ಹಾಡು ಪಾಡು

ಹಾಳೆ ಅಂಬುಲೆ ಉಯ್ಯಾಲೆ ಆಡಿ…

ನಾನು ಕೆಲಸ ಮಾಡುವ ಪಿರಿಯಾಪಟ್ಟಣದ ಶಾಲೆ ಮೈಸೂರು ಜಿಲ್ಲೆಯಲ್ಲೇ ವಿಶೇಷವಾದ ಶಾಲೆ. ಮೈಸೂರು ಜಿಲ್ಲೆಗೆ ಸೇರಿದ್ದರೂ ಕೊಡಗು ಜಿಲ್ಲೆಗೆ ಸಮೀಪ ಇದೆ. ವಾತಾವರಣ ಕೊಡಗಿನದೇ. ಹತ್ತಿರದಲ್ಲೇ ಜೇನುಕುರುಬರ ಹಾಡಿಗಳು, ಆನೆ ಕ್ಯಾಂಪ್, ಟಿಬೆಟಿಯನ್ ಕಾಲೋನಿ, ಒಂದೊಂದು ದಿಕ್ಕಿನಲ್ಲಿ ಸ್ವಲ್ಪವೇ ದೂರ ಹೋದರೂ ಬೇರೆಯದೇ ಸಂಸೃತಿ ಅನುಭವಕ್ಕೆ ಬರುತ್ತದೆ. ನಮ್ಮ ಶಾಲೆಗೆ ಕನ್ನಡ, ಉರ್ದು, ಮಲಯಾಳಂ, ಕೊಡವ, ತೆಲುಗು,ಜೇನುಕುರುಬರ ಭಾಷೆ ಮಾತನಾಡುವ ಮಕ್ಕಳು ಬರುತ್ತಾರೆ. ಒಟ್ಟಿಗೇ ಕಲಿಯುತ್ತಾರೆ. ಶಾಲಾ ಕಾರ್ಯಕ್ರಮಗಳು ಬಂದರಂತೂ ಜೇನುಕುರುಬರ

ಹಾಳೆ ಅಂಬುಲೆ ಉಯ್ಯಾಲೆ ಆಡಿ…….. ಎನ್ನುವ ನೃತ್ಯ ಮತ್ತು ಕೊಡವರ “ವಾಲಗ ನೃತ್ಯ ಇರಲೇ ಬೇಕು. ಮಸಣಿಕಮ್ಮ, ಕನ್ನಂಬಾಡಮ್ಮ ಜಾತ್ರೆ, ಕುಂಡೆ ಹಬ್ಬ, ರಂಝಾನ್ ಸಮಯದಲ್ಲಿ ಬರುವ ಅಂಗಡಿಗಳು..ಇವೆಲ್ಲವನ್ನೂ ಜಾತಿ ಧರ್ಮದ ಹಂಗಿಲ್ಲದೇ ಆಚರಿಸುತ್ತಾರೆ. ನಿಜವಾದ ಅರ್ಥದ ಬಹುತ್ವ ಇಲ್ಲಿದೆ. ಇವೆಲ್ಲವೂ ಸಾಧ್ಯವಾಗಿರುವುದು ಸಂವಿಧಾನ ಮತ್ತು ಅದನ್ನು ಅಂಗೀಕರಿಸಿ ನಮಗೆ ನಾವೇ ಅರ್ಪಿಸಿಕೊಂಡ ದಿನದಿಂದ.

ಅನೇಕ ಭಿನ್ನಾಭಿಪ್ರಾಯಗಳನ್ನು, ಬೇರೆ ಬೇರೆ ನಂಬಿಕೆ, ಸಂಪ್ರದಾಯಗಳನ್ನು ಇಟ್ಟುಕೊಂಡೂ ಸಹ ಒಂದಾಗಲು ಸಾಧ್ಯವಿರುವುದೇ ಇದರ ಶಕ್ತಿ. ಸಂವಿಧಾನವನ್ನು ಬದಲಾಯಿಸಲು ಬಂದಿ ದ್ದೇವೆ ಎಂದಾಗ, ದೇಶದ ರಾಜಧಾನಿಯಲ್ಲಿ ಸಂವಿಧಾನದ ಪ್ರತಿಯನ್ನು ಸುಟ್ಟ ಪರಿಣಾಮ ಕರ್ನಾ ಟಕದ ಪ್ರತಿ ಶಾಲೆಯ ಮಕ್ಕಳ ಬಾಯಲ್ಲಿ ಇಂದು ಸಂವಿಧಾನದ ಪ್ರಸ್ತಾವನೆ ಕೇಳಿಬರುತ್ತಿದೆ. ಅದರ ಪ್ರತಿಯೊಂದು ಅಕ್ಷರವೂ ನಮ್ಮ ದಿನ ದಿನದ ಬದುಕಿಗೆ ಬಂದಾಗಲೇ, ಆಚರಣೆಗೆ ಬಂದಾಗಲೇ ನಿಜ ಅರ್ಥದಲ್ಲಿ ಗಣರಾಜ್ಯ ದಿನ.

ಚಿತ್ರಾ ವೆಂಕಟರಾಜು, ರಂಗನಟಿ ಮತ್ತು ಶಿಕ್ಷಕಿ, ಚಾಮರಾಜನಗರ 

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

3 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

4 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

4 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

5 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

6 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

6 hours ago