ಹಾಡು ಪಾಡು

ಪುಟ್ಟಮ್ಮಜ್ಜಿ ಹೇಳಿದ ಕಾಡುಸೊಪ್ಪಿನ ಹೆಸರುಗಳು

ಅಜಯ್ ಕುಮಾರ್ ಎಂ ಗುಂಬಳ್ಳಿ

ಕೆರೆ ಕೆಲಸಕ್ಕೆ ಹೋಗಿದ್ದ ಪುಟ್ಟಮ್ಮಜ್ಜಿ ಬರುವಾಗ ಅವಳ ಮಡಿಲು ವಾಲಿಬಾಲ್ ಚೆಂಡಿನಾಕಾರದಲ್ಲಿ ಕಾಣುತ್ತಿದ್ದಕ್ಕೆ ಹಟ್ಟಿ ಮುಂದೆ ಕೂತಿದ್ದ ನಾನು “ಏನಜ್ಜಿ ಅದು” ಅಂದೆ. ನಗಾಡುತ್ತ ಪುಟ್ಟಮ್ಮಜ್ಜಿ “ಬೆರಕೆಸೊಪ್ಪು ಕನ ಬುಡು ನನ್ ಕಂದ. ಕಾಡಿನಿಂದ ಇನ್ಯಾನ್ ತರಕ್ಕಾದು ಈ ಮುದುಕಿ” ಅಂದಳು. ಅವಳ ಮಡಿಲಲ್ಲಿ ತರಹೇವಾರಿ ಸೊಪ್ಪುಗಳಿದ್ದವು. ಬಣ್ಣ ಮಾತ್ರ ಒಂದೆ ಆಗಿದ್ದರೂ ಎಲೆಗಳ ರಚನೆ, ಗಾತ್ರದಲ್ಲಿ ಭಿನ್ನತೆ ಇತ್ತು. ನಾನು ಒಂದನ್ನು ಎತ್ತಿಕೊಂಡು ವಾಸನೆ ಎಳೆದೆ. ಅದರಲ್ಲೂ ವಿಭಿನ್ನತೆ ಇತ್ತು. ನನಗೆ ಆಶ್ಚರ್ಯವಾಗಿ “ಇದನ್ನೆಲ್ಲ ತಿನ್ನಬಹುದ?

“ಅಂತ ಕೇಳಿದೆ. ‘ಅಯ್ ಇದು ಸರಿ ಕನ ಬುಡು, ಇದ್ನೆಲ್ಲ ತಿನ್ನದೆ ಇನ್ಯಾನ್ ಮಾಡಿರು” ಅಂತ ಪುಟ್ಟಮ್ಮಜ್ಜಿ ನಗೆಯಾಡುತ್ತ, ‘ಕೊಮ್ಮ ಸೊಪ್ಪು, ಜವನ ಸೊಪ್ಪು, ಕರಿಕಡ್ಡಿ ಸೊಪ್ಪು, ಚಗ್ತಾ ಸೊಪ್ಪು, ಕಾಡುನುಗ್ಗೆ ಸೊಪ್ಪು, ನಗ್ಗುಲ್ ಸೊಪ್ಪು, ಹಕ್ಕಿಕಲ್ ಸೊಪ್ಪು, ಬೂರನಿಗೆ ಸೊಪ್ಪು’ ಅಂತ ಅಷ್ಟನ್ನು ಎತ್ತಿ ಎತ್ತಿ ತೋರಿಸಿದಳು. ನನಗೆ ಬೆರಗಾಯಿತು. ಅವಳು ಹೇಳಿದ್ದು ನನಗೆ ಅರ್ಥವಾದರೂ ಮತ್ತೆ ಆ ಸೊಪ್ಪುಗಳ ಹೆಸರು ಹೇಳುವುದು ನನಗೆ ಖಂಡಿತ ಸಾಧ್ಯವಿರಲಿಲ್ಲ. ಈಗಷ್ಟೆ ಕೇಳಿದ ಹೆಸರುಗಳು ಗಣಿತದ ಲೆಕ್ಕಗಳಂತೆ ತೋರಿದವು. ಕೊನೆಗೆ ನಾನು “ಇಷ್ಟೊಂದು ಸೊಪ್ಪುಗಳು ನಿಂಗೆ ಹೇಗೆ ಗೊತ್ತಾಗುತ್ತೆ” ಅಂತ ಕೇಳಿದೆ. ಅದಕ್ಕೆ ಪುಟ್ಟಮ್ಮಜ್ಜಿ “ಆಗ ನಾವು ಸೊಪ್ಪು ಸೊದೆನೇ ತಿಂದು ಬದುಕಿರದು. ನಮ್ಗ ಗೊತ್ತಾಗ್ದಾ’‘ ಅನ್ನುತ್ತ ಹೊರಟೇ ಹೋದಳು. ಅನೇಕ ಸಂತೆಗಳಲ್ಲಿ ‘ದಂಟಿನ ಸೊಪ್ಪು, ಮೆಂತೆ ಸೊಪ್ಪು, ಪಾಲಾಕ್ ಸೊಪ್ಪು, ಸಬ್ಸೀಗೆ ಸೊಪ್ಪು’ ಇವುಗಳನ್ನು ನೋಡಿದ್ದ ನನಗೆ ಈ ಸೊಪ್ಪುಗಳ ಹೆಸರುಗಳು ತೀರಾ ಅಪರಿಚಿತವಾದವು. ಅವುಗಳಲ್ಲಿ ಒಂದೆರಡು-ಮೂರು ತರದ ಸೊಪ್ಪುಗಳನ್ನು ಮಾತ್ರ ಅವ್ವ ಉಪ್ಪಿನ ಸಾಂಬಾರು ಮಾಡಿ ಪರಿಚಯಿಸಿದ್ದಳು. ಅದು ಬಿಟ್ಟರೆ ಇನ್ನೆಲ್ಲವೂ ಈಗ ಕೇಳುತ್ತಿರುವ ಹೆಸರುಗಳೇ. ಕೆಲವು ಸೊಪ್ಪುಗಳನ್ನು ಬರಿ ಉಪ್ಪು ಹಾಕಿ ಬೇಯಿಸಿ ತಿನ್ನಬೇಕಾಗಿತ್ತು. ಕೆಲವಕ್ಕೆ ಹೆಸರುಕಾಳು, ಅಲಸಂದೆ ಹಾಕಿದರೆ ಒಳ್ಳೆಯ ರುಚಿ. ಅವ್ವ ಹಾಗೆ “ಜವನ ಸೊಪ್ಪು ಹೆಂಗಸರ ಬಿಳಿಮುಟ್ಟಿನ ಸಮಸ್ಯೆಗೆ ಒಳ್ಳೆಯದು. ಹೊನಗೊನೆ ಸೊಪ್ಪು ಕಣ್ಣಸಿರನ್ನು ನಿವಾರಿಸುತ್ತದೆ. ಒಳಜ್ವರಕ್ಕೆ ಕೈದರ್ಕ ಸೊಪ್ಪು ಔಷಧವಾಗಿದೆ.

ಸೊಪ್ಪಿನ ಉಪ್ಪಿನ ಸಾಂಬಾರಿಗೆ ಒಣ ಮೆಣಸಿನಕಾಯಿಯ ಖಾರವನ್ನು ಹಾಕಿ ಕುಡಿದ್ರೆ ನೆಗಡಿ ಬಿದ್ದು ಓಟ ಕೀಳುತ್ತದೆ. ಬೆಲ್ಗುನ್ಕ ಸೊಪ್ಪು ಕೆಮ್ಮನ್ನು ಓಡಿಸುತ್ತದೆ” ಎನ್ನುತ್ತ ಸೊಪ್ಪು ಸೊದೆ ಮನುಷ್ಯನ ದೇಹಕ್ಕೆ ಒಳ್ಳೆಯದು. ಎಲ್ಲ ಬಗೆಯ ಸಮಸ್ಯೆಗಳಿಗೂ ಒಂದಲ್ಲ ಒಂದು ಸೊಪ್ಪು ಔಷಧಿಯೇ. ಅವ್ವ ಮಾತು ಮುಂದುವರಿಸಿ ಹಿಟ್ಟಿನಕುಡಿ ಸೊಪ್ಪು, ಅಡಿಪುಟ್ಟಿನ ಸೊಪ್ಪು, ಅನ್ನ ಸೊಪ್ಪು, ಗುರ್ಜ ಸೊಪ್ಪು, ಕೀರ ಸೊಪ್ಪು, ಒಂದು ಎಲಗಿನ ಸೊಪ್ಪು, ಬಗರವಂಟ ಸೊಪ್ಪು, ನೀರ‍್ಗೊನಿ ಸೊಪ್ಪು, ಕತ್ರಿ ಸೊಪ್ಪು, ಪಂಟ ಸೊಪ್ಪು, ಮಳ್ಳಿ ಸೊಪ್ಪು ಎಂದು ಇನ್ನಷ್ಟು ಸೊಪ್ಪುಗಳ ಹೆಸರು ಹೇಳಿ “ನೂರೊಂದು ಜಾತಿ ಸೊಪ್ಪುಗಳಿವೆ, ನಮಗೆ ಗೊತ್ತಿರೋದು ಇಷ್ಟೆ” ಎಂದಳು.

andolana

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

29 mins ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

1 hour ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

3 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

6 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

6 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

6 hours ago