ಹಾಡು ಪಾಡು

ರಾಗಿ ಒಕ್ಕಣೆ ಮತ್ತು ಬರ್ಲು ಪೂಜೆ

• ಚೇತನ್ ಎಸ್.ಪೊನ್ನಾಚಿ

ರಾಗಿ ಒಕ್ಕಣೆಯ ಕಾಲ ಬಂತೆಂದರೆ ಸಾಕು ನಮಗೆ ಎಲ್ಲಿಲ್ಲದ ಸಂಭ್ರಮ. ಮನೆಯವರೆಲ್ಲ ಒಕ್ಕಣೆ ಕೆಲಸದಲ್ಲಿ ಮಗ್ನರಾಗಿರುತ್ತಿದ್ದರಿಂದ ಶಾಲೆಗೆ ಹೋಗುತ್ತಿದ್ದುದ್ದು… ತಪ್ಪಿಸಿಕೊಳ್ಳುತ್ತಿದ್ದರ ಕಡೆಗಿನ ಗಮನ ಸ್ವಲ್ಪ ಕಡಿಮೆ ಇರೋದು. ನನಗೋ ಎಲ್ಲಿಲ್ಲದ ಸಂಭ್ರಮ… ಸಡಗರ… ಶಾಲೆ ತಪ್ಪಿಸಿಕೊಳ್ಳುವುದಕ್ಕೆ ಏನಾದರೂ ಮಾಡಬೇಕಲ್ಲ ಅಂದುಕೊಂಡು ಆ ದಿನ ರಾತ್ರಿಯಿಂದಲೇ ಜ್ವರ ಬಂದವನಂತೆ ಹೋಗಿ ಒಲೆ ಮುಂದೆ ಸಪ್ಪಗೆ ಕುಳಿತುಕೊಳ್ಳುವುದು… ಮಲಗುವುದು… ಮುಲುಗುವುದು… ಮಾಡುತ್ತಿದ್ದೆ.

ಬೆಳಿಗ್ಗೆ ನಮ್ಮ ಅವ್ವ ಬಂದವಳೆ ಜ್ವರ ಏನಾದರೂ ಬಂದಿರಬಹುದೆನೋ ಅಂತ ಕುತ್ತಿಗೆ ಹಣೆಯನ್ನೆಲ್ಲ ಮುಟ್ಟಿ ನೋಡಿದಳಾದರೂ ವ್ಯತ್ಯಾಸ ಕಾಣಿಸಲಿಲ್ಲ.
ಮೈ ಬಿಸಿ ಇಲ್ಲ ಆದರೂ ಸಪ್ಪಗಿದ್ದಾನಲ್ಲ ಏಕೆ..? “ಏನನ್ನಾದರೂ ನೋಡಿ ಅಂಜಿಕೊಂಡೇನೋ’ ಅಂತ ಕೇಳಿದರು,
‘ಇಲ್ಲ’ ಅಂದೆ.
ಎಲ್ಲಾದರೂ ಬಿದ್ದ ಅಂತ ಕೇಳಿದರು,
‘ಇಲ್ಲ’ ಅಂದೆ.
ಯಾಕೋ..? ಏನೋ..? ಅನ್ನುವ
ಗೊಂದಲದಲ್ಲಿಯೇ ಒಂದು ಕಬ್ಬಿಣದ ಗುಳವನ್ನು ಒಲೆಗೆ ಹಾಕಿ ಅದು ಚೆನ್ನಾಗಿ ಕಾಯುತ್ತಿದ್ದಂತೆ ತೆಗೆದುಕೊಂಡು ಬಂದು ನನಗೆ ದೃಷ್ಟಿ ತೆಗೆದು ಅದನ್ನು ತಟ್ಟೆಯಲ್ಲಿಟ್ಟು ನೀರಾಕುತ್ತಿದ್ದಂತೆ ಅದು ಜೋರಾಗಿ ಸೊ‌.. ಸೊರ್.. ಅಂತ ಸದ್ದಾಗುತ್ತಿರುವುದನ್ನು ಕಂಡು ಯಾರದ್ದೋ ಕಣ್ಣಿನ ದೃಷ್ಟಿ ಆಗಿದೆ ನನ್ನ ಮಗಿಗೆ ಅಂತೇಳಿ ಆ ಗುಳ ಕಾಯಿಸಿದ ನೀರನ್ನು ಕುಡಿಸಿ ಇವತ್ತು ಇಸ್ಮಲ್ಲಿಗೆ ಹೋಗುವುದು ಬೇಡ, ಕಣಕ್ಕೆ ಬಂದು ಪಾಕೆಯಲ್ಲಿ ಮಲಗಿರು ಅಂದಳು.

ನನಗೋ ನಮ್ಮವ್ವನ ಮಾತು ಕೇಳಿ ಸಾಕ್ಷಾತ್ ಕಬ್ಬಾಳಮ್ಮನೇ ಎದುರು ನಿಂತಿರುವಂತೆ ಭಾಸವಾಗುತ್ತಿತ್ತು.

ಇವೆಲ್ಲ ದೃಶ್ಯ ವೈಭವವನ್ನು ನೋಡುತ್ತಾ… ಕೇಳುತ್ತಾ… ಕೋಣೆಯಲ್ಲಿ ಶಿವಪೂಜೆ ಮಾಡಿಕೊಂಡು ಕುಳಿತಿದ್ದ ತಾತಯ್ಯ;

ಅವನಿಗೆ ಏನಾಗಿದೆ ಅಂತ ನನಗೆ ಸೆಂದಾಗಿ ಗೊತ್ತು, ಅವನು ಎಲ್ಲಿಗೂ ಬರುವುದು ಬೇಡ ಅವನಿಗೆ ಹಿಡಿದಿರುವ ಗಾಳಿಯನ್ನು ಬಿಡಿಸ್ತೀನಿ ಇರಮ್ಮಿ ಅಂತೇಳಿ ಎಮ್ಮೆ ಕೊಟ್ಟಿಗೆಗೆ ಹೋಗಿ ಒಂದು ಬರ್ಲು ತಂದವರೆ…

ನಮಗಂತು ಓದು-ಬರಹ ಇಲ್ಲ. ನಿಮ್ಮಪ್ಪ ಓದಲಿ ಅಂದುಕೊಂಡರೆ ಅವನೂ ಒಂದೆರಡು ವರ್ಷಕ್ಕೆಲ್ಲ ಶಾಲೆಗೆ ಬೆನ್ನು ತೋರಿಸಿಬಿಟ್ಟ. ಈಗ ನೀನೂ ಅದೇ ದಾರಿಯಲ್ಲಿದ್ದೀಯಲ್ಲ. ನೀನು ಮಾಡುತ್ತಿರೋ ನಾಟಕ ಇದು ಅಂತ ನನಗೆ ಗೊತ್ತಾಗುವುದಿಲ್ಲ ಅಂದುಕೊಂಡ್ಯ’ ಅನ್ನುತ್ತಾ ರಸ್ತೆಯುದ್ದಕ್ಕೂ ಬಡಿಯುತ್ತಾ ಶಾಲೆಗಟ್ಟಿ ಬಂದಿದ್ದರು.
Chetanponnachi@gmail.com

andolanait

Recent Posts

ಸರ್ಕಾರಿ ಶಾಲೆ ಉಳಿಸಲು1295 ಕಿ.ಮೀ. ಪಾದಯಾತ್ರೆ

ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…

8 mins ago

ಕಳಾಹೀನವಾಗಿದೆ ರಾಜೀವ್ ನಗರದ ಈ ಉದ್ಯಾನ!

ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…

13 mins ago

ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಕಾಟ

ಹೆಚ್.ಎಸ್. ದಿನೇಶ್‌ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ…

18 mins ago

ಕೊಡಗು ಜಿಲ್ಲೆಯಲ್ಲಿ ಪಡಿತರ ವಿತರಣೆಗೆ ಹತ್ತಾರು ಸಮಸ್ಯೆ

ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…

23 mins ago

3 ದಿನಗಳಲ್ಲಿ ಎಲ್ಲರ ಬಯೋಮೆಟ್ರಿಕ್ ಆಗುತ್ತಾ.?

ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ  ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…

29 mins ago

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

8 hours ago