ಹಾಡು ಪಾಡು

ಈಗ ಗಣರಾಜ್ಯೋತ್ಸವದಲ್ಲೂ ದ್ವೇಷದ ಉರಿಗಾಳಿ

ಗಣರಾಜ್ಯೋತ್ಸವ ಅಂದರೆ ನನಗೆ ನೆನಪಾಗೋದು ಶಾಲಾ ದಿನಗಳು. ಗಣರಾಜ್ಯದ ಹಿಂದಿನ ಎರಡು ಮೂರು ದಿನಗಳು ಯಾವುದೇ ತರಗತಿ ನಡೆಯುತ್ತಿರ ಲಿಲ್ಲ. ಮೇಡಂ ಬಂದು ಹಾಡು, ನೃತ್ಯ, ನಾಟಕ ಅಂತ್ಹೇಳಿ ಯರ‍್ಯಾರು ಭಾಗವಹಿಸುತ್ತೀರ? ಎಂದು ಕೇಳಿ ಅಂದಿನಂದಲೇ ತಯಾರಿ ಶುರುವಾಗುತ್ತಿತ್ತು.

ವಿವಿಧ ತರಗತಿ ವಿದ್ಯಾರ್ಥಿಗಳೆಲ್ಲ ಹೆಸರು ಕೊಡುತ್ತಿದ್ದರು. ಹೆಚ್ಚಿಗೆ ದೇಶಭಕ್ತಿ ಗೀತೆಗಳಿಗೆ ನೃತ್ಯ ಇರುತ್ತಿತ್ತು. ನಾನು ರಾಷ್ಟ್ರನಾಯಕರ ಬಗ್ಗೆ ಕಿರು ಪರಿಚಯ ಮಾಡುತ್ತಿದ್ದೆ. ಗಣರಾಜ್ಯದ ಹಿಂದಿನ ದಿನ ಶಾಲಾ ಆವರಣದ ಸ್ವಚ್ಛತೆ ಮಾಡಿ ನೀರೆರಚಿ ಧೂಳು ಏಳದ ಹಾಗೆ ಮಾಡಿ ಧ್ವಜ ಕಂಬದ ಸುತ್ತ ಹುಡುಗಿಯರು ರಂಗೋಲಿ ಬಿಟ್ಟಿದ್ದರೆ, ಹುಡುಗರು ಗುಡ್ಡಮಠಕ್ಕೆ ಹೋಗಿ ಚೆಂಡುಹೂ, ರೋಜ್ಯದ ಹೂ, ದಾಸವಾಳ, ನೆಲಗುಲಾಬಿ ತಂದು ಅಲಂಕರಿಸುತ್ತಿದ್ದೆವು. ನಾನು ಭಾರತದ ಭೂಪಟ ಬಿಡಿಸಿ ಉಪ್ಪಿಗೆ ಕೇಸರಿ, ಹಸಿರು ಬಣ್ಣ ಮಿಶ್ರ ಮಾಡಿ ಮಿಂಚಿಸುತ್ತಿದ್ದೆ. ಈಗ ರಾಷ್ಟ್ರೀಯ ಹಬ್ಬಗಳಿಗೂ ಧರ್ಮ, ಜಾತಿ ದ್ವೇಷದ ಬಿಸಿ ತಗುಲಿ ಸವೆಯುತ್ತಿವೆ. ಯಾವಾಗ ಬೇಕಾದರೂ ಹೊತ್ತಿ ಉರಿಯಬಹುದಾಗಿದೆ. ಗಣರಾಜ್ಯೋತ್ಸವದಲ್ಲಿ ‘ಆ ಫೋಟೋ ಇಟ್ಟಿಲ್ಲ’ ಅಂತ ಒಬ್ಬರು. ‘ಇಡಲ್ಲ’ ಅಂತ ಇನ್ನೊಬ್ಬರು. ಆ ಮಗೂಗೆ ಆ ವೇಷ ಹಾಕಿಸಿದ್ದು ಸರಿಯಿಲ್ಲ ಅಂತಲೂ ಜಗಳ ಮಾಡುವರು. ಸಹಿಷ್ಣುತೆ ಯಾರಲ್ಲೂ ಇಲ್ಲ. ಬಣ್ಣಗಳ ಬಗ್ಗೆಯೂ ದ್ವೇಷವಿದೆ. ಆ ಬಣ್ಣ ಬೇಡ ಅಂತ ಒಬ್ಬರಾದರೆ ಇನ್ನೊಬ್ಬರಿಗೆ ಮತ್ತೊಂದು ಬಣ್ಣ ಬೇಕಾಗಿದೆ. ಬಟ್ಟೆ, ಕ್ಯಾಪು, ಉಡುಪಿಗೂ ವಿರೋಧವಿದೆ. ಧ್ವಜವನ್ನು ಹಾರಿಸಿದವರ‍್ಯಾರು ಎಂಬುದಕ್ಕೂ ಕಾರಣ ನೀಡಬೇಕಾಗಿದೆ.

ಸಂವಿಧಾನದ ಆಶಯಗಳಿಗೆ ಕೊಳ್ಳಿ ಇಡುವ ನುಡಿಗಳೇ ಇಂದಿನ ದಿನಗಳಲ್ಲಿ ಕೇಳಿಸುತ್ತಿವೆ. ಎಲ್ಲಾ ಗಡಿಗಳನ್ನು ಮೀರಿ ಭಾರತದ ಸಮಸ್ತ ಜನತೆಯು ಕೂಡಿ ಆಚರಿಸಬೇಕಿದ್ದ ಗಣ ರಾಜ್ಯವು ಇಂದು ಜಾತಿ, ಮತಗಳ ಅಂತರದ ಜನಗಳ ಮಧ್ಯೆ ಬಡವಾಗುತ್ತಿದೆ. ಸೊಗಸು ಕುಂದುತ್ತಿದೆ. ಒಂದೇ ತೋಟದ ಹೂಗಳೆಂಬ ಏಕತೆ ನಶಿಸುತ್ತ ‘ನಾನೇ ಬೇರೆ-ನೀನೇ ಬೇರೆ’ ಎಂಬಂತಿರುವುದು ಶೋಚನೀಯ. ಇತ್ತೀಚೆಗೆ ಹೆಚ್ಚಿನ ಜನರಲ್ಲಿ ಜಾತಿ- ಧರ್ಮದ ಅಮಲು ಏರಿ ರಾಷ್ಟ್ರೀಯತೆ, ದೇಶಪ್ರೇಮ ಇವುಗಳನ್ನು ಬುಡಮೇಲು ಮಾಡಲು ಕಾಯುತ್ತ ಸಮಾಜದಲ್ಲಿ ಖುಷಿಯ ವಾತಾವರಣ ಕೆಡಿಸುತ್ತಿವೆ.

ಅಜಯ್ ಕುಮಾರ್ ಎಂ ಗುಂಬಳ್ಳಿ, ಯುವಕಥೆಗಾರ, ಯಳಂದೂರು ತಾಲ್ಲೂಕು

ಆಂದೋಲನ ಡೆಸ್ಕ್

Recent Posts

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

32 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

3 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

19 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

20 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

21 hours ago