ಹಾಡು ಪಾಡು

ರಾಗಿ ಒಕ್ಕಣೆ ಮತ್ತು ಬರ್ಲು ಪೂಜೆ

• ಚೇತನ್ ಎಸ್.ಪೊನ್ನಾಚಿ

ರಾಗಿ ಒಕ್ಕಣೆಯ ಕಾಲ ಬಂತೆಂದರೆ ಸಾಕು ನಮಗೆ ಎಲ್ಲಿಲ್ಲದ ಸಂಭ್ರಮ. ಮನೆಯವರೆಲ್ಲ ಒಕ್ಕಣೆ ಕೆಲಸದಲ್ಲಿ ಮಗ್ನರಾಗಿರುತ್ತಿದ್ದರಿಂದ ಶಾಲೆಗೆ ಹೋಗುತ್ತಿದ್ದುದ್ದು… ತಪ್ಪಿಸಿಕೊಳ್ಳುತ್ತಿದ್ದರ ಕಡೆಗಿನ ಗಮನ ಸ್ವಲ್ಪ ಕಡಿಮೆ ಇರೋದು. ನನಗೋ ಎಲ್ಲಿಲ್ಲದ ಸಂಭ್ರಮ… ಸಡಗರ… ಶಾಲೆ ತಪ್ಪಿಸಿಕೊಳ್ಳುವುದಕ್ಕೆ ಏನಾದರೂ ಮಾಡಬೇಕಲ್ಲ ಅಂದುಕೊಂಡು ಆ ದಿನ ರಾತ್ರಿಯಿಂದಲೇ ಜ್ವರ ಬಂದವನಂತೆ ಹೋಗಿ ಒಲೆ ಮುಂದೆ ಸಪ್ಪಗೆ ಕುಳಿತುಕೊಳ್ಳುವುದು… ಮಲಗುವುದು… ಮುಲುಗುವುದು… ಮಾಡುತ್ತಿದ್ದೆ.

ಬೆಳಿಗ್ಗೆ ನಮ್ಮ ಅವ್ವ ಬಂದವಳೆ ಜ್ವರ ಏನಾದರೂ ಬಂದಿರಬಹುದೆನೋ ಅಂತ ಕುತ್ತಿಗೆ ಹಣೆಯನ್ನೆಲ್ಲ ಮುಟ್ಟಿ ನೋಡಿದಳಾದರೂ ವ್ಯತ್ಯಾಸ ಕಾಣಿಸಲಿಲ್ಲ.
ಮೈ ಬಿಸಿ ಇಲ್ಲ ಆದರೂ ಸಪ್ಪಗಿದ್ದಾನಲ್ಲ ಏಕೆ..? “ಏನನ್ನಾದರೂ ನೋಡಿ ಅಂಜಿಕೊಂಡೇನೋ’ ಅಂತ ಕೇಳಿದರು,
‘ಇಲ್ಲ’ ಅಂದೆ.
ಎಲ್ಲಾದರೂ ಬಿದ್ದ ಅಂತ ಕೇಳಿದರು,
‘ಇಲ್ಲ’ ಅಂದೆ.
ಯಾಕೋ..? ಏನೋ..? ಅನ್ನುವ
ಗೊಂದಲದಲ್ಲಿಯೇ ಒಂದು ಕಬ್ಬಿಣದ ಗುಳವನ್ನು ಒಲೆಗೆ ಹಾಕಿ ಅದು ಚೆನ್ನಾಗಿ ಕಾಯುತ್ತಿದ್ದಂತೆ ತೆಗೆದುಕೊಂಡು ಬಂದು ನನಗೆ ದೃಷ್ಟಿ ತೆಗೆದು ಅದನ್ನು ತಟ್ಟೆಯಲ್ಲಿಟ್ಟು ನೀರಾಕುತ್ತಿದ್ದಂತೆ ಅದು ಜೋರಾಗಿ ಸೊ‌.. ಸೊರ್.. ಅಂತ ಸದ್ದಾಗುತ್ತಿರುವುದನ್ನು ಕಂಡು ಯಾರದ್ದೋ ಕಣ್ಣಿನ ದೃಷ್ಟಿ ಆಗಿದೆ ನನ್ನ ಮಗಿಗೆ ಅಂತೇಳಿ ಆ ಗುಳ ಕಾಯಿಸಿದ ನೀರನ್ನು ಕುಡಿಸಿ ಇವತ್ತು ಇಸ್ಮಲ್ಲಿಗೆ ಹೋಗುವುದು ಬೇಡ, ಕಣಕ್ಕೆ ಬಂದು ಪಾಕೆಯಲ್ಲಿ ಮಲಗಿರು ಅಂದಳು.

ನನಗೋ ನಮ್ಮವ್ವನ ಮಾತು ಕೇಳಿ ಸಾಕ್ಷಾತ್ ಕಬ್ಬಾಳಮ್ಮನೇ ಎದುರು ನಿಂತಿರುವಂತೆ ಭಾಸವಾಗುತ್ತಿತ್ತು.

ಇವೆಲ್ಲ ದೃಶ್ಯ ವೈಭವವನ್ನು ನೋಡುತ್ತಾ… ಕೇಳುತ್ತಾ… ಕೋಣೆಯಲ್ಲಿ ಶಿವಪೂಜೆ ಮಾಡಿಕೊಂಡು ಕುಳಿತಿದ್ದ ತಾತಯ್ಯ;

ಅವನಿಗೆ ಏನಾಗಿದೆ ಅಂತ ನನಗೆ ಸೆಂದಾಗಿ ಗೊತ್ತು, ಅವನು ಎಲ್ಲಿಗೂ ಬರುವುದು ಬೇಡ ಅವನಿಗೆ ಹಿಡಿದಿರುವ ಗಾಳಿಯನ್ನು ಬಿಡಿಸ್ತೀನಿ ಇರಮ್ಮಿ ಅಂತೇಳಿ ಎಮ್ಮೆ ಕೊಟ್ಟಿಗೆಗೆ ಹೋಗಿ ಒಂದು ಬರ್ಲು ತಂದವರೆ…

ನಮಗಂತು ಓದು-ಬರಹ ಇಲ್ಲ. ನಿಮ್ಮಪ್ಪ ಓದಲಿ ಅಂದುಕೊಂಡರೆ ಅವನೂ ಒಂದೆರಡು ವರ್ಷಕ್ಕೆಲ್ಲ ಶಾಲೆಗೆ ಬೆನ್ನು ತೋರಿಸಿಬಿಟ್ಟ. ಈಗ ನೀನೂ ಅದೇ ದಾರಿಯಲ್ಲಿದ್ದೀಯಲ್ಲ. ನೀನು ಮಾಡುತ್ತಿರೋ ನಾಟಕ ಇದು ಅಂತ ನನಗೆ ಗೊತ್ತಾಗುವುದಿಲ್ಲ ಅಂದುಕೊಂಡ್ಯ’ ಅನ್ನುತ್ತಾ ರಸ್ತೆಯುದ್ದಕ್ಕೂ ಬಡಿಯುತ್ತಾ ಶಾಲೆಗಟ್ಟಿ ಬಂದಿದ್ದರು.
Chetanponnachi@gmail.com

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

2 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

12 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

16 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

17 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

17 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

21 hours ago