ಹಾಡು ಪಾಡು

ಉಗಾದಿಯ ಮಧ್ಯಾಹ್ನ ಮಂಟೇಸ್ವಾಮಿಯವರ ಐಭೋಗ

ದಿಲೀಪ್ ಎನ್ಕೆ

ಮಂಟೇಸ್ವಾಮಿ ತಾವು ಜಂಗಮರಾಗಿ ಅಲೆದಾಡಿದ ಕಡೆಗಳಲ್ಲೆಲ್ಲ ಅರಿವು ಎಂಬ ಪರಂಜ್ಯೋತಿಯನ್ನು ಬೆಳಗುತ್ತಾ ನಡೆದವರು. ಧರೆಗೆ ದೊಡ್ಡವರು, ಕಂಡಾಯದ ಒಡೆಯ, ನೀಲಗಾರರ ಆದಿಗುರು. ಮೇಲಾಗಿ ಅಲ್ಲಮಪ್ರಭುವಿನ ಉತ್ತರಾಧಿಕಾರಿಯಾಗಿ ಬಂದಂತಹ ಶ್ರೇಷ್ಠ ಕಾಲಜ್ಞಾನಿ. ಈ ಯುಗಾದಿ ಹಬ್ಬಕ್ಕೂ ಈ ಮಂಟೇಸ್ವಾಮಿಯವರಿಗೂ ಏನು ಸಂಬಂಧ? ಸಂಬಂಧ ಇದೆ. ಇದೇ ಯುಗಾದಿ ಹಬ್ಬದ ದಿನದಂದು ಸರಿಸುಮಾರು ಸಂಜೆಯಷ್ಟರ ಹೊತ್ತಿಗೆ ಈ ಮಂಟೇಸ್ವಾಮಿಯವರ ಐಭೋಗದ ಹೂವು ಹೊಂಬಾಳೆಯಿಂದ ಅಲಂಕೃತಗೊಂಡ ಕಂಡಾಯವು ನೀಲಗಾರರು, ದೇವರ ಗುಡ್ಡರು, ಮಂಟೇಸ್ವಾಮಿ – ಸಿದ್ದಪ್ಪಾಜಿ ಒಕ್ಕಲಿನವರ ಮುಂದಾಳುತನದಲ್ಲಿ ಊರುಕೇರಿಯನ್ನು ಪ್ರವೇಶಿಸುತ್ತದೆ.

ಅದುವೇ ನಮಗೆ ಯುಗಾದಿ. ಅದುವೇ ನಮ್ಮ ಯುಗಾದಿ ಹಬ್ಬದ ಮಹಿಮೆ. ಈ ಮೇಲೆ ಹೇಳಿದ ನೀಲಗಾರರು, ದೇವರಗುಡ್ಡರು, ಮಂಟೇಸ್ವಾಮಿ – ಸಿದ್ದಪ್ಪಾಜಿ ಒಕ್ಕಲಿನವರು ಹತ್ತು ಹನ್ನೆರಡು ದಿನಗಳ ಹಿಂದೆಯೇ ಕಪ್ಪಡಿ ಶ್ರೀ ಕ್ಷೇತ್ರಕ್ಕೆ ಭೇಟಿಕೊಟ್ಟು, ಅಲ್ಲಿನ ಕಡೇ ದಿನದ ‘ಮಾದಲಿ ಸೇವೆ’ಯನ್ನೂ ನಂತರದ ದಿನದ ರಾಚಪ್ಪಾಜಿ ಚೆನ್ನಾಜಮ್ಮರ ಗದ್ದುಗೆಗೆ ಮಾಡುವ ಎಳನೀರಿನ ಮಜ್ಜನವನ್ನೂ ಮುಗಿಸಿ ಹೊರಟಂತಹವರು. ಅಲ್ಲಿಂದ ಹೊರಟು, ಮುಟ್ಟನಹಳ್ಳಿಯಲ್ಲಿರುವ ದೊಡ್ಡಮ್ಮತಾಯಿ ತೋಪಿನಲ್ಲಿ ಸೇರಿ ಬೊಪ್ಪೇಗೌಡನಪುರದ ಮಂಟೇಸ್ವಾಮಿಯ ಮಠ ವನ್ನು ಪ್ರವೇಶಿಸಿ, ಅಲ್ಲಿ ‘ಕಟ್ನಳ್ಕ ಬ್ಯಾಳ’ ಪ್ರಸಾದವನ್ನು ಸ್ವೀಕರಿಸಿ ಹೊರಟು ಬಂದಂಥವರು. ಅಲ್ಲಿಂದ ತಮ್ಮ ತಮ್ಮ ಊರುಗಳ ದಾರಿ ಹಿಡಿದು ಬಂದು, ಊರಿನ ಹೊರಭಾಗದಲ್ಲಿ ಅಲ್ಲಲ್ಲಿ ತಂಗಿದ್ದು ಯುಗಾದಿಯ ದಿನವಾದ ಇಂದು ಕಾವೇರಿ ಪವಿತ್ರ ಜಲದಲ್ಲಿ ಮಿಂದುಟ್ಟು, ಕಂಡಾಯವನ್ನು ಶುಚಿಗೊಳಿಸಿ ಪೂಜೆ ಪುನಸ್ಕಾರಗಳನ್ನು ನೆರವೇರಿಸಿ, ಆಮೇಲೆ ಊರನ್ನು ಪ್ರವೇಶಿಸುತ್ತಾರೆ.

ಇವರು ಈ ಕೈಂಕರ್ಯವನ್ನೆಲ್ಲ ಮುಗಿಸಿ ಯುಗಾದಿಯ ದಿನದಂದು ಊರು-ಕೇರಿಯನ್ನು ಪ್ರವೇಶಿಸುವ ಹೊತ್ತಿಗೆ ಹೆಚ್ಚೂಕಡಿಮೆ ಮಧ್ಯಾಹ್ನ ಕಳೆದಿರುತ್ತದೆ. ಕಂಡಾಯದ ಉತ್ಸವದೊಂದಿಗೆ ಬರುವ ಜನರ ಪಾದಗಳು ತಣ್ಣಗಾಗಲಿ ಎಂದು ರಸ್ತೆ ರಸ್ತೆಗಳಲ್ಲಿ ಹಾಕಿದ ಮಣ್ಣು ನೀರಿನಿಂದಾಗಿ ಎದ್ದು, ತನ್ನ ಘಮಲಿಂದ ಮತ್ತೇರಿಸುತ್ತಿರುತ್ತದೆ. ಮನೆಮನೆಯಲ್ಲೆಲ್ಲಾ ತಳಿರು-ತೋರಣಗಳು, ಮನೆಯ ಮುಂದೆಲ್ಲಾ ವಯ್ಯಾರದ ರಂಗೋಲಿಗಳು, ಕತ್ತೆತ್ತಿದ್ದರೆ ಜಿಲಿಜಿಲಿ ಬಣ್ಣದ ಪೇಪರ್‌ಗಳ ದಾಳಗಳು, ಅನುಕೂಲಕ್ಕೆ ತಕ್ಕಂತೆ ಹೊಸ ಬಟ್ಟೆ ಧರಿಸಿ ಕಿಲುಗುಟ್ಟುವ ಮಕ್ಕ ಮರಿಗಳು. ಅಲ್ಲಲ್ಲಿ ನವವಧುವಿನಂತೆ ಸಿಂಗಾರಗೊಂಡ ಹೊನ್ನೇರುಗಳು, ಎತ್ತುಗಳಿಗೆ ಬಳಿದ ಬಣ್ಣಗಳು, ಕೊಂಬಿನಲ್ಲಿ ರಾರಾಜಿಸುವ ಕುಚ್ಚುಗಳು ಗುನ್ನಂಪಟಗಳು ಬರುವ ಭಕ್ತಾದಿಗಳು ದಣಿವಾರಿಸಿಕೊಳ್ಳಲು ಮನೆ ಮನೆಗಳ ಜಗುಲಿಯ ಮೇಲೆ ಪಾನಕ, ಶರಬತ್ತು, ಕೋಸಂಬರಿ, ಬೆಲ್ಲದ ಅನ್ನ, ಮೊಸರನ್ನದ ಅಂಡೆ, ಗುಂಡಿ, ಕಡಾಯಗಳು ಕಾಯುತ್ತವೆ. ಅದೋ… ವಾಲಗ ಕೇಳುತ್ತಿದೆ.

ಮಂಟೇಸ್ವಾಮಿಯವರ ಐಭೋಗದ ಹೂವು- ಹೊಂಬಾಳೆಯಿಂದ ಅಲಂಕೃತಗೊಂಡ ಕಂಡಾಯವು ನೀಲಗಾರರು, ದೇವರಗುಡ್ಡರು ಭಕ್ತಾದಿಗಳ ಮುಂದಾಳುತನದಲ್ಲಿ ಊರೊಳಕ್ಕೆ ಧಾವಿಸಿತು. ಕಂಡಾಯಕ್ಕೆ ಕೈ ಮುಗಿದು ಅಡ್ಡ ಬೀಳುವವರೆಷ್ಟೋ, ಹಣ್ಣು-ಕಾಯಿ ಮಾಡಿಸುವವರೆಷ್ಟೋ! ಕಂಡಾಯವನ್ನು ಹೊತ್ತವರು ನಮ್ಮನ್ನು ದಾಟಿದರೆ ಕಪ್ಪಡಿ, ಬೊಪ್ಪಣಪುರಕ್ಕೇ ಹೋಗಿ ಬಂದಂತೆ ಎಂದು ದಾರಿಗುಂಟ ಮಗ್ಗುಲಲ್ಲಿ ಮಲಗುವ ಮಕ್ಕ ಮರಿಗಳು, ಯಮ್ಕಗಳು, ಗಂಡಸರು… ಆ ವಾಲಗದ ತಲೆದೂಗಿಸುವ ಸದ್ದಿಗೆ ಥರಾವರಿ ಹೆಜ್ಜೆಯ ಮಾರಿಕುಣಿತ ಕುಣೀತಾ ಹೆಣ್ಣುಗಳ ಕಣ್ಣು ಸೆಳೆಯಲೆತ್ನಿಸುವ ಪೋರರು, ನಾಚಿಕೆಯಿಂದಲೇ ವಯ್ಯಾರ ಮಾಡುವ ಪೋರೀರು ಯುಗಾದಿಯ ದಿನ ಊರುಕೇರಿ ಎಲ್ಲವೂ ಫಳ್ ಫಳ್ ಫಳಾರ್ ಎನ್ನುತ್ತಿರುತ್ತದೆ.

” ಇಂದು ಅಪರಾಹ್ನದ ಹೊತ್ತು ಮಂಟೇಸ್ವಾಮಿ ಯವರ ಕಂಡಾಯವು ಊರುಕೇರಿಯನ್ನು ಪ್ರವೇಶಿಸುತ್ತದೆ. ಇದುವೇ ನಮಗೆ ಯುಗಾದಿ” 

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

13 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

13 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

13 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

14 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

15 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

15 hours ago