ಮೆಳೇಕಲ್ಲಳ್ಳಿ ಉದಯ
ನಾನೂ ಗಣೇಶ್ ಇದ್ದದ್ದು ಮಹಾರಾಜ ಹಾಸ್ಟೆಲಿನ ೧೦೧ನೇ ರೂಮಿನಲ್ಲಿ. ಪ್ರಾರಂಭದಲ್ಲಿ ನಾವು ಚೆನ್ನಾಗಿಯೆ ಸಿಳ್ಳೆ ಹೊಡೆದುಕೊಂಡು ಓಡಾಡುತಿದ್ವಿ.
ತೂಕದಲ್ಲಿ ನಾವಿಬ್ಬರೂ ನಲವತ್ತು ಕೇಜಿ ಒಳಗೆ ಇದ್ದುದರಿಂದಲೂ ಹಾಗೂ ಸಿಳ್ಳೆ ಹೊಡೆದುಕೊಂಡು ಓಡಾಡುತ್ತಿದ್ದು ದರಿಂದಲೂ ನಮ್ಮನ್ನು ನಾವೇ ಸಿಳ್ಳೆಕ್ಯಾತರೆಂದು ಕರೆದುಕೊಂಡಿದ್ದೆವು. ಬರುಬರುತ್ತಾ ಹಾಸ್ಟೆಲಿನಲ್ಲಿ ನಮಗೆ ಊಟ ನಿಲ್ಲಿಸುತ್ತಿದ್ದರು. ಕಾರಣ ನಮಗೆ ಸ್ಕಾಲರ್ಶಿಪ್ ಬರಲು ತಡವಾಗುತ್ತಿದ್ದುದು ಹಾಗೂ ಹಾಸ್ಟೆಲ್ಲಿನ ಊಟದ ಬಿಲ್ಲು ನಮ್ಮ ಸ್ಕಾಲರ್ಶಿಪ್ಗಿಂತ ಹೆಚ್ಚಾಗಿ ಬರುತ್ತಿದ್ದುದು.
ಮನೆಯಲ್ಲಿ ನಮಗೆ ಹಣ ಕಳುಹಿಸುತ್ತಿದ್ದುದು ತಡವಾದ ಕಾರಣ ತಿಂಗಳಲ್ಲಿ ಐದಾರು ದಿನ ಊಟಕ್ಕೆ ತೊಂದರೆಯಾಗುತ್ತಿತ್ತು. ಆ ದಿನಗಳಲ್ಲಿ ನಾವಿಬ್ಬರೂ ಹಸಿದೇ ಇರುತ್ತಿದ್ದೆವು. ಕುಕ್ಕರಹಳ್ಳಿ ಕೆರೆ ದಂಡೆಯಲ್ಲಿ ಟೀ ಮತ್ತು ಬ್ರೆಡ್ಡು ಮಾರುತ್ತಿದ್ದ ಜಾಗದಲ್ಲಿ ನಾವಿಬ್ಬರೂ ಚೋಟಾ ಟೀ ಮತ್ತು ನಾಕಾಣೆ ಬ್ರೆಡ್ಡು ತಿನ್ನುತ್ತಿದ್ದೆವು.
ರಾತ್ರಿ ನಾವಿಬ್ಬರೂ ಮಲಗಿದಾಗ ಗಣೇಶ್ ಹೇಳುತ್ತಿದ್ದ ಮಾತು ಇನ್ನೂ ನೆನಪಿನಲ್ಲಿದೆ, ‘ನಾವು ಎರಡು ದಿನ ಕಕ್ಕಸ್ಸಿಗೆ ಹೋಗಬಾರದು ಕಣೋ, ತಿಂದ ಟೀ ಬ್ರೆಡ್ಡು ಹೊಟ್ಟೆಯಲ್ಲೆ ಉಳಿದಿ ರಲಿ’. ಅಂತಾ ಗೆಳೆಯ ದೂರ ಹೋದ… ಆದರೂ ಆ ಮಾತುಗಳು ಇನ್ನೂ ಎದೆಯಲ್ಲೇ ಉಳಿದಿವೆ.
(ಲೇಖಕರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಮೊಗಳ್ಳಿಯವರ ಸಹಪಾಠಿ)
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…