ಹಾಡು ಪಾಡು

ಸಂವಿಧಾನ ಮತ್ತು ಅಪ್ಪನ ಕಣ್ಣ ಬೆಳಕು

ರಮ್ಯ ಕೆ ಜಿ ಮೂರ್ನಾಡು

ನಾನು ಸಣ್ಣವಳಿದ್ದಾಗ ನಮ್ಮ ಮನೆಯಲ್ಲಿ ಟಿವಿ ಇಲ್ಲದ ಕಾರಣ ಭಾನುವಾರ ನಮ್ಮಪ್ಪ ಪಿಚ್ಚರ್ ನೋಡಲು ಅವರ ಪರಿಚಯವಿರುವ ಒಂದು ಮನೆಗೆ ಕರೆದುಕೊಂಡು ಹೋಗುತ್ತಿದ್ದರು. ಅವರ ಟಿವಿ, ಹಾಲ್‌ನಲ್ಲಿದ್ದ ಕಾರಣ ನಾವು ಮನೆಯಿಂದ ಆಚೆ ಅಂದ್ರೆ ಹೊರಗಡೆ ಕೂತು ಪಿಚ್ಚರ್ ನೋಡ್ತಿದ್ದೆವು. ಆಗೊಂದು ದಿನ ‘ಹೇಮಾವತಿ’ ಪಿಚ್ಚರ್ ಹಾಕಿದ್ರು. ಅದ್ರಲ್ಲಿ ಹೀರೋ ಶ್ರೀನಿವಾಸಮೂರ್ತಿಯವರಿಗೆ ಬ್ರಾಹ್ಮಣ್ರು ಕೆಲವ್ರು “ನಮ್ ಸಂಸ್ಕಾರ, ಸಂಸ್ಕ ತಿ ಹಾಳ್ಮಾಡ್ದೆ‘ ಅಂತೆಲ್ಲ ಬೈತಿದ್ರು. ಶ್ರೀನಿವಾಸಮೂರ್ತಿ ಅವರಿಗೆಲ್ಲ ಮಾನವೀಯತೆಯ ಪಾಠ ಹೇಳ್ತಿದ್ದ. ಆಗ ನನ್ನಪ್ಪನ ಮುಖದಲ್ಲಿ ಎಂಥದ್ದೋ ಮಿಂಚು ಹೊಳಿತಿತ್ತು. ಆ ಮಿಂಚಿಗೆ ಕಾರಣ ಏನು ಅನ್ನೋದು ಆಗ ಗೊತ್ತಾಗಿರ್ಲಿಲ್ಲ. ಇತ್ತೀಚೆಗೆ ಮತ್ತೆ ಆ ಸಿನಿಮಾನ ನೋಡ್ದಾಗ ನನ್ನಪ್ಪನೊಳಗಿನ ಮಿಂಚಿಗೆ ಕಾರಣ ಗೊತ್ತಾಯ್ತು. ಅದೇ ಆ ಮನೆಯವರು, ಇಂದು ನನ್ನನ್ನು ಮನೆಯೊಳಗೆ ಕರೆದು, ಸೋಫಾದಲ್ಲಿ ಕೂರಿಸಿ, ಕಾಫಿ ಕೊಡುತ್ತಾರಂದ್ರೆ ಇದು ಸಾಧ್ಯವಾದದ್ದು ಸಂವಿಧಾನದಿಂದ.

ನನ್ನೂರು ಕೊಡಗು. ನಾನು ದಲಿತ ಸಮುದಾಯಕ್ಕೆ ಸೇರಿದ ಹೆಣ್ಣು. ಇಲ್ಲಿನ ಮೂಲನಿವಾಸಿಗಳಾಗಿದ್ದೂ, ಇನ್ನೂ ಅಸ್ಪೃಶ್ಯರಾಗಿಯೇ ಉಳಿದಿರುವ ಅನೇಕ ಸಮುದಾಯಗಳೊಂದಿಗೆ ಶತಮಾನಗಳಾಚೆ ಕೊಡಗಿಗೆ ವಲಸೆ ಬಂದ ನಮ್ಮ ಸಮುದಾಯದ ಅನೇಕರಿಗೆ ಇಂದಿಗೂ ಮನೆಗಳಿಲ್ಲ.

ನನ್ನಮ್ಮನಂತೆ ಅನಕ್ಷರಸ್ಥರೂ, ಮತ್ತು ಅಕ್ಷರಸ್ಥರಾಗಿಯೂ ಶಿಕ್ಷಣ ವಂಚಿತರಾದ ಅನೇಕರು ಇಲ್ಲಿನ ತೋಟಗಳಲ್ಲಿ ಇಂದಿಗೂ ಕೂಲಿಯಾಳುಗಳಾಗಿಯೇ ಉಳಿದು ಹೋಗಿರುವುದಕ್ಕೆ ಕಾರಣ ಉಳ್ಳವರು ಹೇಳುವ ದುಶ್ಚಟಗಳೊಂದೇ ಅಲ್ಲವೆನ್ನುವುದನ್ನು ಬಿಡಿಸಿ ಹೇಳಬೇಕಿಲ್ಲ.

ನನ್ನಪ್ಪ ಹೇಳಿದ ಒಂದು ಸಂಗತಿ ನೆನಪಾಗುತ್ತದೆ. ಆ ಕಾಲಕ್ಕೆ ಮೂರ್ನಾಡಿನಲ್ಲಿದ್ದ ಇಂಗ್ಲಿಷ್ ಮೀಡಿಯಂ ಶಾಲೆಗೆ ನನ್ನನ್ನು ಸೇರಿಸುವ ಬಯಕೆಯಾದಾಗ, ಅಲ್ಲಿನ ಮ್ಯಾನೇಜ್ಮೆಂಟ್‌ಗೆ ಕೇಳಿ, ಸ್ವಲ್ಪ ಸ್ವಲ್ಪವೇ ಫೀಸ್ ಕಟ್ತೀನಿ ಅಂತ ನನ್ನಪ್ಪ ಕೋರಿಕೊಂಡಾಗ್ಯೂ, ಮ್ಯಾನೇಜ್ಮೆಂಟ್ ಒಪ್ಪದ ಕಾರಣ ನನ್ನನ್ನು ಸರ್ಕಾರಿ ಶಾಲೆಗೆ ಸೇರಿಸಬೇಕಾಯ್ತಂತೆ. ಈ ಸರ್ಕಾರಿ ಶಾಲೆಯೂ ಇಲ್ಲದೇ ಹೋಗಿದ್ದಿದ್ದರೆ! ಮತ್ತು ಶಿಕ್ಷಣ ಎಲ್ಲರಿಗೂ ಸಿಗಬೇಕೆಂದು ಸಂವಿಧಾನದಲ್ಲಿ ಇಲ್ಲದೇ ಹೋಗಿದ್ದಿದ್ದರೆ! ನೆನೆದರೇ ದಿಗಿಲು ನನಗೆ!

ಶಾಲೆಗಳಲ್ಲಿ ನನ್ನ ಕಲಿಕೆ ನೋಡಿ ನಮ್ಮಪ್ಪನಿಗೆ ಖುಷಿಯಾಗುತ್ತಿತ್ತು. ಆದರೆ ಯಾರ್ಯಾರೋ “ಹುಡುಗೀರ್ನ ಯಾಕೆ ಓದಿಸ್ತೀಯ?” ಅಂತ ಕೇಳ್ತಿದ್ರಂತೆ. ಆದ್ರೆ ನನ್ನೊಂದಿಗೆ ನನ್ನ ತಂಗಿ, ತಮ್ಮಂದಿರನ್ನೂ ಶಾಲೆಗೆ ಕಳಿಸಿದ ನನ್ನಪ್ಪ ಮತ್ತು ಅಮ್ಮನ ಪ್ರಜ್ಞೆಯ ಕಾರಣವಾಗಿ ನಾನೀಗ ಇಂದು ಸಂವಿಧಾನ ನೀಡಿದ ಮೀಸಲಾತಿಯ ಉಪಯೋಗದಿಂದ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದೇನೆ. ಮತ್ತು ಆರ್ಥಿಕ ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇನೆ.

” ಮಾನವತೆಯ ಮಹಾಶಕ್ತಿಯಾಗಿರುವ ಸಂವಿಧಾನವೇ ನಮ್ಮ ಬದುಕಿನ ಬೆಳಕು ಎಂದು ನನ್ನೊಳಗನ್ನು ಮತ್ತೆ ಎಚ್ಚರಗೊಳಿಸಿ ಕೊಳ್ಳುತ್ತಿದ್ದೇನೆ…”

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

23 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

23 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

23 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

23 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

23 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

23 hours ago