ಹಾಡು ಪಾಡು

ಹಾಡೇ ಬದುಕಾದ ರಂಗಸಮುದ್ರದ ಹೊನ್ನಮ್ಮ

ತಾಯಿ ಪದ ಹೇಳುವುದಕ್ಕೆಂದು ಹೊರಟಲ್ಲೆಲ್ಲ, ಇವರು ಕದ್ದು ಮುಚ್ಚಿಯಾದರೂ ಹಾಜರಾಗುತ್ತಿದ್ದರು.

ಚಾಮರಾಜನಗರ ಜಿಲ್ಲೆಯ ರಾಮಸಮುದ್ರ ಹೊನ್ನಮ್ಮ ಅವರ ತವರು ಮನೆಯಷ್ಟೇ ಅಲ್ಲ, ಮದುವೆಯಾಗಿ ಬಂದ ಗಂಡನ ಮನೆ ಕೂಡ. ಸೋದರ ಮಾವನನ್ನೇ ಮದುವೆಯಾದ ಕಾರಣ ಊರ ತೊರೆವ ಪ್ರಸಂಗವೇ ಇವರಿಗೆ ಎದುರಾಗಲಿಲ್ಲ.

ತಂದೆಯನ್ನು ಕಳೆದುಕೊಂಡಾಗ ಹೊನ್ನಮ್ಮ ಐದನೇ ತರಗತಿಯಲ್ಲಿ ಓದುತ್ತಿದ್ದರು. ತಾಯಿಯೊಬ್ಬರೇ ಮನೆಗೆ
ಆಧಾರ. ಓದಿಸೆಂದು ಕೇಳುವುದಾದರೂ ಹೇಗೆ! ಆದರೆ, ತಾಯಿ ಸೋಬಾನೆ ಪದವನ್ನು ಎಷ್ಟು ಇಂಪಾಗಿ
ಹಾಡುತ್ತಿದ್ದರೆಂದರೆ, ಜನಪದ ಹಾಡುಗಳನ್ನು ಕಲಿಯಲು ಹೊನ್ನಮ್ಮ ಅವರಿಗೆ ಆಸಕ್ತಿ ಮೂಡಿದ್ದೇ ಅವರಿಂದ. ಹಾಗೆಂದು ತಾಯಿಗೆ ಮಗಳು ಸೋಬಾನೆ ಪದಗಳನ್ನು ಕಲಿಯುವುದು ಸ್ವಲ್ಪವೂ ಇಷ್ಟವಿರಲಿಲ್ಲ.

‘ನೀ ಬರ್ಬ್ಯಾಡ. ಹೋಗು’ ಎಂದು ಗದರುತ್ತಿದ್ದರಂತೆ. ಹೊನ್ನಮ್ಮ ಅವರಿಗೆ ಪದ ಕಲಿವ ಆಸೆ. ತಾಯಿ ಪದ ಹೇಳುವುದಕ್ಕೆಂದು ಹೊರಟಲ್ಲೆಲ್ಲ, ಇವರು ಕದ್ದು ಮುಚ್ಚಿಯಾದರೂ ಹಾಜರಾಗುತ್ತಿದ್ದರು. ಹೀಗೆ ಮರೆಯಲ್ಲಿ ನಿಂತು ಕೇಳಿದ ಹಾಡುಗಳೆಲ್ಲ ಮನೆಗೆಲಸದ ಸಾಂಗತ್ಯದಲ್ಲಿ ಇವರಿಗೆ ಬಾಯಿಪಾಠವಾಗುತ್ತಿದ್ದವು.

ಸೋಬಾನೆ ಪದವನ್ನೇನೊ ಹೊನ್ನಮ್ಮ ತಾಯಿಯ ಸಂಗದಲ್ಲಿ ಕಲಿತುಬಿಟ್ಟರು. ದೇವರ ಪದಗಳು, ಮಾದೇಶ್ವರ ಹಾಡು, ಮಂಟೇಸ್ವಾಮಿ ಹಾಡು, ಜೋಗುಳ ಪದಗಳನ್ನೆಲ್ಲ ಕಲಿತದ್ದು, ನಾಟಿ ಕೆಲಸಕ್ಕೆಂದು ಗದ್ದೆಗೆ ಹೋಗುತ್ತಿದ್ದಾಗ. ಆಗೆಲ್ಲ ಜನಪದ ಹಾಡನ್ನು ಹೇಳಿದರೆ ಮುಖ್ಯ ಹಾಡುಗಾರರಿಗೆ ಮಾತ್ರವಲ್ಲ
ಸೊಲ್ಲು ಹಾಕಿದವರಿಗೂ ಐದೊ ಹತ್ತೊ ಪೈಸೆಗಳನ್ನು ಕೊಡುತ್ತಿದ್ದರು. ಹಾಗಾಗಿ ಕೆಲಸ, ಪದ್ಯ ಕಲಿಕೆ ಎರಡಕ್ಕೂ ಊರ ಗದ್ದೆಯೇ ವೇದಿಕೆಯಾಯಿತು.

ಹಾಡುವುದಕ್ಕೆ ತಾಯಿ ಮೊದಲ ಗುರು. ಜೋಗುಳ ಹಾಡು, ಧಾರೆಯೆರೆವ ಹಾಡುಗಳನ್ನೆಲ್ಲ ಇವರಿಗೆ ಕಲಿಸಿಕೊಟ್ಟವರು, ಸಂಬಂಧಿಕರೇ ಆಗಿದ್ದ ಹನುಮಮ್ಮ ಅವರು. ತಾಯಿ ಪ್ರೀತಿಯ ಪಡಿಯಚ್ಚಾಗಿದ್ದ ಹನುಮಮ್ಮ ಅವರು ಹೊನ್ನಮ್ಮ ಅವರ ಎರಡನೇ ಗುರು.

‘ಹಾಡು ನನ್ ತಾಯಿ. ಪದ ಕಲ್ಕ್ತಂಡು ನನ್ ಹೆಸ್ರು ಉಳ್ಸೇ ನನ್ನವ್ವ’ ಎಂದು ಸೊಲ್ಲು ಹಾಕುವುದಕ್ಕೆ ಕರೆದುಕೊಂಡು ಹೋಗುತ್ತಿದ್ದರು. ತಾನು ಪಡೆದ ಜನಪದ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆಲ್ಲ ಇವರೇ ಕಾರಣ ಎಂದು ಹೊನ್ನಮ್ಮ ಅವರಿಬ್ಬರನ್ನೂ ನೆನಪಿಸಿಕೊಳ್ಳುತ್ತಾರೆ.

ಕೆಲಸಕ್ಕೆ ಬರುವ ಹೆಂಗಸರ ಗುಂಪೊಂದನ್ನು ಕಟ್ಟಿಕೊಂಡು, ಹಾಡು ಹೇಳುವುದಕ್ಕೆ ತಯಾರಾಗೇಬಿಟ್ಟರು. ಏನಾದರೂ ಕೂಲಿ ಕೆಲಸ ಮಾಡಲೇಬೇಕಿತ್ತು. ನಡುವೆ, ಕೆಲ ಕಾರ್ಯಕ್ರಮಗಳು ದೊರೆಯಿತು. ಅರಮನೆಯನ್ನು ಕಟ್ಟಿಕೊಳ್ಳುವಷ್ಟು ದುಡ್ಡಾಗದಿದ್ದರೂ ತಕ್ಕ ಮಟ್ಟಿಗೆ ಬದುಕಿಗೆ ನೆರವಾಯಿತು. ಹೊಟ್ಟೆ – ಬಟ್ಟೆಗೆ ಪರವಾಗಿಲ್ಲ ಎನ್ನುವ ಹೊತ್ತಿಗೆ ಗಂಡ ಮತ್ತು ತಾಯಿಯನ್ನು ಕಳೆದುಕೊಂಡರು. ಜೀವನ ಕಂಗೆಟ್ಟ ಆ ಸಂದರ್ಭವನ್ನು ನೆನೆದಾಗ ಇಂದಿಗೂ ಹೊನ್ನಮ್ಮ ಅವರ ಕಣ್ಣಾಲಿಗಳು ನೀರ ಹರಿಸುತ್ತವೆ!

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

42 mins ago

ಓದುಗರ ಪತ್ರ: ಗಿಡಗಳನ್ನು ನೆಟ್ಟು ಪರಿಸರ ಉಳಿಸಿ

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…

44 mins ago

ಓದುಗರ ಪತ್ರ: ಹಗಲು ದರೋಡೆ ನಿಲ್ಲಿಸಿ

ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…

47 mins ago

‘ಕೆಡಿ’ ಹಾಡು, ‘ಲವ್ ಮಾಕ್‌ಟೈಲ್ ೩’, ಕಥೆಯ ಆತ್ಮ, ನಿರೂಪಣೆ, ಕೃತಿಸ್ವಾಮ್ಯಗಳ ಸುತ್ತ

ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…

49 mins ago

ಸಮರ್ಪಕ ನಿರ್ವಹಣೆಯಿಲ್ಲದೇ ಸ್ಥಗಿತಗೊಂಡ ಕುಡಿಯುವ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…

56 mins ago

ಭೇರ್ಯ ಗ್ರಾಪಂಗೆ ೨ನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ

ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…

1 hour ago