ಮೆಳೇಕಲ್ಲಳ್ಳಿ ಉದಯ
ನಾನೂ ಗಣೇಶ್ ಇದ್ದದ್ದು ಮಹಾರಾಜ ಹಾಸ್ಟೆಲಿನ ೧೦೧ನೇ ರೂಮಿನಲ್ಲಿ. ಪ್ರಾರಂಭದಲ್ಲಿ ನಾವು ಚೆನ್ನಾಗಿಯೆ ಸಿಳ್ಳೆ ಹೊಡೆದುಕೊಂಡು ಓಡಾಡುತಿದ್ವಿ.
ತೂಕದಲ್ಲಿ ನಾವಿಬ್ಬರೂ ನಲವತ್ತು ಕೇಜಿ ಒಳಗೆ ಇದ್ದುದರಿಂದಲೂ ಹಾಗೂ ಸಿಳ್ಳೆ ಹೊಡೆದುಕೊಂಡು ಓಡಾಡುತ್ತಿದ್ದು ದರಿಂದಲೂ ನಮ್ಮನ್ನು ನಾವೇ ಸಿಳ್ಳೆಕ್ಯಾತರೆಂದು ಕರೆದುಕೊಂಡಿದ್ದೆವು. ಬರುಬರುತ್ತಾ ಹಾಸ್ಟೆಲಿನಲ್ಲಿ ನಮಗೆ ಊಟ ನಿಲ್ಲಿಸುತ್ತಿದ್ದರು. ಕಾರಣ ನಮಗೆ ಸ್ಕಾಲರ್ಶಿಪ್ ಬರಲು ತಡವಾಗುತ್ತಿದ್ದುದು ಹಾಗೂ ಹಾಸ್ಟೆಲ್ಲಿನ ಊಟದ ಬಿಲ್ಲು ನಮ್ಮ ಸ್ಕಾಲರ್ಶಿಪ್ಗಿಂತ ಹೆಚ್ಚಾಗಿ ಬರುತ್ತಿದ್ದುದು.
ಮನೆಯಲ್ಲಿ ನಮಗೆ ಹಣ ಕಳುಹಿಸುತ್ತಿದ್ದುದು ತಡವಾದ ಕಾರಣ ತಿಂಗಳಲ್ಲಿ ಐದಾರು ದಿನ ಊಟಕ್ಕೆ ತೊಂದರೆಯಾಗುತ್ತಿತ್ತು. ಆ ದಿನಗಳಲ್ಲಿ ನಾವಿಬ್ಬರೂ ಹಸಿದೇ ಇರುತ್ತಿದ್ದೆವು. ಕುಕ್ಕರಹಳ್ಳಿ ಕೆರೆ ದಂಡೆಯಲ್ಲಿ ಟೀ ಮತ್ತು ಬ್ರೆಡ್ಡು ಮಾರುತ್ತಿದ್ದ ಜಾಗದಲ್ಲಿ ನಾವಿಬ್ಬರೂ ಚೋಟಾ ಟೀ ಮತ್ತು ನಾಕಾಣೆ ಬ್ರೆಡ್ಡು ತಿನ್ನುತ್ತಿದ್ದೆವು.
ರಾತ್ರಿ ನಾವಿಬ್ಬರೂ ಮಲಗಿದಾಗ ಗಣೇಶ್ ಹೇಳುತ್ತಿದ್ದ ಮಾತು ಇನ್ನೂ ನೆನಪಿನಲ್ಲಿದೆ, ‘ನಾವು ಎರಡು ದಿನ ಕಕ್ಕಸ್ಸಿಗೆ ಹೋಗಬಾರದು ಕಣೋ, ತಿಂದ ಟೀ ಬ್ರೆಡ್ಡು ಹೊಟ್ಟೆಯಲ್ಲೆ ಉಳಿದಿ ರಲಿ’. ಅಂತಾ ಗೆಳೆಯ ದೂರ ಹೋದ… ಆದರೂ ಆ ಮಾತುಗಳು ಇನ್ನೂ ಎದೆಯಲ್ಲೇ ಉಳಿದಿವೆ.
(ಲೇಖಕರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಮೊಗಳ್ಳಿಯವರ ಸಹಪಾಠಿ)
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…