ಮಧುಕರ ಮಳವಳ್ಳಿ
ಅಂಬೇಡ್ಕರ್ ಪರಿಚಯ ಆಗಿದ್ದು, ನಾನು ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದಾಗ ಕನ್ನಡದ ಮೇಷ್ಟ್ರು ನಾವು ತರಲೆ ಮಾಡುವಾಗ ನೀವು ಹಿಂಗೆ ಇದ್ರೆ ಅಂಬೇಡ್ಕರ್ ಅವರಿಂದ ಪಡೆದ ಸಂವಿಧಾನದ ಅವಕಾಶಗಳನ್ನು ಹಾಳು ಮಾಡಿಕೊಳ್ಳುತ್ತೀರಿ’ ಎಂದಾಗ ಈಗಾಗಲೇ ಜಾತಿಯ ಭರ್ಜಿ ತುದಿಯಿಂದ ಕೊನೆ ಬೆಂಚಿನ ವಿದ್ಯಾರ್ಥಿಗಳಾಗಿದ್ದವು. ಮತ್ತೆ ಪ್ರತಿ ವರ್ಷವೂ ಯಾವುದೋ ತಿಂಗಳಲ್ಲಿ ‘ದಲಿತ ವಿದ್ಯಾರ್ಥಿಗಳು ಯಾರಿದ್ದೀರಿ? ನಿಮಗೆ ವಿದ್ಯಾರ್ಥಿ ವೇತನ ಬಂದಿದೆ. ನಾಳೆ ಅಪ್ಪ ಅಮ್ಮನನ್ನು ಜೊತೆಗೆ ಬಂದು ಪಡೆದುಕೊಳ್ಳಬಹುದು’ ಎಂದಾಗ ಪಕ್ಕ ಕೂರುತ್ತಿದ್ದ ವಿದ್ಯಾರ್ಥಿಗಳಿಗೆ ನಮ್ಮ ಜಾತಿ ಯಾವುದೆಂದು ತಿಳಿಯುತ್ತಿತ್ತು. ಆಗೆಲ್ಲ ಈ ವಿದ್ಯಾರ್ಥಿ ವೇತನ ಅವರು ನಮ್ಮ ಜೊತೆ ಒಂದು ವಾರ ಕಾಲ ಅಂತರ ಇರುವಂತೆ ನೋಡಿಕೊಳ್ಳುತ್ತಿತ್ತು.
ಆದರೆ ಕೇರಿಯ ಒಳಗಡೆ ತಮಟೆಯ ಸದ್ದು ಬಡಿಯುತ್ತಾ ‘ದಲಿತರು ಬರುವರು ದಾರಿ ಬಿಡಿ’ ಮತ್ತು ‘ಯಾರಿಗೆ ಬಂತು ಎಲ್ಲಿಗೆ ಬಂತು ನಲವತ್ತೇಳರ ಸ್ವಾತಂತ್ರ್ಯ’ ಎಂಬ ಹಾಡುಗಳನ್ನು ಹೇಳುತ್ತಿದ್ದರು. ಅಷ್ಟೇ ಅಲ್ಲ ಹಾಡುತ್ತಲೇ ನಮ್ಮನ್ನು ಹುರಿದುಂಬಿಸಿ, ದಲಿತ ಸಮಾವೇಶಕ್ಕೆ ಎಲ್ಲರೂ ಲಾರಿ ಹತ್ತಿ ಮೈಸೂರಿಗೆ ಬನ್ನಿ ಎಂದು ಹೇಳುತ್ತಿದ್ದರು. ‘ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಕೊಟ್ಟಿರುವ ಹಕ್ಕು, ಸಮಾನತೆ ಮತ್ತು ಸ್ವಾತಂತ್ರ್ಯದ ಬಗ್ಗೆ ತಿಳಿದುಕೊಳ್ಳಬೇಕು. ಅದಕ್ಕಾಗಿ ನೀವು ಬರಲೇಬೇಕು’ ಎಂದು ಹೇಳುತ್ತಿದ್ದರು.
ಎಲ್ಲಿತ್ತೋ ಧೈರ್ಯ! ಸಮಾವೇಶಕ್ಕೆ ಕೇರಿಯ ಹುಡುಗರೆಲ್ಲ ಲಾರಿ ಏರಿ ಹೋದೆವು. ಅಲ್ಲೇ ಕೂತಿದ್ದವರಲ್ಲೊಬ್ಬರು, ಮಧ್ಯೆ ಗಲಾಟೆ ಆಗಬಹುದು ಎಂದರು. ಸುಮ್ಮನೆ ಹೇಳಿದ್ದೋ ಅಥವಾ ನಿಜಕ್ಕೂ ಗಲಭೆ ನಡೆಯುತ್ತಿತ್ತಾ? ಗೊತ್ತಿಲ್ಲ. ಹೆದರಿದ್ದ ನಾವೆಲ್ಲ ಯಾವ ಕಾರಣಕ್ಕೂ ಲಾರಿಯಿಂದ ಇಳಿಯದೆ, ಒಂದೇ ಭಂಗಿಯಲ್ಲಿ ಕೂತು ಭಾಷಣ ಕೇಳಿದೆವು. ಅ ನಿವಾರ್ಯತೆಗೆ ಕಟ್ಟುಬಿದ್ದು ಭಾಷಣ ಕೇಳಿದೆವು. ಆಗ ತಿಳಿಯಿತು ಅಂಬೇಡ್ಕರ್ ಅವರು ನಮಗಾಗಿ ಏನೊ ಬರೆದಿದ್ದಾರೆ, ಅವರಿಂದ ನಾವು ಶಾಲೆಗೆ ಹೋಗಲು ಕಾರಣವಾಗಿದೆ ಎಂದು.
ಹಾಗೇ ನಮ್ಮ ಕೇರಿಯ ಹಿರಿಯ ಅಣ್ಣಂದಿರು ಆಗಲೇ ಮೈಸೂರು, ಬೆಂಗಳೂರುಗಳಲ್ಲಿ ಕಾಲೇಜು ಕಲಿಯಲು ಹೋಗಿದ್ದರು. ತಮ್ಮ ಹಾಸ್ಟೆಲ್ಗೆ ಬಂದು ಚಳವಳಿ ನಾಯಕರು ಅಂಬೇಡ್ಕರ್ ರ ಬಗ್ಗೆ ಮಾಡುತ್ತಿದ್ದ ಭಾಷಣಗಳನ್ನು ಅವರು ಊರಿಗೆ ಬಂದಾಗ ಸಣ್ಣವರಾಗಿದ್ದ ನಮಗೂ ವಿವರಿಸುತ್ತಿದ್ದರು. ಆಗ ನನಗೆ ಅನಿಸುತ್ತಿದ್ದದ್ದು, ‘ನಾವು ಮನುಷ್ಯರಲ್ವಾ? ಮತ್ತೆ ನಮ್ಮ ಕೇರಿ ಯಾಕೆ ಊರಾಚೆ ಇದೆ?’ ಎಂಬಿತ್ಯಾದಿ ಪ್ರಶ್ನೆಗಳು ತುಂಬಾ ಕಾಡುತ್ತಿದ್ದವು.
ಅಂಬೇಡ್ಕರ್ ಬಗ್ಗೆ ಕುರಿತು ಇನ್ನೂ ಹೆಚ್ಚು ತಿಳಿಯಬೇಕೆನಿಸಿತು. ಗ್ರಂಥಾಲಯಕ್ಕೆ ಹೋಗಲು ಆರಂಭಿಸಿದೆ. ಆಗ ಅಂಬೇಡ್ಕರ್ ಅವರ ಬಗ್ಗೆ ಇರುವ ಸಣ್ಣ ಸಣ್ಣ ಪುಸ್ತಕಗಳನ್ನು ಓದತೊಡಗಿದೆ. ಹೀಗೆ ಅಂಬೇಡ್ಕರ್ ಅವರು ನನ್ನೊಳಗೆ ಪ್ರಶ್ನೆಯ ಮೂಲಕವೇ ಪ್ರವೇಶ ಪಡೆದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…