ಹಾಡು ಪಾಡು

ಮಾಧವರಾಯರು ಹೇಳಿದ ಮೋತಿಖಾನೆಯ ಕಥೆ

ಸಿರಿ ಮೈಸೂರು

ಮೈಸೂರು ಮಹಾನಗರಪಾಲಿಕೆ ಕಚೇರಿಯ ಎದುರಿಗಿರುವ ಕರಿಕಲ್ಲು ತೊಟ್ಟಿ ದ್ವಾರ ಅರಮನೆಗೆ ಅಗತ್ಯ ದಾಸ್ತಾನುಗಳನ್ನು ಒದಗಿಸಲು ಕಟ್ಟಿದ್ದು ಎಂಬುದು ಎಷ್ಟು ಜನರಿಗೆ ಗೊತ್ತು? ಹೌದು..ಕರಿಕಲ್ಲು ತೊಟ್ಟಿಯನ್ನು ಕಟ್ಟಿದ್ದೇ ಹೊರಗಿನಿಂದ ದಿನಸಿ, ದಾಸ್ತಾನುಗಳನ್ನು ತರಲು ಎನ್ನುತ್ತದೆ ಇತಿಹಾಸ. ಅದಕ್ಕೆ ಅಲ್ಲೇ ಏಕೆ ದ್ವಾರ ಕಟ್ಟಿದರು ಎಂಬುದಕ್ಕೆ ಎರಡು ಕಾರಣಗಳಿವೆ. ದೇವರಾಜ ಮಾರುಕಟ್ಟೆಗೆ ಹತ್ತಿರವಾಗುತ್ತದೆ ಎಂಬುದು ಒಂದು ಕಾರಣವಾದರೆ ಅಲ್ಲೇ ಇದ್ದ ಮೋತಿಖಾನೆ ಮತ್ತೊಂದು ಕಾರಣ.

ಮೈಸೂರು ಮಹಾನಗರಪಾಲಿಕೆ ಕಚೇರಿಯ ರಸ್ತೆಯಲ್ಲೇ (ಸಯ್ಯಾಜಿರಾವ್‌ ರಸ್ತೆ) ಸೀದಾ ನಡೆದು ಹೋದರೆ ಎಡಭಾಗಕ್ಕೆ ಬನುಮಯ್ಯ ಕಾಲೇಜು ಸಿಗುತ್ತದೆ. ಈಗ ಬನುಮಯ್ಯ ಕಾಲೇಜಿನ ಸ್ನಾತಕೋತ್ತರ ವಿಭಾಗವಾಗಿರುವ ಈ ಪಾರಂಪರಿಕ ಕಟ್ಟಡ ಆಗಿನ ಕಾಲದಲ್ಲಿ ಮೋತೀಖಾನೆಯಾಗಿತ್ತಂತೆʼ ಎನ್ನುತ್ತಾ ಕೈಯಲ್ಲಿದ್ದ ಎಳನೀರು ಬುರುಡೆಯಲ್ಲಿ ಒಂದು ಗುಟುಕು ಕುಡಿದು ಬಾಯಿ ಒರೆಸಿಕೊಂಡರು ಮಾಧವರಾಯರು.

ಅಂದಹಾಗೆ ಮಾಧವರಾಯರು ಮಾತಿಗೆ ಸಿಕ್ಕಿದ್ದು ಬನುಮಯ್ಯ ಕಾಲೇಜಿನ ಬಗಲಿಗಿರುವ ಜಗುಲಿಯೊಂದರಲ್ಲಿ. ʼಇಲ್ಲಿ ಮೋತೀಖಾನೆ ಯಾವ್ದು?ʼ ಎಂಬ ಪ್ರಶ್ನೆಗೆ ಬಹಳ ವಿವರವಾಗಿ ಉತ್ತರ ಕೊಟ್ಟ ಅವರ ಬತ್ತಳಿಕೆಯಲ್ಲಿ ಬಹಳಷ್ಟು ಆಸಕ್ತಿದಾಯಕ ಕಥೆಗಳಿದ್ದವು. ʼಮೋತಿಖಾನೆ ನಿರ್ಮಾಣವಾದದ್ದೇ ದಾಸ್ತಾನು ಹಾಗೂ ದಿನಸಿಗಳನ್ನು ಕೂಡಿಡಲು. ಅರಮನೆ ಎಂದ ಮಾತ್ರಕ್ಕೆ ಎಲ್ಲವನ್ನೂ ಒಳಗೇ ಇಟ್ಟುಕೊಳ್ಳೋಕೆ ಆಗತ್ಯೇ? ಅದಕ್ಕೆಂದೇ ಮೋತೀಖಾನೆ ಕಟ್ಟಿಸಿದ್ರು ನಮ್ಮ ರಾಜರು. ಅಲ್ಲಿಂದ ಸಾಮಾನು ಒಳತರಲು ಕರಿಕಲ್ಲು ತೊಟ್ಟಿ ನಿರ್ಮಾಣವಾಯ್ತು. ಅರಮನೆಗೆ ಅಗತ್ಯ ದಾಸ್ತಾನು ಬರುತ್ತಿದುದೇ ಇಲ್ಲಿಂದʼ ಎನ್ನುತ್ತಾ ಆಸಕ್ತಿದಾಯಕವಾಗಿ ಕಥೆ ಮುಂದುವರೆಸಿದರು ರಾಯರು.

ʼಆಗಿನ ಕಾಲದಲ್ಲಿ ಕುಂಚಟಿಗರ ಸಮುದಾಯ ಧರ್ಮಪ್ರಕಾಶ ಡಿ.ಬನುಮಯ್ಯ ಅವರದ್ದು ದೊಡ್ಡ ಹೆಸರು. ಸಾಮಾನ್ಯ ಕುಟುಂಬದಿಂದ ಬಂದರೂ ಎಲ್ಲರಿಗೂ ಶಿಕ್ಷಣ ನೀಡೋಕೆ ಶ್ರಮಿಸಿದ ಅವರ ಕೆಲಸಕ್ಕೆ ಅರಸರು ನೀಡಿದ ಉಡುಗೊರೆಯೇ ಮೋತೀಖಾನೆಯ ಕಟ್ಟಡ. ರಸ್ತೆಯ ಒಂದು ಬದಿಯಲ್ಲಿ ಬನುಮಯ್ಯನವರೇ ಕಟ್ಟಡ ಕಟ್ಟಿಸಿದರೆ ಇನ್ನೊಂದು ಬದಿಯಲ್ಲಿದ್ದ ಕಟ್ಟಡವನ್ನು ಅರಸರು ನೀಡಿದರು. ಕೆಲಕಾಲ ಅಲ್ಲಿ ಶಿಕ್ಷಣ ಸಂಸ್ಥೆ ನಡೆಯಿತು. ಆನಂತರ ಬನುಮಯ್ಯ ಟ್ರಸ್ಟ್‌ ವತಿಯಿಂದ ಆ ಕಟ್ಟಡವನ್ನು ಜನತಾ ಬಜಾ಼ರ್‌ಗೆ ಬಾಡಿಗೆಗೆ ನೀಡಲಾಗಿತ್ತು. ಅದೆಲ್ಲಾ ಆದಮೇಲೆ ಕೆಲ ವರ್ಷಗಳ ಹಿಂದೆ ಶೈಕ್ಷಣಿಕ ಉಪಯೋಗಕ್ಕೆಂದು ಆ ಜಾಗವನ್ನು ಮರಳಿ ಪಡೆದು ಈಗ ಅಲ್ಲಿ ಕಾಲೇಜಿನ ಸ್ನಾತಕೋತ್ತರ ವಿಭಾಗವನ್ನು ನಡೆಸುತ್ತಿದ್ದಾರೆʼ ಕಥೆ ಮುಗಿಸಿ ಉಳಿದಿದ್ದ ಎಳನೀರನ್ನೆಲ್ಲಾ ಒಂದೇ ಗುಟುಕಿಗೆ ಕುಡಿದು ಮುಗಿಸಿದರು ಮಾಧವ ರಾಯರು.

ಎಲ್ಲಿಯ ಮೋತೀಖಾನೆ, ಎಲ್ಲಿಯ ಅರಸರು, ಎಲ್ಲಿಯ ಬನುಮಯ್ಯನವರು, ಎಲ್ಲಿಯ ಕರಿಕಲ್ಲು ತೊಟ್ಟಿ, ಎಲ್ಲಿಯ ಬನುಮಯ್ಯ ಕಾಲೇಜು? ಅಬ್ಬಬ್ಬಾ! ಮೈಸೂರೆಂಬ ಪುಟ್ಟ ಸ್ವರ್ಗದಲ್ಲಿ ಒಂದೊಂದು ಮೂಲೆಯೂ ಒಂದೊಂದು ಕಥೆ ಹೇಳುತ್ತದೆ. ಅವುಗಳು ಕಥೆ ಹೇಳುತ್ತದೆ ಎಂಬುದಕ್ಕಿಂತ ಹೆಚ್ಚಾಗಿ ಕಾಲಗರ್ಭದಲ್ಲಿ ಉದುಗಿಹೋಗಿರುವ ಇಂತಹ ಕಥೆಗಳನ್ನು ಹೇಳಲು ಆಗಿನ ಕಾಲದ ಅದೆಷ್ಟೋ ಹಿರಿತಲೆಗಳು ಸಿಗುತ್ತವೆ. ಅವರು ಹೇಳುವ ಅಚ್ಚರಿಯ ಕಥೆಗಳನ್ನೆಲ್ಲಾ ಕೇಳಿ ಅರ್ಥಮಾಡಿಕೊಳ್ಳುವ ಮನಸ್ಸು ಬೇಕಷ್ಟೇ. ಅಷ್ಟು ಕಥೆ ಹೇಳಿದ ಮಾಧವರಾಯರಿಗೆ ಬಿಸಿಲಿನ ಬೇಗೆ ಹೆಚ್ಚಾದಂತಿತ್ತು. ʼಆಯ್ತು ತಾಯಿ…ನಾನು ಮನೆಗೆ ಹೋರಡ್ತೇನೆ. ನೀನೇನು ಓದ್ತಿದೀಯ?ʼ ಎಂದು ಕೇಳಿದ ರಾಯರಿಗೆ ʼಓದಿದ್ದು ಆಗಿದೆ. ಸದ್ಯಕ್ಕೆ ಕೆಲ್ಸ ಮಾಡ್ತಿದ್ದೀನಿʼ ಅಂದೆ. ʼಒಳ್ಳೇದಾಗ್ಲಿ. ಸಣ್ಣ ಹುಡುಗಿ ಕಾಣ್ತೀಯ. ಕೇಳೋ ಆಸಕ್ತಿ ಹಿಂಗೇ ಇರ್ಬೇಕು ನೋಡುʼ ಎನ್ನುತ್ತಾ ರಾಯರು ಕಣ್ಮರೆಯಾದರು.

 

 

 

 

 

 

sirimysuru18@gmail.com

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

8 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

8 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

9 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

14 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

14 hours ago