ಹಾಡು ಪಾಡು

ಬರೆದವವನಿಗೆ ಬಹುಮಾನದ ಹಂಗು ಬೇಕೆ?

ನಾನು ಸಣ್ಣವನಿದ್ದಾಗ ನಮ್ಮ ಅಪ್ಪನೂ ಹಲವಾರು ಕತೆಗಳನ್ನು ಹೇಳುತ್ತಿದ್ದ. ಅವೆಲ್ಲವೂ ಒಂದೊಂದು ಬೇರೆ ಬೇರೆ ರೀತಿಯ ಕತೆಗಳು. ನನ್ನ ಅಪ್ಪನಿಗೆ ಪ್ರಶಸ್ತಿ ಬಿಡಿ, ನನ್ನಪ್ಪ ಕತೆ ಹೇಳ್ತಾನೆ ಅಂತಾನೂ ನಮ್ಮ ಬೀದಿಯ ಅಕ್ಕಪಕ್ಕದ ಮನೆಯವರಿಗೂ ಗೊತ್ತಿರಲಿಲ್ಲ. ಅವನ ವಾರಗೆಯವರಿಗೆ ಗೊತ್ತಿರಬಹುದು. ಆದರೆ ನನ್ನಪ್ಪ ಮನಸಾದಾಗೆಲ್ಲ ಕತೆ ಹೇಳುತ್ತಲೇ ಇರುತ್ತಿದ್ದ. ಅದೇನೋ ನಾನೀಗ ಕತೆಯನ್ನು ಬರೆಯುತ್ತೇನೆ. ಕತೆಯ ಅಂದ ಚೆಂದದ ಬಗೆಗೆ ಅಷ್ಟೇನೂ ಗೊತ್ತಿಲ್ಲ.

ಅನಿಸಿದ್ದೋ, ನೋಡಿದ್ದೋ, ಅನುಭವಕ್ಕೆ ದಕ್ಕಿದ್ದನ್ನೋ ಕುರಿತು ಬರಿತೀನಿ. ಒಂದೆರಡು ಪತ್ರಿಕೆಗಳಲ್ಲೂ ಪ್ರಕಟವಾಗಿವೆ. ಆದರೆ ಪ್ರಶಸ್ತಿ ಪಡೆದ ಕತೆ ಅಂತ ಹಣೆಪಟ್ಟಿ ಹೊತ್ತಿರುವ ಕತೆಯನ್ನು ಓದುತ್ತೇನೆ. ಖಂಡಿತವಾಗಿಯೂ ನನಗೆ ಅವು ಏನೂ ಅನ್ನಿಸದೆ ನಾನೂ ಹಿಂಗೆ ಬರಿತೀನಿ. ವಸ್ತು ವಿಷಯ ಬೇರೆ ಇರಬಹುದು ಅನ್ನಿಸುತ್ತದೆ. ಯಾವ ಮಾನದಂಡದ ಆಧಾರದಲ್ಲಿ ಪ್ರಶಸ್ತಿ ಘೋಷಿಸಿರಬಹುದು ಗೊತ್ತಿಲ್ಲ. ಪ್ರಶಸ್ತಿಯ ಹಿಂದಿರುವ ಕಾರಣಗಳೇನಿರಬಹುದೆಂಬ ಕುತೂಹಲವಷ್ಟೇ. ಅದು ನನ್ನ ಮಿತಿಯೂ ಇರಬಹುದೇನೋ ಅದು ನನಗೆ ತಿಳಿದಿಲ್ಲ. ನಾನು ನನ್ನ ಒಂದು ಕತೆಯನ್ನು ಪ್ರಕಟಿಸಬಹುದೆಂದು ಮಾಸಪತ್ರಿಕೆಯೊಂದಕ್ಕೆ ಕಳಿಸಿದ್ದೆ. ಒಂದೂವರೆ ತಿಂಗಳ ನಂತರ ನಾನು ‘ನನ್ನ ಕತೆ ಪ್ರಕಟವಾಗುತ್ತದೋ , ಇಲ್ಲವೋ ಈ ಬಗ್ಗೆ ನೀವು ಏನೂ ಹೇಳಿಲ್ಲ’ ಎಂದು ಕೇಳಿದ ಮೂರು ದಿನಗಳ ನಂತರ ‘ನಿಮ್ಮ ಕತೆಯನ್ನು ಬಳಸಿಕೊಳ್ಳಲು ಸಾಧ್ಯವಿಲ್ಲ’ ಎಂದರು.

ಕತೆ ಚೆನ್ನಾಗಿಲ್ಲದಿರಬಹುದು ಬಿಡಿ. ಆದರೆ ಪ್ರಶಸ್ತಿ ಪಡೆದ ಕತೆಗಳು ಎಂದು ಲೇಬಲ್ ಹೊತ್ತ ಕತೆಗಳು ನನಗೆ ಅರ್ಥವೂ ಆಗದೆ ಏನನ್ನೂ ‘ಉಕ್ಕಿಸಿಲ್ಲ’. ಇದಕ್ಕೆ ಬಹುಮಾನ ಕೊಡುವು ದಕ್ಕಿಂತ ಮೆಚ್ಚುಗೆ ಗಳಿಸಿದ ಕತೆಯೇ ಚೆನ್ನಾಗಿದೆ ಎಂದೆನಿಸಿದ್ದೂ ಇದೆ. ಕೆಲವು ಸಲ ಸಾಪ್ತಾಹಿಕ ಪುರವಣಿಯಲ್ಲಿ ಪ್ರಕಟವಾದ ಕತೆಯೇ ನನ್ನನ್ನು ಆವರಿಸಿ, ಅಲುಗಾಡಿಸಿ, ಇದಕ್ಕೆ ಬಹುಮಾನ ಬರಲೇಬೇಕಿತ್ತು ಅನ್ನಿಸಿದ್ದಿದೆ. ಇವೆಲ್ಲವೂ ನನ್ನ ಲೆಕ್ಕಾಚಾರದ ಮಾತುಗಳು. ಆದರೆ ಪ್ರಶಸ್ತಿ ಪಡೆದ ಕತೆ, ಕವಿತೆ, ಲೇಖನ ಅಂತ ಹಣೆ ಪಟ್ಟಿ ಇರುವ ಕತೆಯೊಂದನ್ನು ಓದಿದ ಗ್ರಾಮೀಣ ಪ್ರದೇಶದ ಅಥವಾ ನಗರದ ಪ್ರದೇಶದ ಬರಹಗಾರರು ಪ್ರಶಸ್ತಿ ಬರಲಿಲ್ಲ ಎಂದು ತಮಗೆ ಬರೆಯು ವುದೇ ಗೊತ್ತಿಲ್ಲವೇನೋ ಎಂದು, ತಿಳಿದು ಬರೆಯದೇ ಉಳಿದುಬಿಟ್ಟರೇ ಏನು ಗತಿ? ಹಾಗೆಂದು ಪ್ರಶಸ್ತಿ ಪಡೆದವರ, ನೀಡುವವರ ವಿರೋಽ ನಾನಲ್ಲ. ಅದು ಹೇಗೆ ಒಬ್ಬನೇ ಕತೆಗಾರನ ಕತೆ, ಕವಿತೆಗೆ ಪದೇ ಪದೇ ಪ್ರಶಸ್ತಿಗಳು ಸಿಗುತ್ತವೆ ಎಂಬ ಸಂದೇಹ ಇಂದಿನ ದಿನಮಾನದಲ್ಲಿ ಎಲ್ಲರನ್ನೂ ಕಾಡುತ್ತಿದೆ. ಯಾವ ಮಾನದಂಡದ ಮೇಲೆ ಪ್ರಶಸ್ತಿ ನೀಡಲಾಗುತ್ತದೆ ಎಂದು ನನಗೆ ವಿವರಣೆ ಬೇಕಿದೆ. ಅದರ ಹೊರತು, ನನಗಂತೂ ಪ್ರಶಸ್ತಿ ಬೇಕಾಗಿಲ್ಲ. ಆ ಆಸೆಯೂ ಇಲ್ಲ. ನೂರಾರು ಕತೆ ಹೇಳಿದ ನನ್ನ ತಾತ ಪಳ್ಳಿನಂಜಯ್ಯ, ನನ್ನ ಅಪ್ಪ ಮಹದೇವಯ್ಯ ಇವರಿಗೇ ಪ್ರಶಸ್ತಿ ಸಿಕ್ಕಿಲ್ಲದ ಮೇಲೆ ನಾಲ್ಕು ಕತೆ ಬರೆದ ನಾನು ಎಷ್ಟರವನು?

– ಮಧುಕರ ಮಳವಳ್ಳಿ

madhukaramalavalli@gmail.com

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿ ; ಜಮೀನಿನ ಶೀಟಿನ ಮನೆ, ಟೊಮೆಟೊ ಬೆಳೆ ನಾಶ

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…

20 mins ago

ಏಪ್ರಿಲ್.‌11ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಜನತಾ ಸಮಾವೇಶ

ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…

1 hour ago

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು

ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…

2 hours ago

ತಮಿಳುನಾಡು ಚುನಾವಣೆ: ಎರಡು ಕ್ಷೇತ್ರಗಳಿಂದ ನಟ ವಿಜಯ್‌ ಸ್ಪರ್ಧೆ

ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್‌ ಘೋಷಣೆ ಮಾಡಿದ್ದಾರೆ. ಚೆನ್ನೈನ…

2 hours ago

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್:‌ ಸಚಿವ ಮುನಿಯಪ್ಪ

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…

2 hours ago

ಹನೂರು| ಕಾಡಾನೆ ದಾಳಿ: ಆಟೋ ಜಖಂ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…

3 hours ago