ಹಾಡು ಪಾಡು

ಸಂವಿಧಾನ ಮತ್ತು ಅಪ್ಪನ ಕಣ್ಣ ಬೆಳಕು

ರಮ್ಯ ಕೆ ಜಿ ಮೂರ್ನಾಡು

ನಾನು ಸಣ್ಣವಳಿದ್ದಾಗ ನಮ್ಮ ಮನೆಯಲ್ಲಿ ಟಿವಿ ಇಲ್ಲದ ಕಾರಣ ಭಾನುವಾರ ನಮ್ಮಪ್ಪ ಪಿಚ್ಚರ್ ನೋಡಲು ಅವರ ಪರಿಚಯವಿರುವ ಒಂದು ಮನೆಗೆ ಕರೆದುಕೊಂಡು ಹೋಗುತ್ತಿದ್ದರು. ಅವರ ಟಿವಿ, ಹಾಲ್‌ನಲ್ಲಿದ್ದ ಕಾರಣ ನಾವು ಮನೆಯಿಂದ ಆಚೆ ಅಂದ್ರೆ ಹೊರಗಡೆ ಕೂತು ಪಿಚ್ಚರ್ ನೋಡ್ತಿದ್ದೆವು. ಆಗೊಂದು ದಿನ ‘ಹೇಮಾವತಿ’ ಪಿಚ್ಚರ್ ಹಾಕಿದ್ರು. ಅದ್ರಲ್ಲಿ ಹೀರೋ ಶ್ರೀನಿವಾಸಮೂರ್ತಿಯವರಿಗೆ ಬ್ರಾಹ್ಮಣ್ರು ಕೆಲವ್ರು “ನಮ್ ಸಂಸ್ಕಾರ, ಸಂಸ್ಕ ತಿ ಹಾಳ್ಮಾಡ್ದೆ‘ ಅಂತೆಲ್ಲ ಬೈತಿದ್ರು. ಶ್ರೀನಿವಾಸಮೂರ್ತಿ ಅವರಿಗೆಲ್ಲ ಮಾನವೀಯತೆಯ ಪಾಠ ಹೇಳ್ತಿದ್ದ. ಆಗ ನನ್ನಪ್ಪನ ಮುಖದಲ್ಲಿ ಎಂಥದ್ದೋ ಮಿಂಚು ಹೊಳಿತಿತ್ತು. ಆ ಮಿಂಚಿಗೆ ಕಾರಣ ಏನು ಅನ್ನೋದು ಆಗ ಗೊತ್ತಾಗಿರ್ಲಿಲ್ಲ. ಇತ್ತೀಚೆಗೆ ಮತ್ತೆ ಆ ಸಿನಿಮಾನ ನೋಡ್ದಾಗ ನನ್ನಪ್ಪನೊಳಗಿನ ಮಿಂಚಿಗೆ ಕಾರಣ ಗೊತ್ತಾಯ್ತು. ಅದೇ ಆ ಮನೆಯವರು, ಇಂದು ನನ್ನನ್ನು ಮನೆಯೊಳಗೆ ಕರೆದು, ಸೋಫಾದಲ್ಲಿ ಕೂರಿಸಿ, ಕಾಫಿ ಕೊಡುತ್ತಾರಂದ್ರೆ ಇದು ಸಾಧ್ಯವಾದದ್ದು ಸಂವಿಧಾನದಿಂದ.

ನನ್ನೂರು ಕೊಡಗು. ನಾನು ದಲಿತ ಸಮುದಾಯಕ್ಕೆ ಸೇರಿದ ಹೆಣ್ಣು. ಇಲ್ಲಿನ ಮೂಲನಿವಾಸಿಗಳಾಗಿದ್ದೂ, ಇನ್ನೂ ಅಸ್ಪೃಶ್ಯರಾಗಿಯೇ ಉಳಿದಿರುವ ಅನೇಕ ಸಮುದಾಯಗಳೊಂದಿಗೆ ಶತಮಾನಗಳಾಚೆ ಕೊಡಗಿಗೆ ವಲಸೆ ಬಂದ ನಮ್ಮ ಸಮುದಾಯದ ಅನೇಕರಿಗೆ ಇಂದಿಗೂ ಮನೆಗಳಿಲ್ಲ.

ನನ್ನಮ್ಮನಂತೆ ಅನಕ್ಷರಸ್ಥರೂ, ಮತ್ತು ಅಕ್ಷರಸ್ಥರಾಗಿಯೂ ಶಿಕ್ಷಣ ವಂಚಿತರಾದ ಅನೇಕರು ಇಲ್ಲಿನ ತೋಟಗಳಲ್ಲಿ ಇಂದಿಗೂ ಕೂಲಿಯಾಳುಗಳಾಗಿಯೇ ಉಳಿದು ಹೋಗಿರುವುದಕ್ಕೆ ಕಾರಣ ಉಳ್ಳವರು ಹೇಳುವ ದುಶ್ಚಟಗಳೊಂದೇ ಅಲ್ಲವೆನ್ನುವುದನ್ನು ಬಿಡಿಸಿ ಹೇಳಬೇಕಿಲ್ಲ.

ನನ್ನಪ್ಪ ಹೇಳಿದ ಒಂದು ಸಂಗತಿ ನೆನಪಾಗುತ್ತದೆ. ಆ ಕಾಲಕ್ಕೆ ಮೂರ್ನಾಡಿನಲ್ಲಿದ್ದ ಇಂಗ್ಲಿಷ್ ಮೀಡಿಯಂ ಶಾಲೆಗೆ ನನ್ನನ್ನು ಸೇರಿಸುವ ಬಯಕೆಯಾದಾಗ, ಅಲ್ಲಿನ ಮ್ಯಾನೇಜ್ಮೆಂಟ್‌ಗೆ ಕೇಳಿ, ಸ್ವಲ್ಪ ಸ್ವಲ್ಪವೇ ಫೀಸ್ ಕಟ್ತೀನಿ ಅಂತ ನನ್ನಪ್ಪ ಕೋರಿಕೊಂಡಾಗ್ಯೂ, ಮ್ಯಾನೇಜ್ಮೆಂಟ್ ಒಪ್ಪದ ಕಾರಣ ನನ್ನನ್ನು ಸರ್ಕಾರಿ ಶಾಲೆಗೆ ಸೇರಿಸಬೇಕಾಯ್ತಂತೆ. ಈ ಸರ್ಕಾರಿ ಶಾಲೆಯೂ ಇಲ್ಲದೇ ಹೋಗಿದ್ದಿದ್ದರೆ! ಮತ್ತು ಶಿಕ್ಷಣ ಎಲ್ಲರಿಗೂ ಸಿಗಬೇಕೆಂದು ಸಂವಿಧಾನದಲ್ಲಿ ಇಲ್ಲದೇ ಹೋಗಿದ್ದಿದ್ದರೆ! ನೆನೆದರೇ ದಿಗಿಲು ನನಗೆ!

ಶಾಲೆಗಳಲ್ಲಿ ನನ್ನ ಕಲಿಕೆ ನೋಡಿ ನಮ್ಮಪ್ಪನಿಗೆ ಖುಷಿಯಾಗುತ್ತಿತ್ತು. ಆದರೆ ಯಾರ್ಯಾರೋ “ಹುಡುಗೀರ್ನ ಯಾಕೆ ಓದಿಸ್ತೀಯ?” ಅಂತ ಕೇಳ್ತಿದ್ರಂತೆ. ಆದ್ರೆ ನನ್ನೊಂದಿಗೆ ನನ್ನ ತಂಗಿ, ತಮ್ಮಂದಿರನ್ನೂ ಶಾಲೆಗೆ ಕಳಿಸಿದ ನನ್ನಪ್ಪ ಮತ್ತು ಅಮ್ಮನ ಪ್ರಜ್ಞೆಯ ಕಾರಣವಾಗಿ ನಾನೀಗ ಇಂದು ಸಂವಿಧಾನ ನೀಡಿದ ಮೀಸಲಾತಿಯ ಉಪಯೋಗದಿಂದ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದೇನೆ. ಮತ್ತು ಆರ್ಥಿಕ ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇನೆ.

” ಮಾನವತೆಯ ಮಹಾಶಕ್ತಿಯಾಗಿರುವ ಸಂವಿಧಾನವೇ ನಮ್ಮ ಬದುಕಿನ ಬೆಳಕು ಎಂದು ನನ್ನೊಳಗನ್ನು ಮತ್ತೆ ಎಚ್ಚರಗೊಳಿಸಿ ಕೊಳ್ಳುತ್ತಿದ್ದೇನೆ…”

ಆಂದೋಲನ ಡೆಸ್ಕ್

Recent Posts

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

29 mins ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

1 hour ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

1 hour ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

1 hour ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

1 hour ago

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

4 hours ago