ಹಾಡು ಪಾಡು

ಹಾಡೇ ಬದುಕಾದ ರಂಗಸಮುದ್ರದ ಹೊನ್ನಮ್ಮ

ತಾಯಿ ಪದ ಹೇಳುವುದಕ್ಕೆಂದು ಹೊರಟಲ್ಲೆಲ್ಲ, ಇವರು ಕದ್ದು ಮುಚ್ಚಿಯಾದರೂ ಹಾಜರಾಗುತ್ತಿದ್ದರು.

ಚಾಮರಾಜನಗರ ಜಿಲ್ಲೆಯ ರಾಮಸಮುದ್ರ ಹೊನ್ನಮ್ಮ ಅವರ ತವರು ಮನೆಯಷ್ಟೇ ಅಲ್ಲ, ಮದುವೆಯಾಗಿ ಬಂದ ಗಂಡನ ಮನೆ ಕೂಡ. ಸೋದರ ಮಾವನನ್ನೇ ಮದುವೆಯಾದ ಕಾರಣ ಊರ ತೊರೆವ ಪ್ರಸಂಗವೇ ಇವರಿಗೆ ಎದುರಾಗಲಿಲ್ಲ.

ತಂದೆಯನ್ನು ಕಳೆದುಕೊಂಡಾಗ ಹೊನ್ನಮ್ಮ ಐದನೇ ತರಗತಿಯಲ್ಲಿ ಓದುತ್ತಿದ್ದರು. ತಾಯಿಯೊಬ್ಬರೇ ಮನೆಗೆ
ಆಧಾರ. ಓದಿಸೆಂದು ಕೇಳುವುದಾದರೂ ಹೇಗೆ! ಆದರೆ, ತಾಯಿ ಸೋಬಾನೆ ಪದವನ್ನು ಎಷ್ಟು ಇಂಪಾಗಿ
ಹಾಡುತ್ತಿದ್ದರೆಂದರೆ, ಜನಪದ ಹಾಡುಗಳನ್ನು ಕಲಿಯಲು ಹೊನ್ನಮ್ಮ ಅವರಿಗೆ ಆಸಕ್ತಿ ಮೂಡಿದ್ದೇ ಅವರಿಂದ. ಹಾಗೆಂದು ತಾಯಿಗೆ ಮಗಳು ಸೋಬಾನೆ ಪದಗಳನ್ನು ಕಲಿಯುವುದು ಸ್ವಲ್ಪವೂ ಇಷ್ಟವಿರಲಿಲ್ಲ.

‘ನೀ ಬರ್ಬ್ಯಾಡ. ಹೋಗು’ ಎಂದು ಗದರುತ್ತಿದ್ದರಂತೆ. ಹೊನ್ನಮ್ಮ ಅವರಿಗೆ ಪದ ಕಲಿವ ಆಸೆ. ತಾಯಿ ಪದ ಹೇಳುವುದಕ್ಕೆಂದು ಹೊರಟಲ್ಲೆಲ್ಲ, ಇವರು ಕದ್ದು ಮುಚ್ಚಿಯಾದರೂ ಹಾಜರಾಗುತ್ತಿದ್ದರು. ಹೀಗೆ ಮರೆಯಲ್ಲಿ ನಿಂತು ಕೇಳಿದ ಹಾಡುಗಳೆಲ್ಲ ಮನೆಗೆಲಸದ ಸಾಂಗತ್ಯದಲ್ಲಿ ಇವರಿಗೆ ಬಾಯಿಪಾಠವಾಗುತ್ತಿದ್ದವು.

ಸೋಬಾನೆ ಪದವನ್ನೇನೊ ಹೊನ್ನಮ್ಮ ತಾಯಿಯ ಸಂಗದಲ್ಲಿ ಕಲಿತುಬಿಟ್ಟರು. ದೇವರ ಪದಗಳು, ಮಾದೇಶ್ವರ ಹಾಡು, ಮಂಟೇಸ್ವಾಮಿ ಹಾಡು, ಜೋಗುಳ ಪದಗಳನ್ನೆಲ್ಲ ಕಲಿತದ್ದು, ನಾಟಿ ಕೆಲಸಕ್ಕೆಂದು ಗದ್ದೆಗೆ ಹೋಗುತ್ತಿದ್ದಾಗ. ಆಗೆಲ್ಲ ಜನಪದ ಹಾಡನ್ನು ಹೇಳಿದರೆ ಮುಖ್ಯ ಹಾಡುಗಾರರಿಗೆ ಮಾತ್ರವಲ್ಲ
ಸೊಲ್ಲು ಹಾಕಿದವರಿಗೂ ಐದೊ ಹತ್ತೊ ಪೈಸೆಗಳನ್ನು ಕೊಡುತ್ತಿದ್ದರು. ಹಾಗಾಗಿ ಕೆಲಸ, ಪದ್ಯ ಕಲಿಕೆ ಎರಡಕ್ಕೂ ಊರ ಗದ್ದೆಯೇ ವೇದಿಕೆಯಾಯಿತು.

ಹಾಡುವುದಕ್ಕೆ ತಾಯಿ ಮೊದಲ ಗುರು. ಜೋಗುಳ ಹಾಡು, ಧಾರೆಯೆರೆವ ಹಾಡುಗಳನ್ನೆಲ್ಲ ಇವರಿಗೆ ಕಲಿಸಿಕೊಟ್ಟವರು, ಸಂಬಂಧಿಕರೇ ಆಗಿದ್ದ ಹನುಮಮ್ಮ ಅವರು. ತಾಯಿ ಪ್ರೀತಿಯ ಪಡಿಯಚ್ಚಾಗಿದ್ದ ಹನುಮಮ್ಮ ಅವರು ಹೊನ್ನಮ್ಮ ಅವರ ಎರಡನೇ ಗುರು.

‘ಹಾಡು ನನ್ ತಾಯಿ. ಪದ ಕಲ್ಕ್ತಂಡು ನನ್ ಹೆಸ್ರು ಉಳ್ಸೇ ನನ್ನವ್ವ’ ಎಂದು ಸೊಲ್ಲು ಹಾಕುವುದಕ್ಕೆ ಕರೆದುಕೊಂಡು ಹೋಗುತ್ತಿದ್ದರು. ತಾನು ಪಡೆದ ಜನಪದ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆಲ್ಲ ಇವರೇ ಕಾರಣ ಎಂದು ಹೊನ್ನಮ್ಮ ಅವರಿಬ್ಬರನ್ನೂ ನೆನಪಿಸಿಕೊಳ್ಳುತ್ತಾರೆ.

ಕೆಲಸಕ್ಕೆ ಬರುವ ಹೆಂಗಸರ ಗುಂಪೊಂದನ್ನು ಕಟ್ಟಿಕೊಂಡು, ಹಾಡು ಹೇಳುವುದಕ್ಕೆ ತಯಾರಾಗೇಬಿಟ್ಟರು. ಏನಾದರೂ ಕೂಲಿ ಕೆಲಸ ಮಾಡಲೇಬೇಕಿತ್ತು. ನಡುವೆ, ಕೆಲ ಕಾರ್ಯಕ್ರಮಗಳು ದೊರೆಯಿತು. ಅರಮನೆಯನ್ನು ಕಟ್ಟಿಕೊಳ್ಳುವಷ್ಟು ದುಡ್ಡಾಗದಿದ್ದರೂ ತಕ್ಕ ಮಟ್ಟಿಗೆ ಬದುಕಿಗೆ ನೆರವಾಯಿತು. ಹೊಟ್ಟೆ – ಬಟ್ಟೆಗೆ ಪರವಾಗಿಲ್ಲ ಎನ್ನುವ ಹೊತ್ತಿಗೆ ಗಂಡ ಮತ್ತು ತಾಯಿಯನ್ನು ಕಳೆದುಕೊಂಡರು. ಜೀವನ ಕಂಗೆಟ್ಟ ಆ ಸಂದರ್ಭವನ್ನು ನೆನೆದಾಗ ಇಂದಿಗೂ ಹೊನ್ನಮ್ಮ ಅವರ ಕಣ್ಣಾಲಿಗಳು ನೀರ ಹರಿಸುತ್ತವೆ!

 

ಆಂದೋಲನ ಡೆಸ್ಕ್

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

6 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

7 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

8 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

8 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

10 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

11 hours ago