ಹನಿ ಉತ್ತಪ್ಪ

ಇವರ ಹೆಸರು ಮುತ್ತ ಮತ್ತು ಲಚ್ಚಿ. ಕೊಡಗಿನ ಜೇನುಕುರುಬ ಬುಡಕಟ್ಟು ಸಮುದಾಯಕ್ಕೆ ಸೇರಿದವರು. ಮುತ್ತ ಚಿಕ್ಕ ಹುಡುಗನಿದ್ದಾಗಿಂದಲೂ ಕಾಫಿತೋಟದ ಕೆಲಸವನ್ನೇ ನಂಬಿಕೊಂಡಿದ್ದಾರೆ. ನಲವತ್ತರ ಆಸುಪಾಸಿನವರಾದ ಮುತ್ತ ಮತ್ತು ಹೆಂಡತಿ ಲಚ್ಚಿ ಮಾಡದ ಸಾಲಕ್ಕೆ ಬಡ್ಡಿ ತೀರಿಸುತ್ತಾ ಜೀತದಾಳಾಗಿ ಬದುಕುತ್ತಿದ್ದಾರೆ ಎಂದರೆ ಹುಬ್ಬೇರಿಸಬೇಡಿ.

ಮುತ್ತ ಮತ್ತು ಲಚ್ಚಿಯರ ಮದುವೆಯಾದ ಹೊಸತು. ಹೆಂಡತಿಯನ್ನು ಎಲ್ಲಿಯೂ ಕೆಲಸಕ್ಕೆ ಕಳುಹಿಸಬಾರದು ಎಂಬುದು ಮುತ್ತನ ಆಸೆಯಾದರೂ ಸಂಸಾರದ ನೊಗ ಸಾಗಿಸಲು ಇಬ್ಬರೂ ಕೆಲಸ ಮಾಡಲೇಬೇಕಿತ್ತು. ಹದಿಹರಯದ ವಯಸ್ಸಿನವರಾಗಿದ್ದ ಮುತ್ತನಿಗೆ ತೋಟದ ಮಾಲೀಕರು ಕುಡಿತದ ಚಟ ಅಂಟಿಸಿದ್ದರು. ಹಾಗಾಗಿ ೭೫ ರೂಪಾಯಿಯಿಂದ ೧೦೦ ರೂಪಾಯಿ, ೧೫೦ ರೂಪಾಯಿಗೆ ದಿನಗೂಲಿ ಏರಿಕೆ ಆದರೂ ಸಂಸಾರದಲ್ಲಿ ಉಳಿಕೆ ಎಂಬುದು ಅಸಾಧ್ಯವೇ ಆಯಿತು.

ತೋಟದ ಮಾಲೀಕರು ಕ್ವಾಟರ್ ಕುಡಿಸಿ ಒಂದಕ್ಕೆ ಮೂರು ಪಟ್ಟು ಹಣ ವಸೂಲಿ ಮಾಡುವುದು ಒಂದು ಕಡೆಯಾದರೆ, ತಮಗೆ ಬೇಕಾದಷ್ಟು ಹಣ ನಮೂದಿಸಿ ಸಾಲಪತ್ರವನ್ನು ತಯಾರಿಸಿ ಅವರ ಮತ್ತೇರಿದ ಅಮಲಿನಲ್ಲಿ ಸಹಿ ಹಾಕಿಸಿಕೊಂಡು ಬಿಡುತ್ತಾರೆ! ಮುತ್ತ ದಂಪತಿ ಎದುರಿಸುತ್ತಿರುವುದು ಇದೇ ಸಮಸ್ಯೆಯನ್ನು. ಐದಾರು ದಿನ ಮಾಡಿದ ಕೆಲಸಕ್ಕೆ ವಾರದ ಕೊನೆಯಲ್ಲಿ ಸಂಬಳ ಅಂತ ತೆಗೆದುಕೊಳ್ಳುವಾಗ ಸಾಲಪತ್ರವನ್ನು ತೋರಿಸಿ, ೭೫ ಸಾವಿರ ರೂ. ಸಾಲ ಕಟ್ಟಿ, ಎಂದರೆ ಆ ಮುಗ್ಧ ಜೀವಕ್ಕೆ ಹೇಗಾಗಿರಬೇಡ? ತಾನು ಜೀವನಪರ್ಯಂತ ದುಡಿದರೂ ಇದು ದೊಡ್ಡ  ಮೊತ್ತವನ್ನು ತೀರಿಸಲಾಗುವುದಿಲ್ಲ ಎಂಬ ಅರಿವು ಸ್ವತಃ ಮುತ್ತನವರಿಗೂ ಇದೆ. ಹಾಗೆಂದು ಮುತ್ತ ಸಾಲ ತೆಗೆದುಕೊಂಡೇ ಇಲ್ಲ ಎಂದಲ್ಲ. ಸ್ವಂತ ಸೂರು ಇಲ್ಲದೇ ಇದ್ದರೂ ಐವರು ಮಕ್ಕಳ ಕನಸುಗಳ ಜವಾಬ್ದಾರಿಗೆ ಹಣ ಬೇಡವೇ? ಮದುವೆ, ಮಕ್ಕಳ ಓದಿಗೆಂದು ಒಂದಷ್ಟು ಹಣ ಸಾಲ ಪಡೆದಿದ್ದರು. ಆದರೆ ಇಷ್ಟೊಂದು ಹಣವನ್ನು ಪಡೆದು ತೀರಿಸುವಷ್ಟು ಸ್ಥಿತಿವಂತ ತಾನಲ್ಲ ಎಂದು ತೋಟದ ಮಾಲೀಕರಲ್ಲಿ ಬೇಡಿಕೊಂಡಿದ್ದರು.

ಮಾಲೀಕರು ಮಣಿಯಲಿಲ್ಲ, ಇನ್ನು ಕರಗುವುದಂತೂ ದೂರದ ಮಾತೇ ಸರಿ. ಅದಕ್ಕಾಗಿ ಮುತ್ತ ಮತ್ತು ಲಚ್ಚಿ ಮೂರು ವರ್ಷಗಳ ಹಿಂದೆ ಬೇರೆ ಕೆಲಸವನ್ನು ಅರಸಿ ಅಲ್ಲಿಂದ ಬೀಡುಬಿಟ್ಟರು. ಕೆಲ ಇಲಾಖೆಯ ಅಧಿಕಾರಿಗಳಿಗೆ ತಮಗಾದ ಅನ್ಯಾಯವನ್ನು ವಿವರಿಸಿದರು. ಸ್ಪಂದನೆ ಸಿಗಲೇ ಇಲ್ಲ…! ಅಲ್ಲಿಂದ ಬಂದ ಮೇಲೆ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ. ಊರಿನ ಕೆಲವರು ಕಳ್ಳರು ಎಂದು ಆರೋಪ ಹೊರಿಸುತ್ತಿದ್ದಾರೆ. ಮಾಲೀಕರು ದುಡ್ಡು ಕೊಡಬೇಕೆಂದು ಒತ್ತಾಯಿಸಿ, ಮಾನಸಿಕ ಹಿಂಸೆ ಕೊಡುತ್ತಲೇ ಇದ್ದಾರೆ.

ಉಳಿವುದಕ್ಕೆ ಸೂರಿಲ್ಲ; ಬದುಕಲ್ಲಿ ನೆಮ್ಮದಿಯೂ ಇಲ್ಲ ಎನ್ನುತ್ತಿದ್ದಾರೆ ಜೇನುಕುರುಬರ ಮುತ್ತ ಮತ್ತು ಲಚ್ಚಿ

ಆಂದೋಲನ ಡೆಸ್ಕ್

Recent Posts

ನಿಗೂಢ ವಸ್ತು ಸ್ಫೋಟ: 6 ಶಾಲಾ ಮಕ್ಕಳಿಗೆ ಗಂಭೀರ ಗಾಯ

ಬೀದರ್:‌ ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…

16 mins ago

ಮೈಸೂರು| ರಾಜ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದ ಮಾಜಿ ಸಚಿವ ಸಿ.ಟಿ.ರವಿ

ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌…

39 mins ago

ಮಹಾರಾಷ್ಟ್ರ ಡಿಸಿಎಂ ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಆಯ್ಕೆ, ಇಂದು ಸಂಜೆ ಪ್ರಮಾಣವಚನ ಸ್ವೀಕಾರ?

ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್‌ ಪವಾರ್‌ ಪತ್ನಿ ಸುನೇಂದ್ರ ಪವಾರ್‌ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…

57 mins ago

ಉದ್ಯಮಿ ಸಿ.ಜೆ.ರಾಯ್‌ ಸಾವಿನ ಬಗ್ಗೆ ಸಚಿವ ಪರಮೇಶ್ವರ್‌ ಮಾಹಿತಿ

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ, ಕಾನ್ಪಿಡೆಂಟ್‌ ಗ್ರೂಪ್‌ ಚೇರ್ಮನ್‌ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ…

2 hours ago

ನಾಳೆ ಕೇಂದ್ರ ಬಜೆಟ್‌ ಮಂಡನೆ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಾಳೆ 9ನೇ ಬಾರಿಗೆ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಮೂಲಕ…

2 hours ago

ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ಇಂದು ಸಂಜೆ ಉದ್ಯಮಿ ಸಿ.ಜೆ.ರಾಯ್ ಅಂತ್ಯಕ್ರಿಯೆ

ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್‌ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…

3 hours ago