ಹಾಡು ಪಾಡು

ಹುಲಿ ಯಾಕೆ ನೀರು ಕುಡಿಯಲಿಲ್ಲ?

ಕೀರ್ತಿ ಬೈಂದೂರು

ನೇರವಾಗಿ ಬಂದು ಕೆರೆಯ ನೀರಿಗೆ ನಾಲಿಗೆ ಚಾಚಬೇಕಿದ್ದ ಹುಲಿ ಕೆರೆಯ ದಡದಲ್ಲಿ ಸುಮ್ಮನೆ ಕುಳಿತುಕೊಂಡು ತನ್ನ ಹಿಂಭಾಗವನ್ನು ಮಾತ್ರ ಒದ್ದೆ ಮಾಡಿಕೊಂಡಿತು

ಬೆಳಗಿನ ಜಾವದ ಹೊತ್ತಿನಲ್ಲಿ ಕಬಿನಿ ಹಿನ್ನೀರಿನ ದಮ್ಮನಕಟ್ಟೆ ಕಾಡಲ್ಲಿ ಸಫಾರಿ ಹೋಗಿದ್ದೆವು . ‘ಇದೇ ಕೆರೆ ಪಕ್ಕನೇ ನೋಡ್ತಿರಿ. ಹುಲಿ ಬಂದು ನೀರು ಕುಡ್ಕೊಂಡು ಹೋಗತ್ತೆ’ ಅಂತ ಡ್ರೈವರ್‌ ಹೇಳಿದ. ಆಗವರು ಬರಿಯ ಡ್ರೈವರ್‌ ಆಗಿರಲಿಲ್ಲ. ಜಗತ್ತಿನ ಯಾವುದೋ ಅನೂಹ್ಯ ಲೋಕವನ್ನು ತೋರುವ ವಿಸ್ಮಯಕಾರನಾಗಿದ್ದ.

ಕಾದಿದ್ದಕ್ಕೂ ಸಾರ್ಥಕ, ಹುಲಿ ಬಂತು. ಜೀಪಿನಲ್ಲಿದ್ದ ಏಳು ಜನರೂ ಬೆಕ್ಕಸ ಬೆರಗಾಗಿ ಹುಲಿ ಹೇಗೆ ನೀರು ಕುಡಿಯುತ್ತದೆ ಎಂಬುದನ್ನು ನೋಡಲು ಕಾತರರಾಗಿದ್ದರು. ನಾನೂ ಮೊಬೈಲ್ ತೆಗೆದು, ವಿಡಿಯೋ ಮಾಡಿಕೊಳ್ಳತೊಡಗಿದೆ. ಅಚ್ಚರಿ ಎಂದರೆ ನೇರವಾಗಿ ಬಂದು ಕೆರೆಯ ನೀರಿಗೆ ನಾಲಿಗೆ ಚಾಚಬೇಕಿದ್ದ ಹುಲಿ ಕೆರೆಯ ದಡದಲ್ಲಿ ಸುಮ್ಮನೆ ಕುಳಿತುಕೊಂಡು ತನ್ನ ಹಿಂಭಾಗವನ್ನು ಮಾತ್ರ ಒದ್ದೆ ಮಾಡಿಕೊಂಡಿತು. ಉಳಿದವರೆಲ್ಲ, ‘ವಾವ್! ಎಷ್ಟು ಚೆನ್ನಾಗಿದೆ. ಹುಲಿ ನೀರು ಕುಡಿದು ಹೊರಡ್ತು’ ಎಂದೆಲ್ಲ ಬಾಯಿ ತೆಗೆಯುತ್ತಿದ್ದರು. ನಾನು ಮಾತ್ರ ಹುಲಿ ನೀರೇ ಕುಡಿದಿಲ್ಲವಲ್ಲಾ ಎಂದು ತಲೆಯಲ್ಲಿ ಹುಳ ಬಿಟ್ಟುಕೊಂಡಿದ್ದೆ. ಆಮೇಲೆ ಗೊತ್ತಾಗಿದ್ದು ಬೆಳಗಿನ ನಿತ್ಯ ಕರ್ಮಗಳನ್ನೆಲ್ಲ ಪೂರೈಸಿದ್ದ ಹುಲಿ ತನ್ನ ದೇಹವನ್ನು ಶುಚಿಯಾಗಿಟ್ಟುಕೊಳ್ಳುವುದರ ಭಾಗವಾಗಿ ತನ್ನ ಹಿಂಭಾಗವನ್ನು ನೀರಿಗೆ ಅದ್ದಿಕೊಂಡಿತ್ತು!

ಕಾಡಿನ ನಡುವೆ ರಾತ್ರಿ ಒಮ್ಮೆ ಗರ್ಜನೆ ಮತ್ತು ಆರ್ತನಾದ ಒಟ್ಟಿಗೇ ಕೇಳಿಸಿತು. ಎದೆ ಝಲ್ ಎಂದ ಅನುಭವ! ಇಲ್ಲೇ ಪಕ್ಕದಲ್ಲೆಲ್ಲೋ ಬೇಟೆ ನಡೆಯಿತೆನ್ನುವ ಭಾವ. ದೈತ್ಯ ಪ್ರಾಣಿಯೊಂದು ಅಸಹಾಯಕ ಪ್ರಾಣಿಯೊಂದನ್ನು ಹಿಡಿದಿರಬಹುದು ಎಂಬುದನ್ನು ಊಹೆ ಮಾಡಿಕೊಂಡು, ಕುಳಿತಿದ್ದವರೆಲ್ಲ ಭಯಭೀತರಾಗಿ ಕೋಣೆಯೊಳಕ್ಕೆ ತೆರಳಿದ್ದೆವು. ನಟ್ಟಿರುಳ ರಾತ್ರಿಯಲ್ಲಿ ಘಟಿಸಿರಬಹುದಾದ ಸನ್ನಿವೇಶವನ್ನು ಕಿವಿಯ ಸಹಾಯದಿಂದ ಮತ್ತೆ ಮರುಕಟ್ಟುತ್ತಾ, ನಿದ್ರೆಗೆ ಜಾರಿದ್ದೆವು.

ಆಂದೋಲನ ಡೆಸ್ಕ್

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

2 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

4 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

4 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

5 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

9 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

9 hours ago