ಹಾಡು ಪಾಡು

ನನಗೆ ಆಮೇಲೆ ಬೇರೆ ದಾರಿಯೇ ಇರಲಿಲ್ಲ…

ಚಾಂದಿನಿ ಗಗನ  

ನಾನು ಪ್ರತಿ ಸಾರಿ ಊರಿಗೆ ಬರುವಾಗ ನನ್ನ ಚೆಂದದ ಮೈಸೂರನ್ನು ದಾಟಿಯೇ ಹೋಗುತ್ತೇನೆ. ಆ ಅರಮನೆ, ದಸರಾ, ಬೆಟ್ಟ, ವುಡ್‌ಲ್ಯಾಂಡ್ ಸಿನಿಮಾ ಥಿಯೇಟರ್ ಮುಂದಿನ ಪಾರ್ಕ್ ನನಗೂ ಈ ಜಾಗಕ್ಕೂ ಸಂಬಂಧ ಬೆಸೆದುಕೊಂಡಿದೆ.

ನಾನು ಒಮ್ಮೆ ಮಾತ್ರ ಮೈಸೂರು ದಸರಾವನ್ನು ನೇರವಾಗಿ ನೋಡಿ ಕಣ್ಣು ತುಂಬಿಕೊಂಡಿದ್ದೇನೆ. ಆ ಸಮಯದಲ್ಲಿ ನಾನು ಕಣ್ಣು ಹಾಯಿಸಿದ್ದು ಬಣ್ಣ ಬಣ್ಣದ ಸೀರೆ ತೊಟ್ಟಿದ್ದ ಹೆಂಗಸರನ್ನು. ಲಂಗ- ದಾವಣಿಯ ಹೆಣ್ಣುಮಕ್ಕಳನ್ನು ಹಾಗೂ ಮುಖ್ಯವಾಗಿ ನನಗೆ ಆಕರ್ಷಿತರಾಗುತ್ತಿದ್ದ ಯುವಕರನ್ನು. ಒಂದು ಕಡೆ ಹೆಂಗಸರನ್ನು ನೋಡುವಾಗ ಅವರಂತೆ ನಾ ಯಾವಾಗ ಆಗುವುದು ಎಂದು ಭಾವನೆಯ ಲೋಕದಲ್ಲಿಯೇ ಮುಳುಗಿಹೋಗುತ್ತಿದ್ದೆ. ಮತ್ತೆ ಮತ್ತೆ ಭ್ರಮೆಯಲ್ಲಿ ಆ ಬಣ್ಣದ ಸೀರೆಯಲ್ಲಿ ನಾನೇ ನಾನಾಗುತ್ತಿದ್ದೆ. ಹುಡುಗರನ್ನು ಕಂಡಾಗ ನನ್ನನ್ಯಾಕೆ ಯಾರೂ ಗಮನಿಸುತ್ತಿಲ್ಲ ಎಂದು ಕೋಪಿಷ್ಟಳಾಗಿದ್ದೆ. ಅವರನ್ನು ನನ್ನೆಡೆಗೆ ಹೇಗೆ ಸೆಳೆಯುವುದು ಎಂದು ಐದು ರೂಪಾಯಿಗೆ ಸಿಕ್ಕ ಮಿಂಚಿನ ಮಣಿಸರವನ್ನು ಹಾಕಿಕೊಂಡು ಅತ್ತಿತ್ತ ಓಡಾಡುತ್ತಿದ್ದೆ.

ನನ್ನ ಮೊದಲ ದಿನದ ಸೀರೆ ಅನುಭವವಂತೂ ಅಬ್ಬಾ ಅನ್ನುವಂಥದ್ದು. ಅಶೋಕಪುರಂನಲ್ಲಿ ನಮ್ಮ ಸಂಬಂಧಿಕರ ಮನೆ ಇದೆ. ಅಂದೇ ನಾನು ಮೊದಲ ದಸರಾ ಹಬ್ಬಕ್ಕೆ ಅಲ್ಲಿಗೆ ಹೋಗಿದ್ದು. ನನ್ನೂರು ತಿ. ನರಸೀಪುರದ ಹತ್ತಿರದಲ್ಲಿಯೇ ಇರುವ ಹಳೇ ಸೋಸಲೆ ಗ್ರಾಮ. ಓದುವಾಗ ಸಿನಿಮಾ ನೋಡಲು ಅನೇಕ ಬಾರಿ ಮೈಸೂರಿಗೆ ಹೋಗಿದ್ದೆ. ಆದರೆ ನನ್ನ ಭಾವನೆಯವರನ್ನು ನಾನು ಎಂದೂ ಕಂಡಿರಲಿಲ್ಲ. ರಣಜಿತ್, ಲಿಡೋ, ಚಾಮುಂಡೇಶ್ವರಿ, ಸಂಗಮ್ ನನ್ನ ಅಚ್ಚುಮೆಚ್ಚಿನ ಥಿಯೇಟರ್‌ಗಳು. ಬೆಟ್ಟಯ್ಯ ಎಂಬ ನನ್ನ ಸಮುದಾಯದವರನ್ನು ಅಲ್ಲಿ ಭೇಟಿಯಾಗಿ, ಮೊದಲು ನಾನು ಬಿಳಿಬಣ್ಣದ ಕೆಂಪು ಅಂಚಿನ ಚಿಮುಕಿ ಸೀರೆಯನ್ನುಟ್ಟು ವಸ್ತು ಪ್ರದರ್ಶನ ನೋಡಲು ಹೋಗಿದ್ದೆ. ಅಂದು ಕೆನ್ನೆಗೆ ಕೆಂಪಿನ ಬಣ್ಣ ಹಚ್ಚಿ. ತುಟಿಗೆ ಬಣ್ಣ ಹಾಗೂ ಕಣ್ಣಿಗೆ ಕಾಡಿಗೆ ಮತ್ತು ಕೈಗೆ ಕೆಂಪು ಧರಿಸಿಕೊಂಡು ಸೇರವನ್ನು ತಲೆಯ ಮೇಲೆ ಹಾಕಿಕೊಂಡು ತಲೆ ಬಗ್ಗಿಸಿ ವಯ್ಯಾರದಲ್ಲಿ ನಡೆದುಕೊಂಡು ಸುತ್ತಿದ್ದೆ. ಆಗ ತಲೆಯಲ್ಲಿ ಕೂದಲು ಚಿಕ್ಕದಾಗಿತ್ತು. ಇರುವುದನ್ನೇ ಹೆಣ್ಣೆಂದು ಭ್ರಮಿಸಿ ಸಂಭ್ರಮಿಸಿದ್ದೆ. ತಡರಾತ್ರಿ ಮನೆಗೆ ಬಂದಾಗ ಸೀರೆ ಬಿಚ್ಚಲು ಮನಸ್ಸಾಗಲಿಲ್ಲ. ನನಗೆ ಆಮೇಲೆ ಬೇರೆ ದಾರಿಯೇ ಇರಲಿಲ್ಲ. ಅವಳಿಂದ ಅವನಾಗಿ ರೂಪಾಂತರವಾಗಲೇಬೇಕಿತ್ತು.

 

 

 

andolana

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

12 mins ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

16 mins ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

21 mins ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

26 mins ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

33 mins ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago