• ಕೇಶವಮೂರ್ತಿ

ತೆಂಗಿನ ತೋಟದಲ್ಲಿ ‘ಯಾದ’ ಅಂದರೆ ಇಲಿಗಳು ಹಾಗೂ ಅಳಿಲುಗಳ ಕಾಟ ವಿಪರೀತವಾದಾಗ ಬೆಳೆ ಗಾರರು ಅವುಗಳಿಂದ ಬೆಳೆಗಳನ್ನು ರಕ್ಷಿಸಲು ವಿಧವಿಧವಾದ ತಂತ್ರಗಳನ್ನು ಬಳಸ್ತಾರೆ. ಇಲಿಗಳ ಹಾವಳಿಯನ್ನು ಹತೋಟಿಗೆ ತರಲು ಕೆಲ ಬಾರಿ ವಿಷ ಪ್ರಯೋಗ ಮಾಡುತ್ತಾರೆ. ಅಲ್ಲದೆ ಬೋನು ಇರಿಸಿ ಅವುಗಳನ್ನು ಸೆರೆ ಹಿಡಿಯುವುದೂ ಉಂಟು. ಇನ್ನು ಕೆಲ ಸಾವಯವ ಕೃಷಿಕರು ತೋಟಗಳಲ್ಲಿ ಬೆಕ್ಕುಗಳನ್ನು ಸಾಕುತ್ತಾರೆ ಅಥವಾ ಹಾವುಗಳನ್ನು ಸಾಯಿಸದೇ ತೋಟದಲ್ಲಿಯೇ ಇರುವಂತೆ ಮಾಡಿ ಅವುಗಳಿಂದ ಇಲಿಗಳ ಹಾವಳಿಯನ್ನು ಹತೋಟಿಗೆ ತರುವ ಪ್ರಯತ್ನ ಮಾಡುತ್ತಾರೆ. ಇಲಿಗಳು ಹಾಗೂ ಅಳಿಲುಗಳು ಮರಹತ್ತದಂತೆ ತೆಂಗಿನ ಮರದ ಮಧ್ಯದಲ್ಲಿ ಕಬ್ಬಿಣದ ತಗಡು ಶೀಟ್‌ಗಳನ್ನು ಹೊಡೆಯುವುದು ಮತ್ತೊಂದು ವಿಧಾನ. ಆದರೆ ಈ ಬುದ್ದಿವಂತ ಜೀವಿಗಳು ತಗಡಿನ ಮೇಲೆ ಹತ್ತುವುದನ್ನು ಹಾಗೂ ನೆಗೆಯುವುದನ್ನು ಕಂಡಾಗ ಬೆರಗಾದ ರೈತರು ಅದೇ ತಗಡನ್ನು ಉಲ್ಟಾ ಆಲಿಕೆಯ ರೀತಿಯಲ್ಲಿ ಕಟ್ಟಿ ‘ಯಾದ’ಗಳು ಮೇಲೆ ಹೋಗುವುದಕ್ಕೆ ಕಡಿವಾಣ ಹಾಕುತ್ತಾರೆ.

ಕೆಲ ಅನುಭವಿ ಕೃಷಿಕರ ಪ್ರಕಾರ, ‘ತೆಂಗಿನ ಮರಕ್ಕೆ ತಗಡು ಹೊಡೆಯುವ ಮೊದಲು, ಮರ ಹತ್ತಿ ಮರದಲ್ಲಿ ವಾಸವಾಗಿರುವ ಯಾದಗಳನ್ನು ಓಡಿಸಬೇಕು. ಇಲ್ಲದಿದ್ದರೆ ಅವು ಮರದ ಮೇಲೆಯೇ ಇದ್ದು ಗರಿ ಕೂಡಿರುವ ತೋಟದಲ್ಲಿ ಮರದಿಂದ ಮರಕ್ಕೆ ಸುಲಭವಾಗಿ ಓಡಾಡುತ್ತವೆ’. ಹೀಗೆಯೇ ತೆಂಗಿನ ಬೆಳೆಗಾರರನ್ನು ಕಾಡುವ ಇಲಿಗಳ ಹತೋಟಿಗೆ ತರತರಹದ ವಿಧಾನ ಅನುಸರಿಸಿದರೂ ಅವು ಮರ ಹತ್ತೋದು ಬಿಟ್ಟಿಲ್ಲ. ಏಕೆ? ಇದೇ ಪ್ರಶ್ನೆಯನ್ನು ರೈತರೊಬ್ಬರು ತುಂಬಿದ ಸಭೆಯಲ್ಲಿ ಕೇಳಿದ್ದರು. ಯಾರಿಂದಲೂ ಸಮರ್ಪಕ ವಾದ ಉತ್ತರ ಬರಲಿಲ್ಲ. ‘ನೀವು ಏನೆಲ್ಲಾ ವಿಧಾನಗಳನ್ನು ಅನುಸರಿಸಿದರೂ ಇಲಿಗಳನ್ನು ಮರ ಹತ್ತದಂತೆ ತಡೆಯುವುದಕ್ಕೆ ಆಗಲ್ಲ. ಅವು ಏಕೆ ಮರ ಹತ್ತುತ್ತವೆ? ಯಾರಾದ್ರೂ ಯೋಚನೆ ಮಾಡಿದ್ದೀರಾ? ಮುಂದುವರಿದು, ಆ ರೈತರೇ ಹೇಳಿದ್ದರು, ‘ನೋಡಿ ಇಲಿಗಳ ಆಹಾರ ಮರದಲ್ಲಿದೆ. ಆ ಆಹಾರ ಬಿಟ್ಟರೆ ಅವಕ್ಕೆ ಬೇರೆ ಆಹಾರವಿಲ್ಲ. ಹಾಗಾಗಿ ಅವು ಎಷ್ಟೇ ಕಷ್ಟಗಳು ಎದುರಾದರೂ ಮರ ಹತ್ತೇ ಹತ್ತುತ್ತವೆ. ಏಕೆ ಹೇಳಿ? ಅವಕ್ಕೆ ಆಹಾರ ಬೇಕು. ಅವೂ ಬದುಕಬೇಕು’, ತುಂಬಿದ ಸಭೆ ಶಾಂತವಾಯಿತು. ಮುಂದುವರಿದು ಹೇಳಿದರು, ‘ನೋಡಿ ಇಲಿಗಳು ಮರ ಹತ್ತುವುದು ತೆಂಗಿನ ಮರದಲ್ಲಿರೋ ಅದರ ಆಹಾರಕ್ಕಾಗಿ ಅಂದಮೇಲೆ, ಅದರ ಆಹಾರವನ್ನು ನಿಮ್ಮ ತೋಟದಲ್ಲಿ ಮರಗಳ ಬುಡದಲ್ಲೇ ಒದಗಿಸಿ. ಆಗ ಅದು ಕಷ್ಟ ಪಟ್ಟು ಮರವನ್ನಾದರೂ ಏಕೆ ಹತ್ತಬೇಕು. ಬುಡದಲ್ಲಿ ನೀವು ಒದಗಿಸಿರುವ ಆಹಾರವನ್ನೇ ತಿಂದುಕೊಂಡು ನೆಲದಲ್ಲಿಯೇ ಬಿಲವನ್ನು ತೋಡಿಕೊಂಡು ವಾಸಿಸುತ್ತವೆ. ಅವುಗಳು ನೆಲದಲ್ಲಿ ಬಿಲ ತೋಡುವುದರಿಂದ ಮಳೆ ನೀರು ಭೂಮಿಯಲ್ಲಿ ಸುಲಭವಾಗಿ ಇಂಗುತ್ತದೆ. ಅವುಗಳ ಮಲ ಮತ್ತು ಮೂತ್ರದ ಮೂಲಕ ಮಣ್ಣಿನ ಫಲವತ್ತತ್ತೆಯೂ ಹೆಚ್ಚಾಗುತ್ತದೆ. ಹಾಗೆಯೇ ಹರಿದಾಡುವ ಹಾವುಗಳಿಗೆ ಅವು ಆಹಾರವಾಗಿ, ನಿಮ್ಮ ತೋಟದಲ್ಲಿ ನಿಸರ್ಗವೇ ನಿಯಂತ್ರಣ ಮಾಡಲಿದೆ’.

ಯಾವ ಆಹಾರಗಳನ್ನು ನೀವು ತೋಟದಲ್ಲಿ ಇಲಿಗಳಿಗಾಗಿ ಬೆಳೆಯಬೇಕು ಎಂದರೆ, ಸಿಹಿ ಗೆಣಸು, ಆರಾರೋಟ್, ಕ್ಯಾರೆಟ್ ಹಾಗೂ ಇತರೆ ಗೆಡ್ಡೆ ಜಾತಿಯ ಬೆಳೆಗಳು. ಇವು ನೆಲಕ್ಕೆ ಹೊದಿಕೆಯಾಗಿ ತೇವ ಸಂರಕ್ಷಣೆಗೂ
ಸಹಕಾರಿಯಾಗಲಿದೆ. ನಿಸರ್ಗ ಪರಿಪೂರ್ಣವಾಗಿದೆ ಅನ್ನುವ ಮಾತಿದೆ. ಇಲ್ಲಿ ನಾವು ಮಾತ್ರ ಬದುಕಿ, ಇತರ ಪ್ರಾಣಿಪಕ್ಷಿಗಳು ಹಾಳಾಗಬೇಕು ಎನ್ನುವ ಭಾವನೆಯೇ ತಪ್ಪು. ನಾವೂ ಬದುಕಿ, ಇತರರಿಗೂ ಬದುಕಲು ಅವಕಾಶ ನೀಡಬೇಕು. ಆಗ ಸಾಮರಸ್ಯ ಸಾಧ್ಯ. ಕೋತಿಗಳ ಕಾಟ ತಪ್ಪಿಸಲು, ತೋಟದ ಸುತ್ತ ಅವುಗಳಿಗೆಂದೇ ನಾಟಿ ಮಾವು, ಹಲಸು, ನೇರಳೆ ಮರ ಹಾಕಿರುವ ರೈತರಿದ್ದಾರೆ. ಅಳಿಲು, ಇಲಿ, ಹಕ್ಕಿ ಪಕ್ಷಿಗಳಿಗಾಗಿ ಆಲ, ಅತ್ತಿ, ಗೋಣಿ ಮರಗಳನ್ನು ಬೆಳೆಸಿರೋ ಪುಣ್ಯಾತರಿದ್ದಾರೆ. ನಿಮ್ಮ ಆಹಾರ ನೀವು ತಿನ್ನಿ ನಮ್ಮ ಆಹಾರದ ಕಡೆ ಬರಬೇಡಿ ಅಂತಾ ಅವುಗಳಿಗೆ ಪರ್ಯಾಯ ಆಹಾರ ಒದಗಿಸಿದರೆ, ಅವುಗಳೇಕೆ ನಮ್ಮ ಆಹಾರದ ಬೆಳೆಗಳ ತಂಟೆಗೆ ಬರುತ್ತವೆ? ಅಷ್ಟಕ್ಕೂ ಅವೇನು ನಮ್ಮ ವೈರಿಗಳಾ?
ಆಲೋಚನೆ ಮಾಡಿ, (ಅಂಕಣಕಾರರು ಮೈಸೂರು ಆಕಾಶವಾಣಿಯಲ್ಲಿ ಕಾರ್ಯಕ್ರಮ ನಿರ್ವಾಹಕರು) keshavamurthy.n@gmail.com

andolana

Recent Posts

ಚಾರಣಕ್ಕೆ ಹೊಸ ಮಾರ್ಗಸೂಚಿ; ಮೆಚ್ಚುಗೆ

ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…

2 hours ago

ಖಾಸಗಿ ಶಾಲೆಗಳ ಆರ್ಭಟಕ್ಕೆ ಬಾಡಿದ ಸರ್ಕಾರಿ ಶಾಲೆ

ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…

2 hours ago

‘ಅಮೆರಿಕದಲ್ಲಿ ನೆಲೆ ಕಂಡುಕೊಂಡಿರುವ ಮಕ್ಕಳ ಭವಿಷ್ಯದ ಬಗ್ಗೆ ಭಯವಾಗುತ್ತದೆ…’

ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…

2 hours ago

ಕಾವೇರಿ ನದಿಯಲ್ಲಿ ಬರೀ ಬಂಡೆಗಲ್ಲುಗಳ ದರ್ಶನ

ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ  ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ…

2 hours ago

ಮದ್ದೂರಮ್ಮ ಉತ್ಸವ; ಕಳೆಗಟ್ಟಿದ ದನಗಳ ಜಾತ್ರೆ

ಎಂ.ಆರ್.ಚಕ್ರಪಾಣಿ ಜಾತ್ರೆಯಲ್ಲಿ ಹಳ್ಳಿಕಾರ್ ಎತ್ತುಗಳು, ಟಗರುಗಳ ಆಕರ್ಷಣೆ; ಸ್ಥಳವಕಾಶದ ಕೊರತೆಗೆ ರೈತರು ಬೇಸರ ಮದ್ದೂರು: ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಶನಿವಾರ…

2 hours ago