ಹಾಡು ಪಾಡು

ಹುಲಿ ಯಾಕೆ ನೀರು ಕುಡಿಯಲಿಲ್ಲ?

ಕೀರ್ತಿ ಬೈಂದೂರು

ನೇರವಾಗಿ ಬಂದು ಕೆರೆಯ ನೀರಿಗೆ ನಾಲಿಗೆ ಚಾಚಬೇಕಿದ್ದ ಹುಲಿ ಕೆರೆಯ ದಡದಲ್ಲಿ ಸುಮ್ಮನೆ ಕುಳಿತುಕೊಂಡು ತನ್ನ ಹಿಂಭಾಗವನ್ನು ಮಾತ್ರ ಒದ್ದೆ ಮಾಡಿಕೊಂಡಿತು

ಬೆಳಗಿನ ಜಾವದ ಹೊತ್ತಿನಲ್ಲಿ ಕಬಿನಿ ಹಿನ್ನೀರಿನ ದಮ್ಮನಕಟ್ಟೆ ಕಾಡಲ್ಲಿ ಸಫಾರಿ ಹೋಗಿದ್ದೆವು . ‘ಇದೇ ಕೆರೆ ಪಕ್ಕನೇ ನೋಡ್ತಿರಿ. ಹುಲಿ ಬಂದು ನೀರು ಕುಡ್ಕೊಂಡು ಹೋಗತ್ತೆ’ ಅಂತ ಡ್ರೈವರ್‌ ಹೇಳಿದ. ಆಗವರು ಬರಿಯ ಡ್ರೈವರ್‌ ಆಗಿರಲಿಲ್ಲ. ಜಗತ್ತಿನ ಯಾವುದೋ ಅನೂಹ್ಯ ಲೋಕವನ್ನು ತೋರುವ ವಿಸ್ಮಯಕಾರನಾಗಿದ್ದ.

ಕಾದಿದ್ದಕ್ಕೂ ಸಾರ್ಥಕ, ಹುಲಿ ಬಂತು. ಜೀಪಿನಲ್ಲಿದ್ದ ಏಳು ಜನರೂ ಬೆಕ್ಕಸ ಬೆರಗಾಗಿ ಹುಲಿ ಹೇಗೆ ನೀರು ಕುಡಿಯುತ್ತದೆ ಎಂಬುದನ್ನು ನೋಡಲು ಕಾತರರಾಗಿದ್ದರು. ನಾನೂ ಮೊಬೈಲ್ ತೆಗೆದು, ವಿಡಿಯೋ ಮಾಡಿಕೊಳ್ಳತೊಡಗಿದೆ. ಅಚ್ಚರಿ ಎಂದರೆ ನೇರವಾಗಿ ಬಂದು ಕೆರೆಯ ನೀರಿಗೆ ನಾಲಿಗೆ ಚಾಚಬೇಕಿದ್ದ ಹುಲಿ ಕೆರೆಯ ದಡದಲ್ಲಿ ಸುಮ್ಮನೆ ಕುಳಿತುಕೊಂಡು ತನ್ನ ಹಿಂಭಾಗವನ್ನು ಮಾತ್ರ ಒದ್ದೆ ಮಾಡಿಕೊಂಡಿತು. ಉಳಿದವರೆಲ್ಲ, ‘ವಾವ್! ಎಷ್ಟು ಚೆನ್ನಾಗಿದೆ. ಹುಲಿ ನೀರು ಕುಡಿದು ಹೊರಡ್ತು’ ಎಂದೆಲ್ಲ ಬಾಯಿ ತೆಗೆಯುತ್ತಿದ್ದರು. ನಾನು ಮಾತ್ರ ಹುಲಿ ನೀರೇ ಕುಡಿದಿಲ್ಲವಲ್ಲಾ ಎಂದು ತಲೆಯಲ್ಲಿ ಹುಳ ಬಿಟ್ಟುಕೊಂಡಿದ್ದೆ. ಆಮೇಲೆ ಗೊತ್ತಾಗಿದ್ದು ಬೆಳಗಿನ ನಿತ್ಯ ಕರ್ಮಗಳನ್ನೆಲ್ಲ ಪೂರೈಸಿದ್ದ ಹುಲಿ ತನ್ನ ದೇಹವನ್ನು ಶುಚಿಯಾಗಿಟ್ಟುಕೊಳ್ಳುವುದರ ಭಾಗವಾಗಿ ತನ್ನ ಹಿಂಭಾಗವನ್ನು ನೀರಿಗೆ ಅದ್ದಿಕೊಂಡಿತ್ತು!

ಕಾಡಿನ ನಡುವೆ ರಾತ್ರಿ ಒಮ್ಮೆ ಗರ್ಜನೆ ಮತ್ತು ಆರ್ತನಾದ ಒಟ್ಟಿಗೇ ಕೇಳಿಸಿತು. ಎದೆ ಝಲ್ ಎಂದ ಅನುಭವ! ಇಲ್ಲೇ ಪಕ್ಕದಲ್ಲೆಲ್ಲೋ ಬೇಟೆ ನಡೆಯಿತೆನ್ನುವ ಭಾವ. ದೈತ್ಯ ಪ್ರಾಣಿಯೊಂದು ಅಸಹಾಯಕ ಪ್ರಾಣಿಯೊಂದನ್ನು ಹಿಡಿದಿರಬಹುದು ಎಂಬುದನ್ನು ಊಹೆ ಮಾಡಿಕೊಂಡು, ಕುಳಿತಿದ್ದವರೆಲ್ಲ ಭಯಭೀತರಾಗಿ ಕೋಣೆಯೊಳಕ್ಕೆ ತೆರಳಿದ್ದೆವು. ನಟ್ಟಿರುಳ ರಾತ್ರಿಯಲ್ಲಿ ಘಟಿಸಿರಬಹುದಾದ ಸನ್ನಿವೇಶವನ್ನು ಕಿವಿಯ ಸಹಾಯದಿಂದ ಮತ್ತೆ ಮರುಕಟ್ಟುತ್ತಾ, ನಿದ್ರೆಗೆ ಜಾರಿದ್ದೆವು.

ಆಂದೋಲನ ಡೆಸ್ಕ್

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

2 hours ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

6 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

6 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

7 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

7 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

7 hours ago