ಹಾಡು ಪಾಡು

ಎದೆಯಲ್ಲೇ ಉಳಿದ ಗೆಳೆಯನ ಮಾತುಗಳು…

ಮೆಳೇಕಲ್ಲಳ್ಳಿ ಉದಯ

ನಾನೂ ಗಣೇಶ್ ಇದ್ದದ್ದು ಮಹಾರಾಜ ಹಾಸ್ಟೆಲಿನ ೧೦೧ನೇ ರೂಮಿನಲ್ಲಿ. ಪ್ರಾರಂಭದಲ್ಲಿ ನಾವು ಚೆನ್ನಾಗಿಯೆ ಸಿಳ್ಳೆ ಹೊಡೆದುಕೊಂಡು ಓಡಾಡುತಿದ್ವಿ.

ತೂಕದಲ್ಲಿ ನಾವಿಬ್ಬರೂ ನಲವತ್ತು ಕೇಜಿ ಒಳಗೆ ಇದ್ದುದರಿಂದಲೂ ಹಾಗೂ ಸಿಳ್ಳೆ ಹೊಡೆದುಕೊಂಡು ಓಡಾಡುತ್ತಿದ್ದು ದರಿಂದಲೂ ನಮ್ಮನ್ನು ನಾವೇ ಸಿಳ್ಳೆಕ್ಯಾತರೆಂದು ಕರೆದುಕೊಂಡಿದ್ದೆವು. ಬರುಬರುತ್ತಾ ಹಾಸ್ಟೆಲಿನಲ್ಲಿ ನಮಗೆ ಊಟ ನಿಲ್ಲಿಸುತ್ತಿದ್ದರು. ಕಾರಣ ನಮಗೆ ಸ್ಕಾಲರ್‌ಶಿಪ್ ಬರಲು ತಡವಾಗುತ್ತಿದ್ದುದು ಹಾಗೂ ಹಾಸ್ಟೆಲ್ಲಿನ ಊಟದ ಬಿಲ್ಲು ನಮ್ಮ ಸ್ಕಾಲರ್‌ಶಿಪ್‌ಗಿಂತ ಹೆಚ್ಚಾಗಿ ಬರುತ್ತಿದ್ದುದು.

ಮನೆಯಲ್ಲಿ ನಮಗೆ ಹಣ ಕಳುಹಿಸುತ್ತಿದ್ದುದು ತಡವಾದ ಕಾರಣ ತಿಂಗಳಲ್ಲಿ ಐದಾರು ದಿನ ಊಟಕ್ಕೆ ತೊಂದರೆಯಾಗುತ್ತಿತ್ತು. ಆ ದಿನಗಳಲ್ಲಿ ನಾವಿಬ್ಬರೂ ಹಸಿದೇ ಇರುತ್ತಿದ್ದೆವು. ಕುಕ್ಕರಹಳ್ಳಿ ಕೆರೆ ದಂಡೆಯಲ್ಲಿ ಟೀ ಮತ್ತು ಬ್ರೆಡ್ಡು ಮಾರುತ್ತಿದ್ದ ಜಾಗದಲ್ಲಿ ನಾವಿಬ್ಬರೂ ಚೋಟಾ ಟೀ ಮತ್ತು ನಾಕಾಣೆ ಬ್ರೆಡ್ಡು ತಿನ್ನುತ್ತಿದ್ದೆವು.

ರಾತ್ರಿ ನಾವಿಬ್ಬರೂ ಮಲಗಿದಾಗ ಗಣೇಶ್ ಹೇಳುತ್ತಿದ್ದ ಮಾತು ಇನ್ನೂ ನೆನಪಿನಲ್ಲಿದೆ, ‘ನಾವು ಎರಡು ದಿನ ಕಕ್ಕಸ್ಸಿಗೆ ಹೋಗಬಾರದು ಕಣೋ, ತಿಂದ ಟೀ ಬ್ರೆಡ್ಡು ಹೊಟ್ಟೆಯಲ್ಲೆ ಉಳಿದಿ ರಲಿ’. ಅಂತಾ ಗೆಳೆಯ ದೂರ ಹೋದ… ಆದರೂ ಆ ಮಾತುಗಳು ಇನ್ನೂ ಎದೆಯಲ್ಲೇ ಉಳಿದಿವೆ.

(ಲೇಖಕರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಮೊಗಳ್ಳಿಯವರ ಸಹಪಾಠಿ)

ಆಂದೋಲನ ಡೆಸ್ಕ್

Recent Posts

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

9 mins ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

50 mins ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

1 hour ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

2 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

2 hours ago

ಅಮೇರಿಕಾಗೆ ಬಿಗ್‌ ಶಾಕ್‌ ಕೊಟ್ಟ ಇರಾನ್‌

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್‌ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…

3 hours ago