ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ ಆಡಳಿತ ವೈಫಲ್ಯಗಳ ಕುರಿತು ಸಾರ್ವಜನಿಕ ಚರ್ಚೆಗಳು ಕೆಲವೇ ದಿನಗಳಿಗೆ ಸೀಮಿತವಾಗುತ್ತವೆ. ಸಾಮಾಜಿಕ ಮಾಧ್ಯಮ ಗಳಲ್ಲಿ ಆರಂಭವಾಗುವ ಚರ್ಚೆಗಳು ಶೀಘ್ರದಲ್ಲೇ ಬೇರೆ ವಿಷಯಗಳತ್ತ ತಿರುಗಿಬಿಡುತ್ತವೆ. ಇದು ಸಹಜ ಮರೆವೆಯೇ, ಅಥವಾ ಉದ್ದೇಶಿತ ಮೌನವೇ ಎಂಬ ಪ್ರಶ್ನೆ ಅನಿವಾರ್ಯವಾಗಿ ಎದುರಾಗುತ್ತದೆ.
ಯುವಜನತೆಗೆ ಉದ್ಯೋಗ ಒದಗಿಸುವ ವಿಷಯದಲ್ಲಿ ಸರ್ಕಾರದ ಭರವಸೆಗಳು ಚುನಾವಣಾ ಭಾಷಣಗಳ ಮಟ್ಟದಲ್ಲೇ ಉಳಿದಿವೆ. ಶಿಕ್ಷಣ ಪೂರ್ಣಗೊಳಿಸಿದ ನಂತರ ಅರ್ಹತೆಯಿದ್ದರೂ ಯುವಕರು ಉದ್ಯೋಗವಿಲ್ಲದೆ ಅಲೆ ದಾಡುತ್ತಿರುವುದು ಕಟುವಾದ ವಾಸ್ತವ. ಕೇವಲ ಭರವಸೆಗಳಲ್ಲ, ಕಾನೂನಿನಲ್ಲೇ ಯುವ ಜನತೆಗೆ ಉದ್ಯೋಗ ಒದಗಿಸುವ ಸ್ಪಷ್ಟ ಯೋಜನೆ ಇರಬೇಕಲ್ಲವೇ?
ಯುವಕರಲ್ಲಿ ಕೌಶಲವಿಲ್ಲ ಎಂಬ ಸಮಸ್ಯೆಗೆ ಕಾರಣ ಕೌಶಲಾಭಿವೃದ್ಧಿಗೆ ಅಗತ್ಯವಿರುವ ಸ್ಪಷ್ಟ ನೀತಿ, ಹೂಡಿಕೆ ಮತ್ತು ಮಾರ್ಗದರ್ಶನದ ಕೊರತೆ. ಓದಿದವರು ನಿರುದ್ಯೋಗಿಗಳಾಗುತ್ತಿರುವಾಗ, ಓದನ್ನು ಬಿಟ್ಟು ಡಿಜಿಟಲ್ ಕಂಟೆಂಟ್ ಸೃಷ್ಟಿ ಅಥವಾ ವ್ಯಾಪಾರ ದಲ್ಲಿ ತೊಡಗಿದವರು ಯಶಸ್ಸು ಕಾಣುತ್ತಿರುವುದು ವ್ಯಕ್ತಿಗತ ಆಯ್ಕೆಯಲ್ಲ; ವ್ಯವಸ್ಥೆಯ ವೈಫಲ್ಯವನ್ನು ಸೂಚಿಸುತ್ತದೆ. ಕಂಟೆಂಟ್ ಸೃಷ್ಟಿಯೂ ಒಂದು ಕೌಶಲವೇ; ಆದರೆ ಅದಕ್ಕೂ ಸೂಕ್ತ ತರಬೇತಿ ಮತ್ತುನಿಯಂತ್ರಣ ಅಗತ್ಯ. ನನ್ನನ್ನು ಇನ್ನೂ ಕಾಡುವ ಪ್ರಶ್ನೆಗಳು ವೈಯಕ್ತಿಕವಾಗಿಯೂ ಸಮಾಜಮುಖಿಯಾಗಿಯೂ ಇವೆ. ಒಬ್ಬ ಮಹಿಳೆಯಾಗಿರುವ ಕಾರಣ ಇಂದಿಗೂ ಕತ್ತಲಾಗುವ ಮೊದಲು ಮನೆ ತಲುಪಬೇಕೆಂಬ ಅಲಿಖಿತ ನಿಯಮ ಏಕೆ? ಸುರಕ್ಷತೆ ಎನ್ನುವುದು ಮಹಿಳೆಯ ಹೊಣೆಗಾರಿಕೆಯೇ? ಅದು ರಾಜ್ಯದ ಜವಾಬ್ದಾರಿಯಲ್ಲವೇ?
ಅಲ್ಪಸಂಖ್ಯಾತಳಾಗಿರುವ ಕಾರಣ ಎಷ್ಟು ದಿನಗಳವರೆಗೆ ನಮ್ಮ ದೇಶಭಕ್ತಿಯನ್ನು ಪ್ರಶ್ನಿಸಲಾಗುತ್ತದೆ? ಯಾವ ತಪ್ಪಿಗೂ ನಾವು ‘ಪಾಕಿಸ್ತಾನದ ಬೆಂಬಲಿಗರು’ ಎಂಬ ಆರೋಪವನ್ನು ಹೊರುವ ಪರಿಸ್ಥಿತಿ ಯಾವ ಸಂವಿಧಾನಾತ್ಮಕ ಮೌಲ್ಯಕ್ಕೆ ಸೇರಿದೆ? ದಲಿತರಿಗೆ ಸಾಮಾಜಿಕ ನ್ಯಾಯ ಒದಗಿಸಲು ಸಂವಿಧಾನಾತ್ಮಕ ಹಾಗೂ ಕಾನೂನು ರಕ್ಷಣೆಗಳಿದ್ದಂತೆ, ಮುಸ್ಲಿಮರ ಸಾಮಾಜಿಕ, ಮಾನಸಿಕ ಮತ್ತು ನಾಗರಿಕ ಭದ್ರತೆಯನ್ನು ಖಚಿತಪಡಿಸುವ ಸ್ಪಷ್ಟ ಕಾನೂನುಗಳು ಏಕೆ ಕಾಣುತ್ತಿಲ್ಲ?
ಡಾ. ಶಾಫಿಯಾ ಫರ್ಹಿನ್, ಅನುವಾದಕಿ ಮತ್ತು ಹಿಂದಿ ಉಪನ್ಯಾಸಕಿ, ಮಂಡ್ಯ
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…