ದಿವಾಕ‌ರ್ ಅವರ ಒಡನಾಟದಿಂದ ನನಗೆ ವಿಶ್ವ ಸಾಹಿತ್ಯದ ಬಾಗಿಲುಗಳು ತೆರೆದವು. ನೊಬೆಲ್ ಪ್ರಶಸ್ತಿ ಪಡೆದ ಐವತ್ತು ಲೇಖಕರ ಒಂದೊಂದು ಕಥೆಯನ್ನು ಆಯ್ದು ಅನುವಾದಿಸಿ ಒಂದು ಸಂಕಲನವಾಗಿ ಪ್ರಕಟಿಸುವುದು ಸರಳವಾದ ಮಾತೇನೂ ಅಲ್ಲ. ಹೀಗೇ ‘ಕಥಾಜಗತ್ತು’ ಎನ್ನುವ ಮಹತ್ವದ ಪುಸ್ತಕವನ್ನು ದಿವಾಕರ್ ರೂಪಿಸಿದ್ದರು. ಅದರ ಜೊತೆಗೆ ನವಕರ್ನಾಟಕ ಪ್ರಕಾಶನದವರು ಪ್ರಕಟಿಸಿದ ‘ವಿಶ್ವ ಸಾಹಿತ್ಯ ಮಾಲೆ’ಯಲ್ಲಿ ಕೆಲವು ಕಾದಂಬರಿಗಳನ್ನೂ ದಿವಾಕರ್ ಅನುವಾದಿಸಿ ಕೊಟ್ಟಿದ್ದರು. ಸಾಹಿತ್ಯದ ಬಗೆಗಲ್ಲದೇ, ಅನುವಾದದ ಬಗ್ಗೆ ನನ್ನ ಧೋರಣೆ ರೂಪುಗೊಳ್ಳಲೂ ದಿವಾಕರ್ ಅವರೇ ಕಾರಣವೆನ್ನಬಹುದು. ಅವರಿಗೆ ಲೇಖಕರ ಹೆಸರುಗಳು ಎಷ್ಟು ಸರಳವಾಗಿ ನೆನಪಿರುತ್ತಿದ್ದುವೋ, ಅಷ್ಟೇ ಗಟ್ಟಿಯಾಗಿ ಅನುವಾದಕರ ಹೆಸರು- ಶೈಲಿಗಳನ್ನು ನೆನಪು ಮಾಡಿಟ್ಟುಕೊಂಡಿರುತ್ತಿದ್ದರು.
ಎಂಬತ್ತರ ಕ್ಲಬ್ಬಿಗೆ

ವಿಶ್ವ ಸಾಹಿತ್ಯದಲ್ಲಿ ದಿವಾಕರ್ ಅವರಿಗೆ ಪ್ರಿಯವಾದದ್ದು ಲ್ಯಾಟಿನ್ ಅಮೆರಿಕನ್ ಸಾಹಿತ್ಯ. ಲ್ಯಾಟಿನ್ ಅಮೆರಿಕನ್ ಸಾಹಿತ್ಯ ಮತ್ತು ‘ಮ್ಯಾಜಿಕ್ ರಿಯಲಿಸಂ’ ಎಂದರೆ ತಕ್ಷಣಕ್ಕೆ ಮನಸ್ಸಿಗೆ ಬರುತ್ತಿದ್ದ ಹೆಸರು ಗೇಬ್ರಿಯಲ್ ಗಾರ್ಸಿಯಾ ಮಾರ್ಕೇಸನದ್ದು. ಆದರೆ ದಿವಾಕರ್ ಇನ್ನೂ ವಿಸೃತವಾದ ಸಾಹಿತ್ಯವನ್ನು ಓದಿದ್ದಲ್ಲದೇ, ನಮ್ಮಲ್ಲಿ ಹಂಚಿಕೊಳ್ಳುತ್ತಿದ್ದರು. ದಿವಾಕ‌ರ್ ಅವರ ಸ್ನೇಹವಲಯದಲ್ಲಿ ಸೇರಿದ ನಂತರ ಅವರು ತಮ್ಮಲ್ಲಿದ್ದ ಹಲವು ಉತ್ತಮ ಪುಸ್ತಕಗಳನ್ನು ನನ್ನೊಂದಿಗೆ ಹಂಚಿಕೊಂಡಿದ್ದರು. ವಾಕ್ಲಾವ್‌ ಹವೆಲ್, ಹಾರ್ಹೆ ಲೂಯಿ ಬೊರ್ಹೆಸ್, ಇಸಾಬೆಲ್ ಅಯೆಂಡೆ, ಯಆವೋ ರೋಸಾ,ಇಸಿಡರೋ ಬ್ಲಾಸ್ಟಿನ್ – ಈ ಎಲ್ಲ ಹೆಸರುಗಳನ್ನೂ ನಮಗೆ ಪರಿಚಯಿಸಿದವರೇ ದಿವಾಕರ್, ಅಯೆಂಡೆಯ ‘ಹೌಸ್ ಆಫ್ ದ ಸ್ಪಿರಿಟ್ಸ್’ ಯಾವ ರೀತಿಯಲ್ಲಿ ಮಾರ್ಕೇಸಿಯನ್ ಪರಂಪರೆಗೆ ಸೇರುತ್ತದೆ ಎನ್ನುವುದನ್ನು ಎಷ್ಟು ಪ್ಯಾಷನೇಟ್ ಆಗಿ ಹೇಳುತ್ತಿದ್ದರು ಎನ್ನುವುದನ್ನು ಮರೆಯಲು ಸಾಧ್ಯವೇ ಇಲ್ಲ. ದಿವಾಕರ್‌ಗೆ ಈ ಭಾಷೆ ಮತ್ತು ಸಾಹಿತ್ಯದ ಬಗ್ಗೆ ಇದ್ದ ಆಸಕ್ತಿ, ಅವರನ್ನು ಸ್ಪ್ಯಾನಿಷ್ ಭಾಷೆ ಕಲಿಯಲು ಪ್ರೇರೇಪಿಸಿತ್ತು. ಆ ಲೇಖಕರ ಹೆಸರಿನ ಸರಿ ಉಚ್ಚಾರ ಹೇಗಿರಬೇಕೆಂದು ನಮಗೆ ಸರಿಯಾಗಿ ತಿಳಿಹೇಳುತ್ತಿದ್ದರು.

ಈ ಎಲ್ಲ ಲೇಖಕರೂ ಒಂದೆಡೆಗಿದ್ದರೆ, ದಿವಾಕರ್ ಮನಸ್ಸಿನಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದವನು ಅಮೆರಿಕದ ದಕ್ಷಿಣಭಾಗಕ್ಕೆ ಸಂದಿದ್ದ ವಿಲಿಯಂ ಫಾಕ್ನರ್. ಫಾಕ್ನರ್ನ ಕಾದಂಬರಿ ಮತ್ತು ಐಹಿತ್ಯ-ಸಂಗೀತ ಕಥೆಗಳ ಕಟ್ಟುವಿಕೆಯ ಬಗ್ಗೆ ನಮಗೆ ಹೊಸ ಒಳನೋಟಗಳು ವಿಶೇಷ ಆಸಕ್ತಿ ಬಂದದ್ದೇ ದಿವಾಕರ್ ಅವರ ಜೊತೆಗಿನ ಒಡನಾಟದಿಂದ. ಕನ್ನಡ ಸಾರಸ್ವತ ಲೋಕದಲ್ಲಿ ವಿಶ್ವ ಸಾಹಿತ್ಯದ ಓದು, ಮುಖ್ಯವಾಗಿ ಕಮೂ, ಕಾಪ್ಕಾ, ಸಾರ್ತ್ ಮತ್ತು ಅಸ್ತಿತ್ವವಾದದತ್ತ ಕೇಂದ್ರೀಕೃತವಾಗಿದ್ದ ಸಮಯದಲ್ಲಿ ದಿವಾಕರ್ ನಮಗೆ ಮ್ಯಾಜಿಕ್ ರಿಯಲಿಸಂ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳುವಂತೆ ಪ್ರೇರೇಪಿಸಿದರು. ಅವರು ನಿಜಕ್ಕೂ ಆ ಬಗ್ಗೆ ಹೆಚ್ಚಿನ ಟಿಪ್ಪಣಿಗಳನ್ನು ಬರೆದು ಮೀಮಾಂಸೆಯ ಮೂಲಕ ಆ ಸಾಹಿತ್ಯವನ್ನು ಪರಿಚಯಿಸಿದವರಲ್ಲ. ಬದಲಿಗೆ ಅನುವಾದಗಳ ಮೂಲಕ ಆ ಕೃತಿಗಳನ್ನು ಒದಗಿಸಿಕೊಟ್ಟು ನೇರವಾಗಿ ಆ ಕೃತಿಗಳನ್ನು ಆಸ್ವಾದಿಸಲು ಕಾರಣೀಭೂತರಾದರು. mssriram@pm.me

lokesh

Recent Posts

ಹುಲಿಕಲ್ ಘಾಟ್‌ನಲ್ಲಿ ಗುಡ್ಡ ಕುಸಿತ ; ಮೂವರು ಕಾರ್ಮಿಕರು ಸಾವು.

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ದುರಸ್ತಿ ಕಾಮಗಾರಿ ನಡೆಯುತ್ತಿರುವಾಗ…

4 mins ago

ಇಂದಿನಿಂದ ಟೋಲ್‌ಗಳಲ್ಲಿ ಕ್ಯಾಷ್‌ ಇಲ್ಲ ; ಡಿಜಿಟಲ್‌ ಪಾವತಿ ಮಾತ್ರ.

ಬೆಂಗಳೂರು : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ಧಾರದಂತೆ, ಇಂದಿನಿಂದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು…

1 hour ago

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

4 hours ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

4 hours ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

4 hours ago

ಓದುಗರ ಪತ್ರ: ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್  ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…

4 hours ago