ಹಾಡು ಪಾಡು

ಹಾಳೆ ಅಂಬುಲೆ ಉಯ್ಯಾಲೆ ಆಡಿ…

ನಾನು ಕೆಲಸ ಮಾಡುವ ಪಿರಿಯಾಪಟ್ಟಣದ ಶಾಲೆ ಮೈಸೂರು ಜಿಲ್ಲೆಯಲ್ಲೇ ವಿಶೇಷವಾದ ಶಾಲೆ. ಮೈಸೂರು ಜಿಲ್ಲೆಗೆ ಸೇರಿದ್ದರೂ ಕೊಡಗು ಜಿಲ್ಲೆಗೆ ಸಮೀಪ ಇದೆ. ವಾತಾವರಣ ಕೊಡಗಿನದೇ. ಹತ್ತಿರದಲ್ಲೇ ಜೇನುಕುರುಬರ ಹಾಡಿಗಳು, ಆನೆ ಕ್ಯಾಂಪ್, ಟಿಬೆಟಿಯನ್ ಕಾಲೋನಿ, ಒಂದೊಂದು ದಿಕ್ಕಿನಲ್ಲಿ ಸ್ವಲ್ಪವೇ ದೂರ ಹೋದರೂ ಬೇರೆಯದೇ ಸಂಸೃತಿ ಅನುಭವಕ್ಕೆ ಬರುತ್ತದೆ. ನಮ್ಮ ಶಾಲೆಗೆ ಕನ್ನಡ, ಉರ್ದು, ಮಲಯಾಳಂ, ಕೊಡವ, ತೆಲುಗು,ಜೇನುಕುರುಬರ ಭಾಷೆ ಮಾತನಾಡುವ ಮಕ್ಕಳು ಬರುತ್ತಾರೆ. ಒಟ್ಟಿಗೇ ಕಲಿಯುತ್ತಾರೆ. ಶಾಲಾ ಕಾರ್ಯಕ್ರಮಗಳು ಬಂದರಂತೂ ಜೇನುಕುರುಬರ

ಹಾಳೆ ಅಂಬುಲೆ ಉಯ್ಯಾಲೆ ಆಡಿ…….. ಎನ್ನುವ ನೃತ್ಯ ಮತ್ತು ಕೊಡವರ “ವಾಲಗ ನೃತ್ಯ ಇರಲೇ ಬೇಕು. ಮಸಣಿಕಮ್ಮ, ಕನ್ನಂಬಾಡಮ್ಮ ಜಾತ್ರೆ, ಕುಂಡೆ ಹಬ್ಬ, ರಂಝಾನ್ ಸಮಯದಲ್ಲಿ ಬರುವ ಅಂಗಡಿಗಳು..ಇವೆಲ್ಲವನ್ನೂ ಜಾತಿ ಧರ್ಮದ ಹಂಗಿಲ್ಲದೇ ಆಚರಿಸುತ್ತಾರೆ. ನಿಜವಾದ ಅರ್ಥದ ಬಹುತ್ವ ಇಲ್ಲಿದೆ. ಇವೆಲ್ಲವೂ ಸಾಧ್ಯವಾಗಿರುವುದು ಸಂವಿಧಾನ ಮತ್ತು ಅದನ್ನು ಅಂಗೀಕರಿಸಿ ನಮಗೆ ನಾವೇ ಅರ್ಪಿಸಿಕೊಂಡ ದಿನದಿಂದ.

ಅನೇಕ ಭಿನ್ನಾಭಿಪ್ರಾಯಗಳನ್ನು, ಬೇರೆ ಬೇರೆ ನಂಬಿಕೆ, ಸಂಪ್ರದಾಯಗಳನ್ನು ಇಟ್ಟುಕೊಂಡೂ ಸಹ ಒಂದಾಗಲು ಸಾಧ್ಯವಿರುವುದೇ ಇದರ ಶಕ್ತಿ. ಸಂವಿಧಾನವನ್ನು ಬದಲಾಯಿಸಲು ಬಂದಿ ದ್ದೇವೆ ಎಂದಾಗ, ದೇಶದ ರಾಜಧಾನಿಯಲ್ಲಿ ಸಂವಿಧಾನದ ಪ್ರತಿಯನ್ನು ಸುಟ್ಟ ಪರಿಣಾಮ ಕರ್ನಾ ಟಕದ ಪ್ರತಿ ಶಾಲೆಯ ಮಕ್ಕಳ ಬಾಯಲ್ಲಿ ಇಂದು ಸಂವಿಧಾನದ ಪ್ರಸ್ತಾವನೆ ಕೇಳಿಬರುತ್ತಿದೆ. ಅದರ ಪ್ರತಿಯೊಂದು ಅಕ್ಷರವೂ ನಮ್ಮ ದಿನ ದಿನದ ಬದುಕಿಗೆ ಬಂದಾಗಲೇ, ಆಚರಣೆಗೆ ಬಂದಾಗಲೇ ನಿಜ ಅರ್ಥದಲ್ಲಿ ಗಣರಾಜ್ಯ ದಿನ.

ಚಿತ್ರಾ ವೆಂಕಟರಾಜು, ರಂಗನಟಿ ಮತ್ತು ಶಿಕ್ಷಕಿ, ಚಾಮರಾಜನಗರ 

ಆಂದೋಲನ ಡೆಸ್ಕ್

Recent Posts

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

3 hours ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

3 hours ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

3 hours ago

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು…

3 hours ago

ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರ ಮುಷ್ಕರ

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…

3 hours ago

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

15 hours ago