• ಕೇಶವಮೂರ್ತಿ

ತೆಂಗಿನ ತೋಟದಲ್ಲಿ ‘ಯಾದ’ ಅಂದರೆ ಇಲಿಗಳು ಹಾಗೂ ಅಳಿಲುಗಳ ಕಾಟ ವಿಪರೀತವಾದಾಗ ಬೆಳೆ ಗಾರರು ಅವುಗಳಿಂದ ಬೆಳೆಗಳನ್ನು ರಕ್ಷಿಸಲು ವಿಧವಿಧವಾದ ತಂತ್ರಗಳನ್ನು ಬಳಸ್ತಾರೆ. ಇಲಿಗಳ ಹಾವಳಿಯನ್ನು ಹತೋಟಿಗೆ ತರಲು ಕೆಲ ಬಾರಿ ವಿಷ ಪ್ರಯೋಗ ಮಾಡುತ್ತಾರೆ. ಅಲ್ಲದೆ ಬೋನು ಇರಿಸಿ ಅವುಗಳನ್ನು ಸೆರೆ ಹಿಡಿಯುವುದೂ ಉಂಟು. ಇನ್ನು ಕೆಲ ಸಾವಯವ ಕೃಷಿಕರು ತೋಟಗಳಲ್ಲಿ ಬೆಕ್ಕುಗಳನ್ನು ಸಾಕುತ್ತಾರೆ ಅಥವಾ ಹಾವುಗಳನ್ನು ಸಾಯಿಸದೇ ತೋಟದಲ್ಲಿಯೇ ಇರುವಂತೆ ಮಾಡಿ ಅವುಗಳಿಂದ ಇಲಿಗಳ ಹಾವಳಿಯನ್ನು ಹತೋಟಿಗೆ ತರುವ ಪ್ರಯತ್ನ ಮಾಡುತ್ತಾರೆ. ಇಲಿಗಳು ಹಾಗೂ ಅಳಿಲುಗಳು ಮರಹತ್ತದಂತೆ ತೆಂಗಿನ ಮರದ ಮಧ್ಯದಲ್ಲಿ ಕಬ್ಬಿಣದ ತಗಡು ಶೀಟ್‌ಗಳನ್ನು ಹೊಡೆಯುವುದು ಮತ್ತೊಂದು ವಿಧಾನ. ಆದರೆ ಈ ಬುದ್ದಿವಂತ ಜೀವಿಗಳು ತಗಡಿನ ಮೇಲೆ ಹತ್ತುವುದನ್ನು ಹಾಗೂ ನೆಗೆಯುವುದನ್ನು ಕಂಡಾಗ ಬೆರಗಾದ ರೈತರು ಅದೇ ತಗಡನ್ನು ಉಲ್ಟಾ ಆಲಿಕೆಯ ರೀತಿಯಲ್ಲಿ ಕಟ್ಟಿ ‘ಯಾದ’ಗಳು ಮೇಲೆ ಹೋಗುವುದಕ್ಕೆ ಕಡಿವಾಣ ಹಾಕುತ್ತಾರೆ.

ಕೆಲ ಅನುಭವಿ ಕೃಷಿಕರ ಪ್ರಕಾರ, ‘ತೆಂಗಿನ ಮರಕ್ಕೆ ತಗಡು ಹೊಡೆಯುವ ಮೊದಲು, ಮರ ಹತ್ತಿ ಮರದಲ್ಲಿ ವಾಸವಾಗಿರುವ ಯಾದಗಳನ್ನು ಓಡಿಸಬೇಕು. ಇಲ್ಲದಿದ್ದರೆ ಅವು ಮರದ ಮೇಲೆಯೇ ಇದ್ದು ಗರಿ ಕೂಡಿರುವ ತೋಟದಲ್ಲಿ ಮರದಿಂದ ಮರಕ್ಕೆ ಸುಲಭವಾಗಿ ಓಡಾಡುತ್ತವೆ’. ಹೀಗೆಯೇ ತೆಂಗಿನ ಬೆಳೆಗಾರರನ್ನು ಕಾಡುವ ಇಲಿಗಳ ಹತೋಟಿಗೆ ತರತರಹದ ವಿಧಾನ ಅನುಸರಿಸಿದರೂ ಅವು ಮರ ಹತ್ತೋದು ಬಿಟ್ಟಿಲ್ಲ. ಏಕೆ? ಇದೇ ಪ್ರಶ್ನೆಯನ್ನು ರೈತರೊಬ್ಬರು ತುಂಬಿದ ಸಭೆಯಲ್ಲಿ ಕೇಳಿದ್ದರು. ಯಾರಿಂದಲೂ ಸಮರ್ಪಕ ವಾದ ಉತ್ತರ ಬರಲಿಲ್ಲ. ‘ನೀವು ಏನೆಲ್ಲಾ ವಿಧಾನಗಳನ್ನು ಅನುಸರಿಸಿದರೂ ಇಲಿಗಳನ್ನು ಮರ ಹತ್ತದಂತೆ ತಡೆಯುವುದಕ್ಕೆ ಆಗಲ್ಲ. ಅವು ಏಕೆ ಮರ ಹತ್ತುತ್ತವೆ? ಯಾರಾದ್ರೂ ಯೋಚನೆ ಮಾಡಿದ್ದೀರಾ? ಮುಂದುವರಿದು, ಆ ರೈತರೇ ಹೇಳಿದ್ದರು, ‘ನೋಡಿ ಇಲಿಗಳ ಆಹಾರ ಮರದಲ್ಲಿದೆ. ಆ ಆಹಾರ ಬಿಟ್ಟರೆ ಅವಕ್ಕೆ ಬೇರೆ ಆಹಾರವಿಲ್ಲ. ಹಾಗಾಗಿ ಅವು ಎಷ್ಟೇ ಕಷ್ಟಗಳು ಎದುರಾದರೂ ಮರ ಹತ್ತೇ ಹತ್ತುತ್ತವೆ. ಏಕೆ ಹೇಳಿ? ಅವಕ್ಕೆ ಆಹಾರ ಬೇಕು. ಅವೂ ಬದುಕಬೇಕು’, ತುಂಬಿದ ಸಭೆ ಶಾಂತವಾಯಿತು. ಮುಂದುವರಿದು ಹೇಳಿದರು, ‘ನೋಡಿ ಇಲಿಗಳು ಮರ ಹತ್ತುವುದು ತೆಂಗಿನ ಮರದಲ್ಲಿರೋ ಅದರ ಆಹಾರಕ್ಕಾಗಿ ಅಂದಮೇಲೆ, ಅದರ ಆಹಾರವನ್ನು ನಿಮ್ಮ ತೋಟದಲ್ಲಿ ಮರಗಳ ಬುಡದಲ್ಲೇ ಒದಗಿಸಿ. ಆಗ ಅದು ಕಷ್ಟ ಪಟ್ಟು ಮರವನ್ನಾದರೂ ಏಕೆ ಹತ್ತಬೇಕು. ಬುಡದಲ್ಲಿ ನೀವು ಒದಗಿಸಿರುವ ಆಹಾರವನ್ನೇ ತಿಂದುಕೊಂಡು ನೆಲದಲ್ಲಿಯೇ ಬಿಲವನ್ನು ತೋಡಿಕೊಂಡು ವಾಸಿಸುತ್ತವೆ. ಅವುಗಳು ನೆಲದಲ್ಲಿ ಬಿಲ ತೋಡುವುದರಿಂದ ಮಳೆ ನೀರು ಭೂಮಿಯಲ್ಲಿ ಸುಲಭವಾಗಿ ಇಂಗುತ್ತದೆ. ಅವುಗಳ ಮಲ ಮತ್ತು ಮೂತ್ರದ ಮೂಲಕ ಮಣ್ಣಿನ ಫಲವತ್ತತ್ತೆಯೂ ಹೆಚ್ಚಾಗುತ್ತದೆ. ಹಾಗೆಯೇ ಹರಿದಾಡುವ ಹಾವುಗಳಿಗೆ ಅವು ಆಹಾರವಾಗಿ, ನಿಮ್ಮ ತೋಟದಲ್ಲಿ ನಿಸರ್ಗವೇ ನಿಯಂತ್ರಣ ಮಾಡಲಿದೆ’.

ಯಾವ ಆಹಾರಗಳನ್ನು ನೀವು ತೋಟದಲ್ಲಿ ಇಲಿಗಳಿಗಾಗಿ ಬೆಳೆಯಬೇಕು ಎಂದರೆ, ಸಿಹಿ ಗೆಣಸು, ಆರಾರೋಟ್, ಕ್ಯಾರೆಟ್ ಹಾಗೂ ಇತರೆ ಗೆಡ್ಡೆ ಜಾತಿಯ ಬೆಳೆಗಳು. ಇವು ನೆಲಕ್ಕೆ ಹೊದಿಕೆಯಾಗಿ ತೇವ ಸಂರಕ್ಷಣೆಗೂ
ಸಹಕಾರಿಯಾಗಲಿದೆ. ನಿಸರ್ಗ ಪರಿಪೂರ್ಣವಾಗಿದೆ ಅನ್ನುವ ಮಾತಿದೆ. ಇಲ್ಲಿ ನಾವು ಮಾತ್ರ ಬದುಕಿ, ಇತರ ಪ್ರಾಣಿಪಕ್ಷಿಗಳು ಹಾಳಾಗಬೇಕು ಎನ್ನುವ ಭಾವನೆಯೇ ತಪ್ಪು. ನಾವೂ ಬದುಕಿ, ಇತರರಿಗೂ ಬದುಕಲು ಅವಕಾಶ ನೀಡಬೇಕು. ಆಗ ಸಾಮರಸ್ಯ ಸಾಧ್ಯ. ಕೋತಿಗಳ ಕಾಟ ತಪ್ಪಿಸಲು, ತೋಟದ ಸುತ್ತ ಅವುಗಳಿಗೆಂದೇ ನಾಟಿ ಮಾವು, ಹಲಸು, ನೇರಳೆ ಮರ ಹಾಕಿರುವ ರೈತರಿದ್ದಾರೆ. ಅಳಿಲು, ಇಲಿ, ಹಕ್ಕಿ ಪಕ್ಷಿಗಳಿಗಾಗಿ ಆಲ, ಅತ್ತಿ, ಗೋಣಿ ಮರಗಳನ್ನು ಬೆಳೆಸಿರೋ ಪುಣ್ಯಾತರಿದ್ದಾರೆ. ನಿಮ್ಮ ಆಹಾರ ನೀವು ತಿನ್ನಿ ನಮ್ಮ ಆಹಾರದ ಕಡೆ ಬರಬೇಡಿ ಅಂತಾ ಅವುಗಳಿಗೆ ಪರ್ಯಾಯ ಆಹಾರ ಒದಗಿಸಿದರೆ, ಅವುಗಳೇಕೆ ನಮ್ಮ ಆಹಾರದ ಬೆಳೆಗಳ ತಂಟೆಗೆ ಬರುತ್ತವೆ? ಅಷ್ಟಕ್ಕೂ ಅವೇನು ನಮ್ಮ ವೈರಿಗಳಾ?
ಆಲೋಚನೆ ಮಾಡಿ, (ಅಂಕಣಕಾರರು ಮೈಸೂರು ಆಕಾಶವಾಣಿಯಲ್ಲಿ ಕಾರ್ಯಕ್ರಮ ನಿರ್ವಾಹಕರು) keshavamurthy.n@gmail.com

andolana

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

14 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

14 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

14 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

14 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

14 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

15 hours ago