ದಿವಾಕ‌ರ್ ಅವರ ಒಡನಾಟದಿಂದ ನನಗೆ ವಿಶ್ವ ಸಾಹಿತ್ಯದ ಬಾಗಿಲುಗಳು ತೆರೆದವು. ನೊಬೆಲ್ ಪ್ರಶಸ್ತಿ ಪಡೆದ ಐವತ್ತು ಲೇಖಕರ ಒಂದೊಂದು ಕಥೆಯನ್ನು ಆಯ್ದು ಅನುವಾದಿಸಿ ಒಂದು ಸಂಕಲನವಾಗಿ ಪ್ರಕಟಿಸುವುದು ಸರಳವಾದ ಮಾತೇನೂ ಅಲ್ಲ. ಹೀಗೇ ‘ಕಥಾಜಗತ್ತು’ ಎನ್ನುವ ಮಹತ್ವದ ಪುಸ್ತಕವನ್ನು ದಿವಾಕರ್ ರೂಪಿಸಿದ್ದರು. ಅದರ ಜೊತೆಗೆ ನವಕರ್ನಾಟಕ ಪ್ರಕಾಶನದವರು ಪ್ರಕಟಿಸಿದ ‘ವಿಶ್ವ ಸಾಹಿತ್ಯ ಮಾಲೆ’ಯಲ್ಲಿ ಕೆಲವು ಕಾದಂಬರಿಗಳನ್ನೂ ದಿವಾಕರ್ ಅನುವಾದಿಸಿ ಕೊಟ್ಟಿದ್ದರು. ಸಾಹಿತ್ಯದ ಬಗೆಗಲ್ಲದೇ, ಅನುವಾದದ ಬಗ್ಗೆ ನನ್ನ ಧೋರಣೆ ರೂಪುಗೊಳ್ಳಲೂ ದಿವಾಕರ್ ಅವರೇ ಕಾರಣವೆನ್ನಬಹುದು. ಅವರಿಗೆ ಲೇಖಕರ ಹೆಸರುಗಳು ಎಷ್ಟು ಸರಳವಾಗಿ ನೆನಪಿರುತ್ತಿದ್ದುವೋ, ಅಷ್ಟೇ ಗಟ್ಟಿಯಾಗಿ ಅನುವಾದಕರ ಹೆಸರು- ಶೈಲಿಗಳನ್ನು ನೆನಪು ಮಾಡಿಟ್ಟುಕೊಂಡಿರುತ್ತಿದ್ದರು.
ಎಂಬತ್ತರ ಕ್ಲಬ್ಬಿಗೆ

ವಿಶ್ವ ಸಾಹಿತ್ಯದಲ್ಲಿ ದಿವಾಕರ್ ಅವರಿಗೆ ಪ್ರಿಯವಾದದ್ದು ಲ್ಯಾಟಿನ್ ಅಮೆರಿಕನ್ ಸಾಹಿತ್ಯ. ಲ್ಯಾಟಿನ್ ಅಮೆರಿಕನ್ ಸಾಹಿತ್ಯ ಮತ್ತು ‘ಮ್ಯಾಜಿಕ್ ರಿಯಲಿಸಂ’ ಎಂದರೆ ತಕ್ಷಣಕ್ಕೆ ಮನಸ್ಸಿಗೆ ಬರುತ್ತಿದ್ದ ಹೆಸರು ಗೇಬ್ರಿಯಲ್ ಗಾರ್ಸಿಯಾ ಮಾರ್ಕೇಸನದ್ದು. ಆದರೆ ದಿವಾಕರ್ ಇನ್ನೂ ವಿಸೃತವಾದ ಸಾಹಿತ್ಯವನ್ನು ಓದಿದ್ದಲ್ಲದೇ, ನಮ್ಮಲ್ಲಿ ಹಂಚಿಕೊಳ್ಳುತ್ತಿದ್ದರು. ದಿವಾಕ‌ರ್ ಅವರ ಸ್ನೇಹವಲಯದಲ್ಲಿ ಸೇರಿದ ನಂತರ ಅವರು ತಮ್ಮಲ್ಲಿದ್ದ ಹಲವು ಉತ್ತಮ ಪುಸ್ತಕಗಳನ್ನು ನನ್ನೊಂದಿಗೆ ಹಂಚಿಕೊಂಡಿದ್ದರು. ವಾಕ್ಲಾವ್‌ ಹವೆಲ್, ಹಾರ್ಹೆ ಲೂಯಿ ಬೊರ್ಹೆಸ್, ಇಸಾಬೆಲ್ ಅಯೆಂಡೆ, ಯಆವೋ ರೋಸಾ,ಇಸಿಡರೋ ಬ್ಲಾಸ್ಟಿನ್ – ಈ ಎಲ್ಲ ಹೆಸರುಗಳನ್ನೂ ನಮಗೆ ಪರಿಚಯಿಸಿದವರೇ ದಿವಾಕರ್, ಅಯೆಂಡೆಯ ‘ಹೌಸ್ ಆಫ್ ದ ಸ್ಪಿರಿಟ್ಸ್’ ಯಾವ ರೀತಿಯಲ್ಲಿ ಮಾರ್ಕೇಸಿಯನ್ ಪರಂಪರೆಗೆ ಸೇರುತ್ತದೆ ಎನ್ನುವುದನ್ನು ಎಷ್ಟು ಪ್ಯಾಷನೇಟ್ ಆಗಿ ಹೇಳುತ್ತಿದ್ದರು ಎನ್ನುವುದನ್ನು ಮರೆಯಲು ಸಾಧ್ಯವೇ ಇಲ್ಲ. ದಿವಾಕರ್‌ಗೆ ಈ ಭಾಷೆ ಮತ್ತು ಸಾಹಿತ್ಯದ ಬಗ್ಗೆ ಇದ್ದ ಆಸಕ್ತಿ, ಅವರನ್ನು ಸ್ಪ್ಯಾನಿಷ್ ಭಾಷೆ ಕಲಿಯಲು ಪ್ರೇರೇಪಿಸಿತ್ತು. ಆ ಲೇಖಕರ ಹೆಸರಿನ ಸರಿ ಉಚ್ಚಾರ ಹೇಗಿರಬೇಕೆಂದು ನಮಗೆ ಸರಿಯಾಗಿ ತಿಳಿಹೇಳುತ್ತಿದ್ದರು.

ಈ ಎಲ್ಲ ಲೇಖಕರೂ ಒಂದೆಡೆಗಿದ್ದರೆ, ದಿವಾಕರ್ ಮನಸ್ಸಿನಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದವನು ಅಮೆರಿಕದ ದಕ್ಷಿಣಭಾಗಕ್ಕೆ ಸಂದಿದ್ದ ವಿಲಿಯಂ ಫಾಕ್ನರ್. ಫಾಕ್ನರ್ನ ಕಾದಂಬರಿ ಮತ್ತು ಐಹಿತ್ಯ-ಸಂಗೀತ ಕಥೆಗಳ ಕಟ್ಟುವಿಕೆಯ ಬಗ್ಗೆ ನಮಗೆ ಹೊಸ ಒಳನೋಟಗಳು ವಿಶೇಷ ಆಸಕ್ತಿ ಬಂದದ್ದೇ ದಿವಾಕರ್ ಅವರ ಜೊತೆಗಿನ ಒಡನಾಟದಿಂದ. ಕನ್ನಡ ಸಾರಸ್ವತ ಲೋಕದಲ್ಲಿ ವಿಶ್ವ ಸಾಹಿತ್ಯದ ಓದು, ಮುಖ್ಯವಾಗಿ ಕಮೂ, ಕಾಪ್ಕಾ, ಸಾರ್ತ್ ಮತ್ತು ಅಸ್ತಿತ್ವವಾದದತ್ತ ಕೇಂದ್ರೀಕೃತವಾಗಿದ್ದ ಸಮಯದಲ್ಲಿ ದಿವಾಕರ್ ನಮಗೆ ಮ್ಯಾಜಿಕ್ ರಿಯಲಿಸಂ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳುವಂತೆ ಪ್ರೇರೇಪಿಸಿದರು. ಅವರು ನಿಜಕ್ಕೂ ಆ ಬಗ್ಗೆ ಹೆಚ್ಚಿನ ಟಿಪ್ಪಣಿಗಳನ್ನು ಬರೆದು ಮೀಮಾಂಸೆಯ ಮೂಲಕ ಆ ಸಾಹಿತ್ಯವನ್ನು ಪರಿಚಯಿಸಿದವರಲ್ಲ. ಬದಲಿಗೆ ಅನುವಾದಗಳ ಮೂಲಕ ಆ ಕೃತಿಗಳನ್ನು ಒದಗಿಸಿಕೊಟ್ಟು ನೇರವಾಗಿ ಆ ಕೃತಿಗಳನ್ನು ಆಸ್ವಾದಿಸಲು ಕಾರಣೀಭೂತರಾದರು. mssriram@pm.me

lokesh

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

59 mins ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

14 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

14 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

14 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

14 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

15 hours ago