ಕೀರ್ತಿ ಬೈಂದೂರು
ನೇರವಾಗಿ ಬಂದು ಕೆರೆಯ ನೀರಿಗೆ ನಾಲಿಗೆ ಚಾಚಬೇಕಿದ್ದ ಹುಲಿ ಕೆರೆಯ ದಡದಲ್ಲಿ ಸುಮ್ಮನೆ ಕುಳಿತುಕೊಂಡು ತನ್ನ ಹಿಂಭಾಗವನ್ನು ಮಾತ್ರ ಒದ್ದೆ ಮಾಡಿಕೊಂಡಿತು
ಬೆಳಗಿನ ಜಾವದ ಹೊತ್ತಿನಲ್ಲಿ ಕಬಿನಿ ಹಿನ್ನೀರಿನ ದಮ್ಮನಕಟ್ಟೆ ಕಾಡಲ್ಲಿ ಸಫಾರಿ ಹೋಗಿದ್ದೆವು . ‘ಇದೇ ಕೆರೆ ಪಕ್ಕನೇ ನೋಡ್ತಿರಿ. ಹುಲಿ ಬಂದು ನೀರು ಕುಡ್ಕೊಂಡು ಹೋಗತ್ತೆ’ ಅಂತ ಡ್ರೈವರ್ ಹೇಳಿದ. ಆಗವರು ಬರಿಯ ಡ್ರೈವರ್ ಆಗಿರಲಿಲ್ಲ. ಜಗತ್ತಿನ ಯಾವುದೋ ಅನೂಹ್ಯ ಲೋಕವನ್ನು ತೋರುವ ವಿಸ್ಮಯಕಾರನಾಗಿದ್ದ.
ಕಾದಿದ್ದಕ್ಕೂ ಸಾರ್ಥಕ, ಹುಲಿ ಬಂತು. ಜೀಪಿನಲ್ಲಿದ್ದ ಏಳು ಜನರೂ ಬೆಕ್ಕಸ ಬೆರಗಾಗಿ ಹುಲಿ ಹೇಗೆ ನೀರು ಕುಡಿಯುತ್ತದೆ ಎಂಬುದನ್ನು ನೋಡಲು ಕಾತರರಾಗಿದ್ದರು. ನಾನೂ ಮೊಬೈಲ್ ತೆಗೆದು, ವಿಡಿಯೋ ಮಾಡಿಕೊಳ್ಳತೊಡಗಿದೆ. ಅಚ್ಚರಿ ಎಂದರೆ ನೇರವಾಗಿ ಬಂದು ಕೆರೆಯ ನೀರಿಗೆ ನಾಲಿಗೆ ಚಾಚಬೇಕಿದ್ದ ಹುಲಿ ಕೆರೆಯ ದಡದಲ್ಲಿ ಸುಮ್ಮನೆ ಕುಳಿತುಕೊಂಡು ತನ್ನ ಹಿಂಭಾಗವನ್ನು ಮಾತ್ರ ಒದ್ದೆ ಮಾಡಿಕೊಂಡಿತು. ಉಳಿದವರೆಲ್ಲ, ‘ವಾವ್! ಎಷ್ಟು ಚೆನ್ನಾಗಿದೆ. ಹುಲಿ ನೀರು ಕುಡಿದು ಹೊರಡ್ತು’ ಎಂದೆಲ್ಲ ಬಾಯಿ ತೆಗೆಯುತ್ತಿದ್ದರು. ನಾನು ಮಾತ್ರ ಹುಲಿ ನೀರೇ ಕುಡಿದಿಲ್ಲವಲ್ಲಾ ಎಂದು ತಲೆಯಲ್ಲಿ ಹುಳ ಬಿಟ್ಟುಕೊಂಡಿದ್ದೆ. ಆಮೇಲೆ ಗೊತ್ತಾಗಿದ್ದು ಬೆಳಗಿನ ನಿತ್ಯ ಕರ್ಮಗಳನ್ನೆಲ್ಲ ಪೂರೈಸಿದ್ದ ಹುಲಿ ತನ್ನ ದೇಹವನ್ನು ಶುಚಿಯಾಗಿಟ್ಟುಕೊಳ್ಳುವುದರ ಭಾಗವಾಗಿ ತನ್ನ ಹಿಂಭಾಗವನ್ನು ನೀರಿಗೆ ಅದ್ದಿಕೊಂಡಿತ್ತು!
ಕಾಡಿನ ನಡುವೆ ರಾತ್ರಿ ಒಮ್ಮೆ ಗರ್ಜನೆ ಮತ್ತು ಆರ್ತನಾದ ಒಟ್ಟಿಗೇ ಕೇಳಿಸಿತು. ಎದೆ ಝಲ್ ಎಂದ ಅನುಭವ! ಇಲ್ಲೇ ಪಕ್ಕದಲ್ಲೆಲ್ಲೋ ಬೇಟೆ ನಡೆಯಿತೆನ್ನುವ ಭಾವ. ದೈತ್ಯ ಪ್ರಾಣಿಯೊಂದು ಅಸಹಾಯಕ ಪ್ರಾಣಿಯೊಂದನ್ನು ಹಿಡಿದಿರಬಹುದು ಎಂಬುದನ್ನು ಊಹೆ ಮಾಡಿಕೊಂಡು, ಕುಳಿತಿದ್ದವರೆಲ್ಲ ಭಯಭೀತರಾಗಿ ಕೋಣೆಯೊಳಕ್ಕೆ ತೆರಳಿದ್ದೆವು. ನಟ್ಟಿರುಳ ರಾತ್ರಿಯಲ್ಲಿ ಘಟಿಸಿರಬಹುದಾದ ಸನ್ನಿವೇಶವನ್ನು ಕಿವಿಯ ಸಹಾಯದಿಂದ ಮತ್ತೆ ಮರುಕಟ್ಟುತ್ತಾ, ನಿದ್ರೆಗೆ ಜಾರಿದ್ದೆವು.
ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…