slavery
ಹನಿ ಉತ್ತಪ್ಪ
ಇವರ ಹೆಸರು ಮುತ್ತ ಮತ್ತು ಲಚ್ಚಿ. ಕೊಡಗಿನ ಜೇನುಕುರುಬ ಬುಡಕಟ್ಟು ಸಮುದಾಯಕ್ಕೆ ಸೇರಿದವರು. ಮುತ್ತ ಚಿಕ್ಕ ಹುಡುಗನಿದ್ದಾಗಿಂದಲೂ ಕಾಫಿತೋಟದ ಕೆಲಸವನ್ನೇ ನಂಬಿಕೊಂಡಿದ್ದಾರೆ. ನಲವತ್ತರ ಆಸುಪಾಸಿನವರಾದ ಮುತ್ತ ಮತ್ತು ಹೆಂಡತಿ ಲಚ್ಚಿ ಮಾಡದ ಸಾಲಕ್ಕೆ ಬಡ್ಡಿ ತೀರಿಸುತ್ತಾ ಜೀತದಾಳಾಗಿ ಬದುಕುತ್ತಿದ್ದಾರೆ ಎಂದರೆ ಹುಬ್ಬೇರಿಸಬೇಡಿ.
ಮುತ್ತ ಮತ್ತು ಲಚ್ಚಿಯರ ಮದುವೆಯಾದ ಹೊಸತು. ಹೆಂಡತಿಯನ್ನು ಎಲ್ಲಿಯೂ ಕೆಲಸಕ್ಕೆ ಕಳುಹಿಸಬಾರದು ಎಂಬುದು ಮುತ್ತನ ಆಸೆಯಾದರೂ ಸಂಸಾರದ ನೊಗ ಸಾಗಿಸಲು ಇಬ್ಬರೂ ಕೆಲಸ ಮಾಡಲೇಬೇಕಿತ್ತು. ಹದಿಹರಯದ ವಯಸ್ಸಿನವರಾಗಿದ್ದ ಮುತ್ತನಿಗೆ ತೋಟದ ಮಾಲೀಕರು ಕುಡಿತದ ಚಟ ಅಂಟಿಸಿದ್ದರು. ಹಾಗಾಗಿ ೭೫ ರೂಪಾಯಿಯಿಂದ ೧೦೦ ರೂಪಾಯಿ, ೧೫೦ ರೂಪಾಯಿಗೆ ದಿನಗೂಲಿ ಏರಿಕೆ ಆದರೂ ಸಂಸಾರದಲ್ಲಿ ಉಳಿಕೆ ಎಂಬುದು ಅಸಾಧ್ಯವೇ ಆಯಿತು.
ತೋಟದ ಮಾಲೀಕರು ಕ್ವಾಟರ್ ಕುಡಿಸಿ ಒಂದಕ್ಕೆ ಮೂರು ಪಟ್ಟು ಹಣ ವಸೂಲಿ ಮಾಡುವುದು ಒಂದು ಕಡೆಯಾದರೆ, ತಮಗೆ ಬೇಕಾದಷ್ಟು ಹಣ ನಮೂದಿಸಿ ಸಾಲಪತ್ರವನ್ನು ತಯಾರಿಸಿ ಅವರ ಮತ್ತೇರಿದ ಅಮಲಿನಲ್ಲಿ ಸಹಿ ಹಾಕಿಸಿಕೊಂಡು ಬಿಡುತ್ತಾರೆ! ಮುತ್ತ ದಂಪತಿ ಎದುರಿಸುತ್ತಿರುವುದು ಇದೇ ಸಮಸ್ಯೆಯನ್ನು. ಐದಾರು ದಿನ ಮಾಡಿದ ಕೆಲಸಕ್ಕೆ ವಾರದ ಕೊನೆಯಲ್ಲಿ ಸಂಬಳ ಅಂತ ತೆಗೆದುಕೊಳ್ಳುವಾಗ ಸಾಲಪತ್ರವನ್ನು ತೋರಿಸಿ, ೭೫ ಸಾವಿರ ರೂ. ಸಾಲ ಕಟ್ಟಿ, ಎಂದರೆ ಆ ಮುಗ್ಧ ಜೀವಕ್ಕೆ ಹೇಗಾಗಿರಬೇಡ? ತಾನು ಜೀವನಪರ್ಯಂತ ದುಡಿದರೂ ಇದು ದೊಡ್ಡ ಮೊತ್ತವನ್ನು ತೀರಿಸಲಾಗುವುದಿಲ್ಲ ಎಂಬ ಅರಿವು ಸ್ವತಃ ಮುತ್ತನವರಿಗೂ ಇದೆ. ಹಾಗೆಂದು ಮುತ್ತ ಸಾಲ ತೆಗೆದುಕೊಂಡೇ ಇಲ್ಲ ಎಂದಲ್ಲ. ಸ್ವಂತ ಸೂರು ಇಲ್ಲದೇ ಇದ್ದರೂ ಐವರು ಮಕ್ಕಳ ಕನಸುಗಳ ಜವಾಬ್ದಾರಿಗೆ ಹಣ ಬೇಡವೇ? ಮದುವೆ, ಮಕ್ಕಳ ಓದಿಗೆಂದು ಒಂದಷ್ಟು ಹಣ ಸಾಲ ಪಡೆದಿದ್ದರು. ಆದರೆ ಇಷ್ಟೊಂದು ಹಣವನ್ನು ಪಡೆದು ತೀರಿಸುವಷ್ಟು ಸ್ಥಿತಿವಂತ ತಾನಲ್ಲ ಎಂದು ತೋಟದ ಮಾಲೀಕರಲ್ಲಿ ಬೇಡಿಕೊಂಡಿದ್ದರು.
ಮಾಲೀಕರು ಮಣಿಯಲಿಲ್ಲ, ಇನ್ನು ಕರಗುವುದಂತೂ ದೂರದ ಮಾತೇ ಸರಿ. ಅದಕ್ಕಾಗಿ ಮುತ್ತ ಮತ್ತು ಲಚ್ಚಿ ಮೂರು ವರ್ಷಗಳ ಹಿಂದೆ ಬೇರೆ ಕೆಲಸವನ್ನು ಅರಸಿ ಅಲ್ಲಿಂದ ಬೀಡುಬಿಟ್ಟರು. ಕೆಲ ಇಲಾಖೆಯ ಅಧಿಕಾರಿಗಳಿಗೆ ತಮಗಾದ ಅನ್ಯಾಯವನ್ನು ವಿವರಿಸಿದರು. ಸ್ಪಂದನೆ ಸಿಗಲೇ ಇಲ್ಲ…! ಅಲ್ಲಿಂದ ಬಂದ ಮೇಲೆ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ. ಊರಿನ ಕೆಲವರು ಕಳ್ಳರು ಎಂದು ಆರೋಪ ಹೊರಿಸುತ್ತಿದ್ದಾರೆ. ಮಾಲೀಕರು ದುಡ್ಡು ಕೊಡಬೇಕೆಂದು ಒತ್ತಾಯಿಸಿ, ಮಾನಸಿಕ ಹಿಂಸೆ ಕೊಡುತ್ತಲೇ ಇದ್ದಾರೆ.
ಉಳಿವುದಕ್ಕೆ ಸೂರಿಲ್ಲ; ಬದುಕಲ್ಲಿ ನೆಮ್ಮದಿಯೂ ಇಲ್ಲ ಎನ್ನುತ್ತಿದ್ದಾರೆ ಜೇನುಕುರುಬರ ಮುತ್ತ ಮತ್ತು ಲಚ್ಚಿ
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…