ಹಾಡು ಪಾಡು

ಗಣರಾಜ್ಯೋತ್ಸವದ ಅಯೋಮಯ ಇಂಗ್ಲಿಷ್ ಭಾಷಣ

ಗಣರಾಜ್ಯೋತ್ಸವ ಎಂದೊಡನೆ ನಾನು ಪ್ರೌಢಶಾಲೆಯಲ್ಲಿ ಸತತವಾಗಿ ೩ವರ್ಷ ಮಾಡಿದ ಇಂಗ್ಲಿಷ್ ಭಾಷಣ ನೆನಪಾಗುತ್ತದೆ. ಈ ದಿನದ ಮಹತ್ವದ ಬಗ್ಗೆ ಇತ್ತೀಚೆಗೆ ತಿಳಿದುಕೊಂಡಿದ್ದರೂ ಅಂದು ಯಾವ ಮುಖ ಹೊತ್ತುಕೊಂಡು ಭಾಷಣ ಮಾಡಿದ್ದೆನೊ ಗೊತ್ತಿಲ್ಲ.

ಆದರೆ ನ್ಯೂಸ್ ಚಾನೆಲ್‌ನಲ್ಲಿ ಬೆಳಗ್ಗೆಯಿಂದ ರಾತ್ರಿಯವರೆಗೂ ಪ್ರಸಾರವಾಗುವ ಪರೇಡುಗಳನ್ನು ನೋಡುವುದು ಹಾಗೂ ನಮ್ಮ ಕರ್ನಾಟಕದವರು ಈ ಬಾರಿ ಯಾವ ಜಿಲ್ಲೆಯ ಗೊಂಬೆಗಳನ್ನು ತಂದಿದ್ದಾರೆ ಎಂದು ಗಮನಿಸುವುದು, ಅಪ್ಪನಿಗೆ ನಂತರ ಇವೆಲ್ಲದರ ಕುಳಿತು ಪ್ರಶ್ನೆಗಳ ಸುರಿಮಳೆ ಸುರಿಸುವುದೇ ಕೆಲಸವಾಗಿತ್ತು. ಒಮ್ಮೆ ೮ನೇ ತರಗತಿಯಲ್ಲಿ ನಾನು ಮೊದಲ ಬಾರಿಗೆ ಇಂಗ್ಲಿಷ್ ಭಾಷಣ ಮಾಡಲು ಆಯ್ಕೆಯಾಗಿದ್ದಾಗ ಅಂದು ನಮ್ಮ ಏರಿಯಾದ ಕಾರ್ಪೊರೇಟರು ಬರುತ್ತಾರೆಂದು ಸುದ್ದಿಯಿದ್ದ ಕಾರಣ ನಮಗೆಲ್ಲ ನಿರಂತರವಾಗಿ ಒಂದು ವಾರದಿಂದ ಭಾಷಣ ಬಿಗಿಯುವುದನ್ನು ಅಭ್ಯಾಸ ಮಾಡಿಸಿದ್ದರು. ಧ್ವಜಾರೋಹಣ ಮಾಡಿ, ರಾಷ್ಟ್ರ ಗೀತೆ ಹಾಡಿದೆವು. ನಂತರ ಅತಿಥಿಗಳು ಭಾಷಣ ಮಾಡಿ ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಆದರೆ ಪಾಠ ಕೇಳಿಕೇಳಿ ಬೇಸತ್ತಿದ್ದ ನಾವು ಭಾಷಣ ಕೇಳುವ ಮನಸ್ಥಿತಿಯುಳ್ಳವರಾಗಿರಲಿಲ್ಲ. ವಿದ್ಯಾರ್ಥಿಗಳಾದ ನಾವು ಉರು ಹೊಡೆದ ಭಾಷಣವನ್ನು ಒದರುವ ಘಟ್ಟಕ್ಕೆ ತಲುಪಿದ್ದೆವು. ನಾನು ಸ್ಟೇಜ್ ಮೇಲೆ ಹೋಗಿ ಮೈಕ್ ಸರಿ ಮಾಡಿಕೊಂಡು ಸಭೆಯತ್ತ ನೋಡಿದರೆ ಬಿಸಿಲಿನ ಝಳಕ್ಕೆ ಮುಂದಿದ್ದವರು ನಿದ್ರೆಯಲ್ಲಿ, ಹಿಂದಿದ್ದವರು ಹರಟೆಯಲ್ಲಿ ಮುಳುಗಿದ್ದರು. ಭಾಷಣ ಶುರು ಮಾಡಿದೆ. ‘ಟುಡೇ ಐ ಎಮ್ ವೆರಿ ಹ್ಯಾಪಿ. ಬಿಕಾಸ್ ಟುಡೇ ಇಸ್ ರಿಪಬ್ಲಿಕ್ ಡೇ ಆಫ್ ಅವರ್ ಇಂಡಿಯಾ, ಟುಡೇ ದಟ್ ಡೇ ಕಾನ್ಸ್ತ್ರ್ಟಿಟ್ಯೂಷನ್ ಕೇಮ್ ಇಂಟು ಆಕ್ಷನ್. ಇಂಡಿಯಾ ಐಸ್ ಗ್ರೇಟ್‘ ಎನ್ನುತ್ತಿದ್ದಂತೆ ಬೇಸತ್ತಿದ್ದ ಸಭಿಕರ ನಡುವೆ ನನ್ನ ಕ್ರಷ್ ಹುಡುಗ ನನ್ನನ್ನೇ ನೋಡುತ್ತಿದ್ದದ್ದು ಕಂಡು ಗಾಬರಿಯಾಗಿ ಮಾತು ಮರೆತೆ. ನಮ್ಮ ಟೀಚರ್ ಬದಿಯಿಂದ ‘ಸ್ನೇಹಾ ಕಂಟಿನ್ಯೂ, ಕಂಟಿನ್ಯೂ‘ ಎಂದದ್ದು ನನಗೆ ಕೇಳಿಸಲೇ ಇಲ್ಲ ಅದೇ ಹೊತ್ತಿಗೆ ಸರಿಯಾಗಿ ಜೋತಾಡುತ್ತಿದ್ದ ಶಾಮಿಯಾನದ ಕಂಬ ನನ್ನ ಮುಂದೆ ಬಂದು ದೊಪ್ಪನೇ ಬಿತ್ತು. ಅದೃಷ್ಟವಶಾತ್ ನನಗೇನು ಆಗಲಿಲ್ಲ. ಒಂದೆರಡು ಮಿಠಾಯಿ ಹೆಚ್ಚೇ ಸಿಕ್ಕಿತು.

 ಸ್ನೇಹಾ ಮುಕ್ಕಣ್ಣಪ್ಪ, ರಂಗನಟಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿ, ಮಳವಳ್ಳಿ ತಾಲ್ಲೂಕು

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

9 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

13 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

13 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

14 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

14 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

14 hours ago