಡು ಸುತ್ತಿದ್ದೆ. ಆಗ ತಲೆಯಲ್ಲಿ ಕೂದಲು ಚಿಕ್ಕದಾಗಿತ್ತು. ಇರುವುದನ್ನೇ ಹೆಣ್ಣೆಂದು ಭ್ರಮಿಸಿ ಸಂಭ್ರಮಿಸಿದ್ದೆ. ತಡರಾತ್ರಿ ಮನೆಗೆ ಬಂದಾಗ ಸೀರೆ ಬಿಚ್ಚಲು ಮನಸ್ಸಾಗಲಿಲ್ಲ. ನನಗೆ ಆಮೇಲೆ ಬೇರೆ ದಾರಿಯೇ ಇರಲಿಲ್ಲ. ಅವಳಿಂದ ಅವನಾಗಿ ರೂಪಾಂತರವಾಗಲೇಬೇಕಿತ್ತು.

 

 

 

andolana

Recent Posts

ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯುವ ಆಸೆ ಇದೆ : ಶಾಸಕ ಕೆ.ಹರೀಶ್‌ ಗೌಡ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…

17 mins ago

ಭೀಕರ ಸರಣಿ ಅಪಘಾತ : ಬೆಂಗಳೂರಿನ 6 ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…

35 mins ago

ಓದುಗರ ಪತ್ರ | ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…

43 mins ago

ಶಿವರಾತ್ರಿ ಜಾತ್ರೆ | ಮ.ಬೆಟ್ಟದಲ್ಲಿ ಸಕಲ ಸಿದ್ಧತೆ ; ನಾಳೆಯಿಂದ ಐದು ದಿನ ಸಂಭ್ರಮ

ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…

58 mins ago

ಭಾರತಕ್ಕೆ ಬಂದು ನೇರವಾಗಿ ವಿಚಾರಣೆ ಎದುರಿಸಬೇಕು : ವಿಜಯ್‌ ಮಲ್ಯೆಗೆ ಕೋರ್ಟ್‌ ಚಾಟಿ

ಮುಂಬೈ : ಲಂಡನ್ನಿನಲ್ಲಿ ಇದ್ದುಕೊಂಡು ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ (ಎಫ್‌ಇಒ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಬದಲು, ಭಾರತಕ್ಕೆ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ವಾಣಿಜ್ಯ ಮಂಡಳಿ: ಹೊಸ ಬಿರುಸು, ಗರಿಗೆದರಿದ ಕಲಾವಿದರ ಸಂಘ

ಚುನಾವಣೆ ಕಳೆದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಭಾರವಾಹಿಗಳ ಆಯ್ಕೆ ಆಗಿದೆ. ನಟ, ನಿರ್ಮಾಪಕಿ ಜಯಮಾಲ ನೇತೃತ್ವದ ಆಡಳಿತ ಮಂಡಳಿ…

4 hours ago