ಹಾಡು ಪಾಡು

ಹಾಡೇ ಬದುಕಾದ ರಂಗಸಮುದ್ರದ ಹೊನ್ನಮ್ಮ

ತಾಯಿ ಪದ ಹೇಳುವುದಕ್ಕೆಂದು ಹೊರಟಲ್ಲೆಲ್ಲ, ಇವರು ಕದ್ದು ಮುಚ್ಚಿಯಾದರೂ ಹಾಜರಾಗುತ್ತಿದ್ದರು.

ಚಾಮರಾಜನಗರ ಜಿಲ್ಲೆಯ ರಾಮಸಮುದ್ರ ಹೊನ್ನಮ್ಮ ಅವರ ತವರು ಮನೆಯಷ್ಟೇ ಅಲ್ಲ, ಮದುವೆಯಾಗಿ ಬಂದ ಗಂಡನ ಮನೆ ಕೂಡ. ಸೋದರ ಮಾವನನ್ನೇ ಮದುವೆಯಾದ ಕಾರಣ ಊರ ತೊರೆವ ಪ್ರಸಂಗವೇ ಇವರಿಗೆ ಎದುರಾಗಲಿಲ್ಲ.

ತಂದೆಯನ್ನು ಕಳೆದುಕೊಂಡಾಗ ಹೊನ್ನಮ್ಮ ಐದನೇ ತರಗತಿಯಲ್ಲಿ ಓದುತ್ತಿದ್ದರು. ತಾಯಿಯೊಬ್ಬರೇ ಮನೆಗೆ
ಆಧಾರ. ಓದಿಸೆಂದು ಕೇಳುವುದಾದರೂ ಹೇಗೆ! ಆದರೆ, ತಾಯಿ ಸೋಬಾನೆ ಪದವನ್ನು ಎಷ್ಟು ಇಂಪಾಗಿ
ಹಾಡುತ್ತಿದ್ದರೆಂದರೆ, ಜನಪದ ಹಾಡುಗಳನ್ನು ಕಲಿಯಲು ಹೊನ್ನಮ್ಮ ಅವರಿಗೆ ಆಸಕ್ತಿ ಮೂಡಿದ್ದೇ ಅವರಿಂದ. ಹಾಗೆಂದು ತಾಯಿಗೆ ಮಗಳು ಸೋಬಾನೆ ಪದಗಳನ್ನು ಕಲಿಯುವುದು ಸ್ವಲ್ಪವೂ ಇಷ್ಟವಿರಲಿಲ್ಲ.

‘ನೀ ಬರ್ಬ್ಯಾಡ. ಹೋಗು’ ಎಂದು ಗದರುತ್ತಿದ್ದರಂತೆ. ಹೊನ್ನಮ್ಮ ಅವರಿಗೆ ಪದ ಕಲಿವ ಆಸೆ. ತಾಯಿ ಪದ ಹೇಳುವುದಕ್ಕೆಂದು ಹೊರಟಲ್ಲೆಲ್ಲ, ಇವರು ಕದ್ದು ಮುಚ್ಚಿಯಾದರೂ ಹಾಜರಾಗುತ್ತಿದ್ದರು. ಹೀಗೆ ಮರೆಯಲ್ಲಿ ನಿಂತು ಕೇಳಿದ ಹಾಡುಗಳೆಲ್ಲ ಮನೆಗೆಲಸದ ಸಾಂಗತ್ಯದಲ್ಲಿ ಇವರಿಗೆ ಬಾಯಿಪಾಠವಾಗುತ್ತಿದ್ದವು.

ಸೋಬಾನೆ ಪದವನ್ನೇನೊ ಹೊನ್ನಮ್ಮ ತಾಯಿಯ ಸಂಗದಲ್ಲಿ ಕಲಿತುಬಿಟ್ಟರು. ದೇವರ ಪದಗಳು, ಮಾದೇಶ್ವರ ಹಾಡು, ಮಂಟೇಸ್ವಾಮಿ ಹಾಡು, ಜೋಗುಳ ಪದಗಳನ್ನೆಲ್ಲ ಕಲಿತದ್ದು, ನಾಟಿ ಕೆಲಸಕ್ಕೆಂದು ಗದ್ದೆಗೆ ಹೋಗುತ್ತಿದ್ದಾಗ. ಆಗೆಲ್ಲ ಜನಪದ ಹಾಡನ್ನು ಹೇಳಿದರೆ ಮುಖ್ಯ ಹಾಡುಗಾರರಿಗೆ ಮಾತ್ರವಲ್ಲ
ಸೊಲ್ಲು ಹಾಕಿದವರಿಗೂ ಐದೊ ಹತ್ತೊ ಪೈಸೆಗಳನ್ನು ಕೊಡುತ್ತಿದ್ದರು. ಹಾಗಾಗಿ ಕೆಲಸ, ಪದ್ಯ ಕಲಿಕೆ ಎರಡಕ್ಕೂ ಊರ ಗದ್ದೆಯೇ ವೇದಿಕೆಯಾಯಿತು.

ಹಾಡುವುದಕ್ಕೆ ತಾಯಿ ಮೊದಲ ಗುರು. ಜೋಗುಳ ಹಾಡು, ಧಾರೆಯೆರೆವ ಹಾಡುಗಳನ್ನೆಲ್ಲ ಇವರಿಗೆ ಕಲಿಸಿಕೊಟ್ಟವರು, ಸಂಬಂಧಿಕರೇ ಆಗಿದ್ದ ಹನುಮಮ್ಮ ಅವರು. ತಾಯಿ ಪ್ರೀತಿಯ ಪಡಿಯಚ್ಚಾಗಿದ್ದ ಹನುಮಮ್ಮ ಅವರು ಹೊನ್ನಮ್ಮ ಅವರ ಎರಡನೇ ಗುರು.

‘ಹಾಡು ನನ್ ತಾಯಿ. ಪದ ಕಲ್ಕ್ತಂಡು ನನ್ ಹೆಸ್ರು ಉಳ್ಸೇ ನನ್ನವ್ವ’ ಎಂದು ಸೊಲ್ಲು ಹಾಕುವುದಕ್ಕೆ ಕರೆದುಕೊಂಡು ಹೋಗುತ್ತಿದ್ದರು. ತಾನು ಪಡೆದ ಜನಪದ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆಲ್ಲ ಇವರೇ ಕಾರಣ ಎಂದು ಹೊನ್ನಮ್ಮ ಅವರಿಬ್ಬರನ್ನೂ ನೆನಪಿಸಿಕೊಳ್ಳುತ್ತಾರೆ.

ಕೆಲಸಕ್ಕೆ ಬರುವ ಹೆಂಗಸರ ಗುಂಪೊಂದನ್ನು ಕಟ್ಟಿಕೊಂಡು, ಹಾಡು ಹೇಳುವುದಕ್ಕೆ ತಯಾರಾಗೇಬಿಟ್ಟರು. ಏನಾದರೂ ಕೂಲಿ ಕೆಲಸ ಮಾಡಲೇಬೇಕಿತ್ತು. ನಡುವೆ, ಕೆಲ ಕಾರ್ಯಕ್ರಮಗಳು ದೊರೆಯಿತು. ಅರಮನೆಯನ್ನು ಕಟ್ಟಿಕೊಳ್ಳುವಷ್ಟು ದುಡ್ಡಾಗದಿದ್ದರೂ ತಕ್ಕ ಮಟ್ಟಿಗೆ ಬದುಕಿಗೆ ನೆರವಾಯಿತು. ಹೊಟ್ಟೆ – ಬಟ್ಟೆಗೆ ಪರವಾಗಿಲ್ಲ ಎನ್ನುವ ಹೊತ್ತಿಗೆ ಗಂಡ ಮತ್ತು ತಾಯಿಯನ್ನು ಕಳೆದುಕೊಂಡರು. ಜೀವನ ಕಂಗೆಟ್ಟ ಆ ಸಂದರ್ಭವನ್ನು ನೆನೆದಾಗ ಇಂದಿಗೂ ಹೊನ್ನಮ್ಮ ಅವರ ಕಣ್ಣಾಲಿಗಳು ನೀರ ಹರಿಸುತ್ತವೆ!

 

ಆಂದೋಲನ ಡೆಸ್ಕ್

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

5 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

5 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

5 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

5 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

5 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

6 hours ago