ಹಾಡು ಪಾಡು

ಜಾತಿಬೇಲಿಯ ಕಳಚಿಬಿಡುವ ಮಾರಿಹಬ್ಬಗಳು

ಅಜಯ್ ಕುಮಾರ್ ಎಂ.ಗುಂಬಳ್ಳಿ

ಮಾರಿಹಬ್ಬವೆಂದರೆ ಎಲ್ಲಾ ಕೋಮಿನ ಜನ ಸೇರಿ ನಡೆಸುತ್ತಾರೆ. ಅವರವರೇ ದೇವರ ಕೈಂಕರ್ಯಗಳನ್ನು ವಿಭಾಗಿಸಿಕೊಂಡು ಹಬ್ಬ ಮಾಡುತ್ತಾರೆ

ಈಗ ಚಾಮರಾಜನಗರದ ಊರುಗಳಲ್ಲಿ ಹಬ್ಬಗಳ ಸುಗ್ಗಿ ಕಾಲ. ಸ್ಥಳೀಯ ದೇವರನ್ನು ಪೂಜಿಸುವ ಅಪಾರಸಾಂಸ್ಕ ತಿಕ ಆಚರಣೆಗಳಿವೆ. ಕೆಲವು ಊರುಗಳಲ್ಲಿ ಕುರುಬನ ಕಟ್ಟೆ ಕಂಡಾಯ ತರಿಸಿ ಹಬ್ಬ ಮಾಡುತ್ತಾರೆ.

ಕೊಂಡೋತ್ಸವ ಸಾಮಾನ್ಯವಾಗಿ ಇದ್ದೇ ಇದೆ. ಕೆಲವರು ಸಿಹಿ ಊಟ, ಮಾಂಸದ ಊಟ, ಕೆಲವು ಕಡೆ ಎರಡನ್ನೂ ಮಾಡಿ ನೆಂಟರಿಷ್ಟರಿಗೆ ಬಡಿಸುತ್ತಾರೆ. ಕುರಿ, ಕೋಳಿ, ಕೋಣ, ಆಡು, ದನದ ಮಾಂಸವೂ ದೇವರಿಗೆ ನೈವೇದ್ಯವಾಗಿ ಸ್ವೀಕರಿಸಲ್ಪಡುತ್ತದೆ. ಮಾರೀರ ಗಂಡ ಎನಿಸಿರುವ ಶ್ರೀ ಮಂಟೇ ಸ್ವಾಮಿಗೆ ಭಕ್ತರು ಇಟ್ಟ ಯಾವುದೇ ಬಗೆಯ ಆಹಾರ ನೈವೇದ್ಯ ಆಗುತ್ತದೆ. ಮೊದಲೆಲ್ಲ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತಾದಿಗಳೇ ಬುತ್ತಿ – ಬಾಡು ಕಟ್ಟಿಕೊಂಡು ಹೋಗುತ್ತಿದ್ದರಂತೆ. ಊಟಕ್ಕೆ ಯಾವುದೇ ಕಟ್ಟಿಲ್ಲ ಎಂದು ಶ್ರೀ ಮಾದಪ್ಪನೆ ಹೇಳಿದ್ದಾನೆ ಎಂದು ಹಿರಿ ತಲೆಗಳು ಹೇಳಿದ್ದನ್ನು ಕೇಳಿದ್ದೇನೆ.

ಚಾಮರಾಜನಗರ ಜಿಲ್ಲೆಯ ಹೆಚ್ಚಿನ ಊರುಗಳಲ್ಲಿ ಯಾವುದೇ ಹಬ್ಬಕ್ಕೆ ಮಾಂಸ ದಡುಗೆ ಕಡ್ಡಾಯ. ಜಿಲ್ಲೆಯಲ್ಲಿ ನೀಲಗಾರರು, ಬಿಳಿಗಿರಿರಂಗನ ದಾಸಯ್ಯನವರು, ಮಾದಪ್ಪನ ಗುಡ್ಡರು, ಪಾರ್ವತಿ ಗುಡ್ಡರು ಅಂತ ಇದ್ದಾರೆ. ಮಂಟೇಸ್ವಾಮಿ ಮತ್ತು ಬಿಳಿಗಿರಿರಂಗಯ್ಯನಿಗೆ ಎಡೆಗೆ ಮಾಂಸ ಇಡಲೇಬೇಕು. ಹೆಂಡ ಬಾಡು, ಭಂಗಿಸೊಪ್ಪು ಪ್ರಿಯ ದೇವರೇ ಇಲ್ಲಿರುವ ಜನರ ಒಕ್ಕಲು ಪಡೆದಿರುವುದು. ಶಿವರಾತ್ರಿಗೆ, ಯುಗಾದಿಗೆ ಮಾತ್ರ ಶಾಖಾಹಾರಿ ಎಡೆ ಸಿದ್ಧವಾಗುತ್ತದೆ. ಅದು ಬಿಟ್ಟರೆ ಗೌರಿ ಹಬ್ಬದ ಹಿಂದಿನ ದಿನವೂ ಇಲ್ಲಿ ಮಾಂಸದೂಟವೇ. ಇಷ್ಟೆಲ್ಲ ಇದ್ದರೂ ಜನರು ಎಂದೂ ಶಿಸ್ತು ತಪ್ಪಿಲ್ಲ.

ಜನಪದದ ಬೇರು ಇರುವುದರಿಂದ ಆಚರಣೆಗಳಿಗೆ ಒಂದು ಅರ್ಥ ಇದೆ. ವೈಜ್ಞಾನಿಕಕಾರಣವೂ ಇದೆ. ಕೆಲವು ಮೂಢ ನಂಬಿಕೆಗಳು ಸಹ ಇವೆ. ಹಬ್ಬವೆಂದರೆ ಎಲ್ಲಾ ಕೋಮಿನ ಜನ ಸೇರಿ ನಡೆಸುತ್ತಾರೆ. ಅವರವರೇ ದೇವರ ಕೈಂಕರ್ಯಗಳನ್ನು ವಿಭಾಗಿಸಿ ಕೊಂಡು ಹಬ್ಬ ಮಾಡುತ್ತಾರೆ. ಜಾತ್ರೆಗೆ ಸೌದೆ ತರುವುದರಿಂದ ಹಿಡಿದು ಬರುವ ಭಕ್ತಾದಿಗಳಿಗೆ ಪ್ರಸಾದ ತಯಾರಿಸುವವರೆಗೆ ಕೆಲಸಗಳು ಹಂಚಿಕೆಯಾಗುತ್ತವೆ.

‘ಮಾರಿಹಬ್ಬ’ ಸಾಮಾನ್ಯವಾಗಿ ಎಲ್ಲ ಊರುಗಳಲ್ಲಿಯೂ ನಡೆಯುತ್ತದೆ. ಊರನ್ನು ಕಾಯಲು ಇರುವ ದೇವಿಯೇ ಮಾರಮ್ಮ. ಮಂಟೇಸ್ವಾಮಿ ಕತೆಯಲ್ಲಿ ಮಾರೀ ದೇವತೆಗಳ ಬಗ್ಗೆ ಸಾಕಷ್ಟು ಉಲ್ಲೇಖದ ಜೊತೆಗೆ ಆ ದೇವತೆಗಳಿಗೆ ಮಂಟೇಸ್ವಾಮಿ ‘ಹಬ್ಬವನ್ನು ಮಾಡಿಸಿಕೊ ಡುತ್ತೇನೆ’ ಎಂದು ಆಶೀರ್ವಾದ ಮಾಡಿದ್ದಾರೆ. ಅದಕ್ಕೆ ಮಂಟೇಸ್ವಾಮಿಗೆ ‘ಮಾರೀರ ಗಂಡನಾದೆ, ಮನೆಮನೆಗು ದೇವರಾದೆ’ ಎಂದು ಕರೆಯುವರು. ಜಾನ ಪದದ ಒಂದು ಸಾಲಿನಲ್ಲಿ ಮಂಟೇಸ್ವಾಮಿ ‘ನಮಗೆ ಜಾತಿಭೇದ ಇಲ್ಲಾ ಕಾಣೋ, ಆದಿಯೊಳಗಲ ಜ್ಯೋತಿ, ಬೀದಿಯೊಳಗಲ ಜ್ಯೋತಿ, ಹೊನ್ನಯ್ಯನ ಮನೆಯೊಳಗು ಜ್ಯೋತಿ, ಚೆನ್ನಯ್ಯನ ಮನೆಯೊಳಗು ಜ್ಯೋತಿ’ ಎಂದು ನುಡಿಯುತ್ತಾರೆ. ಜಿಲ್ಲೆಯಲ್ಲಿ ಎಲ್ಲಾ ಜಾತಿಗಳ ಜನರು ಮಂಟೇಸ್ವಾಮಿ, ಮಾದೇಶ್ವರ, ಬಿಳಿಗಿರಿರಂಗಯ್ಯ, ನಂಜುಂಡೇ ಶ್ವರ ದೇವರುಗಳನ್ನು ಪೂಜಿಸುವುದಲ್ಲದೇ ಸಾಂಸ್ಕ ತಿಕ ಆಚರಣೆಯಲ್ಲಿ ಸಾಮ್ಯತೆ ಹೊಂದಿದ್ದಾರೆ. ಹಬ್ಬಗಳನ್ನು ಒಟ್ಟಿಗೆ ಮಾಡುತ್ತಾರೆ. ಕುರುಬನ ಕಟ್ಟೆ ಕಂಡಾಯ ಎಲ್ಲ ಜನರ ಮನೆಗಳಿಗೂ ಧಾರಾಳವಾಗಿ ನುಗ್ಗಿ ಬರುತ್ತದೆ. ಆಗ ಯಾರೊಬ್ಬರೂ ಯಾರನ್ನೂ ಜಾತಿಗೀತಿ ಕೇಳುವುದಿಲ್ಲ. ಉಳಿದಂತೆ ಮಾಮೂಲಿ ದಿನಗಳಲ್ಲಿ ಜಾತಿ ಬೇಲಿ ಜೀವಂತವಿರುತ್ತದೆ. ಮಂಟೇಸ್ವಾಮಿ ಹೇಳಿದಂತೆ ಜಾತಿಭೇದ ಅಳಿದರೆ ಇನ್ನೂ ಸೊಗಸು. ಏನೇ ಆಗಲಿ ಇಲ್ಲಿನ ಹಬ್ಬಗಳೇ ಒಂದು ಬಗೆಯ ವಿಶೇಷತೆ ಹೊಂದಿವೆ ಎಂದರೆ ತಪ್ಪಾಗುವುದಿಲ್ಲ.

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

1 hour ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

1 hour ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago