ಆಂದೋಲನ ಪುರವಣಿ

ಚರ್ಮದ ಕಾಂತಿಗೆ ಚಂದದ ಉಪಾಯಗಳು

• ರೂಪ ಮಾಚಿಗನಿ

ನಡು ವಯಸ್ಸು ಶುರುವಾಗುತ್ತಿದ್ದಂತೆ ಮಹಿಳೆಯರಲ್ಲಿ ಸಣ್ಣ ಸಣ್ಣ ಆತಂಕಗಳು ಶುರುವಾಗುತ್ತವೆ. ಮುಖ, ಕುತ್ತಿಗೆಯ ಭಾಗಗಳಲ್ಲಿ ಕಾಣಿಸಿಕೊಳ್ಳುವ ನೆರಿಗೆಗಳು, ಬದಲಾಗುವ ದೇಹದ ಪ್ರಕೃತಿ ಮುಂತಾದವು ಮಹಿಳೆಯರಲ್ಲಿ ಕೊಂಚ ಆತಂಕಗಳು ಎದುರಾಗುವಂತೆ ಮಾಡುತ್ತವೆ.

ಈ ಸಮಯದಲ್ಲಿ ಮಹಿಳೆಯರು ತಮ್ಮ ದೇಹದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುವ ವಿವಿಧ ಸೌಂದರ್ಯ ವರ್ಧಕ ಉತ್ಪನ್ನಗಳನ್ನು ಬಳಸಲು ಮುಂದಾಗುತ್ತಾರೆ. ಅವು ದೀರ್ಘ ಕಾಲದವರೆಗೆ ನಮ್ಮ ಚರ್ಮದ ರಕ್ಷಣೆ ಮಾಡಬಲ್ಲವೇ? ಅವುಗಳನ್ನು ಬಳಸಲು ಯೋಗ್ಯವೇ? ಎಂಬ ಗೊಂದಲ ಹೆಚ್ಚಾಗಿರಲಿದೆ.

ದೈನಂದಿನ ಕೆಲಸಗಳ ನಡುವೆ ಸ್ವಲ್ಪ ಬಿಡುವು ಮಾಡಿಕೊಂಡು ನಮ್ಮ ಚರ್ಮ ಮತ್ತು ದೇಹದ ಆರೋಗ್ಯದ ಕಡೆ ಗಮನಹರಿಸುವುದು ಬಹಳ ಮುಖ್ಯ ಇದು ಖಂಡಿತವಾಗಿಯೂ ನಮ್ಮಲ್ಲಿ ಉತ್ತಮ ಬದಲಾವಣೆಗಳನ್ನು ತರಲಿದೆ.
ನಾವು ಮನೆಯಲ್ಲಿಯೇ ಕೆಲ ಜ್ಯೂಸ್‌ಗಳನ್ನು ತಯಾರಿಸಿಕೊಂಡು ಸೇವಿಸುವುದರಿಂದ ಆರೋಗ್ಯಕರ ಮತ್ತು ಹೊಳೆಯುವ ತ್ವಚೆ ನಮ್ಮದಾಗಲಿದೆ.

ಪ್ರತಿದಿನ ಬೆಳಗಿನ ಜಾವ ಒಂದು ಗ್ಲಾಸ್ ಬೆಚ್ಚಗಿನ ನೀರಿಗೆ ಎರಡು ಚಮಚ ಜೇನು ತುಪ್ಪ, ಅರ್ಧ ನಿಂಬೆರಸ ಬೆರೆಸಿ ಕುಡಿಯುವುದರಿಂದ ದೇಹದ ಆರೋಗ್ಯವೂ ಚೆನ್ನಾಗಿರುವುದರಲ್ಲದೆ ತ್ವಚೆಯ ಕಾಂತಿಯನ್ನೂ ಹೆಚ್ಚಿಸಲಿದೆ.
ಒಂದು ಸೌತೆಕಾಯಿ, ಇದರೊಂದಿಗೆ ಐದಾರು ಎಸಳು ಪುದಿನಾ ಎಲೆಗಳು, ಶುಂಠಿ 1 ಇಂಚು ಇವುಗಳನ್ನು ಚೆನ್ನಾಗಿ ರುಬ್ಬಿಕೊಂಡು, ಸೋಸಿ ಅದಕ್ಕೆ ಒಂದು ಚಮಚ ನೀರಿನಲ್ಲಿ ನೆನೆಸಿದ ಶಿಯಾ ಸೀಡ್ಗಳನ್ನು ಬೆರೆಸಿ ಕುಡಿಯುವುದು ಕೂಡ ಚರ್ಮಕ್ಕೆ ಉತ್ತಮ ಮದ್ದು.

ಒಂದು ಕಪ್‌ನ ನಾಲ್ಕನೇ ಒಂದು ಭಾಗದಷ್ಟು ಸೌತೆಕಾಯಿ, ನಾಲ್ಕನೇ ಒಂದು ಭಾಗದಷ್ಟು ಕ್ಯಾರೆಟ್ ಮತ್ತು ಬೀಟ್ಯೂಟ್, ಅರ್ಧ ಕಪ್ ಟೊಮ್ಯಾಟೋ, ಸ್ವಲ್ಪ ಶುಂಠಿ ಎಲ್ಲವನ್ನೂ ನುಣ್ಣಗೆ ರುಬ್ಬಿಕೊಂಡು ನಂತರ ಅದನ್ನು ಸೋಸಿ ಅರ್ಧ ನಿಂಬೆ ರಸ ಹಿಂಡಿ ಪ್ರತಿದಿನ ಕುಡಿಯುವುರಿಂದ ದೇಹದ ಆರೋಗ್ಯ ಕಾಪಾಡಿಕೊಳ್ಳುವ ಜತೆಗೆ 40ರ ಹರೆಯದಲ್ಲಿಯೂ ಚರ್ಮದ ಕಾಂತಿಯನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗಲಿದೆ.

ಒಂದು ಗ್ಲಾಸ್ ಬೆಚ್ಚಗಿನ ನೀರಿಗೆ ಒಂದು ಟೀ ಸ್ಪೂನ್‌ನಷ್ಟು ಆಪಲ್ ಸಿಡಾರ್ ವಿನಿಗರ್, ಅರ್ಧ ನಿಂಬೆ ರಸ ಬೆರೆಸಿ ದಿನವೂ ಬೆಳಿಗ್ಗೆ ಕುಡಿಯಬೇಕು ಇದೂ ಕೂಡ ಚರ್ಮದ ರಕ್ಷಣೆಗೆ ಸಹಕಾರಿ. ಇನ್ನು 200 ಎಂಎಲ್ ಬೆಚ್ಚಗಿನ ಹಾಲಿಗೆ
ಕಾಲು ಚಮಚ ಆರ್ಗ್ಯಾನಿಕ್ ಅರಿಶಿನ ಪುಡಿ, ಸ್ವಲ್ಪ ಶುಂಠಿ, ಸ್ವಲ್ಪ ಮೆಣಸಿನ ಪುಡಿ ಎಲ್ಲವನ್ನೂ ಚೆನ್ನಾಗಿ ಬೆರೆಸಿ ಕುಡಿಯಬೇಕು. ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ.

ಇನ್ನು ಹಣ್ಣುಗಳಲ್ಲಿಯೂ ನಮ್ಮ ಚರ್ಮದ ಕಾಂತಿಯನ್ನು ರಕ್ಷಿಸುವ ಅಂಶಗಳಿವೆ. ಅದರಲ್ಲಿ ಪ್ರಮುಖವಾಗಿ ಒಂದು ಕಪ್ ದಾಳಿಂಬೆ, ಒಂದು ಕಪ್ ಅರೇಂಜ್, ಒಂದು ಕಪ್ ಕ್ಯಾರೇಟ್, ಎಲ್ಲವನ್ನೂ ಚೆನ್ನಾಗಿ ರುಬ್ಬಿಕೊಂಡು ಸೋಸಿ ಆ ರಸಕ್ಕೆ ಒಂದು ಚಿಟಿಕೆ ಉಪ್ಪು, ಅರ್ಧ ನಿಂಬೆ ರಸ ಬೆರೆಸಿ ಕುಡಿಯಬೇಕು. ಇದು ಚರ್ಮದ ಕಾಂತಿ ಹೆಚ್ಚಿಸಲು ಅತ್ಯಂತ ಪರಿಣಾಮಕಾರಿ.

andolana

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

7 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

10 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

14 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

16 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

17 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

18 hours ago