ಆಂದೋಲನ ಪುರವಣಿ

ಅರ್ಜಿ ಬರೆದುಕೊಡುತ್ತಾ ಬರಹಗಾರನಾದೆ

 

ಮಧುಕರ ಮಳವಳ್ಳಿ
madhukaramalavalli@gmail.com

ಡಿಗ್ರಿ ಓದುವ ಸಮಯ ಮತ್ತು ಡಿಎಸ್‌ಎಸ್‌ನ ಚಳವಳಿಯ ಕಾವು ನನಗಿತ್ತು. ನಮ್ಮೂರು ಮಳವಳ್ಳಿ. ತಾಲ್ಲೂಕು ಕೇಂದ್ರ ಕೂಡ. ಸುತ್ತಮುತ್ತಲಿನ ಗ್ರಾಮದವರು ತಾಲ್ಲೂಕು ಕಚೇರಿಗೆ ಬರುತ್ತಿದ್ದರು. ಹಾಗೆ ಬಂದವರು ಟೀ-ಕಾಫಿ ಅಂಗಡಿಗೆ ಬಂದು ‘‘ಸ್ವಾಮಿ ಅಪ್ಪ’’ ಎನ್ನುತ್ತ ಜಾತಿ ಪ್ರಮಾಣಪತ್ರ, ಪೊಲೀಸ್ ಠಾಣೆಗೆ ಅರ್ಜಿ, ಪಿಂಚಣಿಗೆ ಇತ್ಯಾದಿಗೆ ಅರ್ಜಿ ಬರೆದುಕೊಡಿ ಎಂದು ಬಹಳ ಭಯ ಭಕ್ತಿಯಿಂದ ಕೇಳ್ತಿದ್ರು. ಇದ್ನೆಲ್ಲ ನೋಡುವಾಗ ಮನದಲ್ಲಿ ಒಂದು ರೀತಿಯ ತಾಕಲಾಟ.
ಒಂದಿನ ಸುಮಾರು ಪ್ರಾಯದ ಹೆಂಗಸು ಬಂದು ಟೀ ಕಂ ಸ್ಟೇಷನರಿ ಅಂಗಡಿಯ ಮುಂದೆ ಕುಳಿತಳು. ಸುಮಾರು ಹೊತ್ತು ಕಳೆದ ನಂತರ ಆ ಹೆಂಗಸು ‘ಅಣ್ಣ ಇಲ್ಲಿ ಅರ್ಜಿ ಬರ್ದು ಕೊಡ್ತಾರಲ್ಲಾ ಅವುತ್ರೃ ಬಂದಿಲ್ವಾ’ ಎಂದಳು. ‘ಯಾಕಮ್ಮ’ ಅಂದೆ. ‘ನಂಗೆ ಮುಂಡೆ ಪಿಂಚಣಿ ಮಾಡುಸ್ಬೇಕು’ ಅಂದಳು. ‘ಅಲ್ಲಮ್ಮ ನೀ ಓದಿಲ್ವಾ. ಒಂದ್ ಅರ್ಜಿ ಬರೆಯೋಕಾಗಲ್ವ’ ಅಂದೆ. ‘‘ಅಯ್ಯೋ ಹೆಣ್ಮಕ್ಳು ಹೆಚ್ಚು ಓದ್ಬಾರ್ದು ಅಂತ ನಮ್ ಮನೇಲಿ ಸ್ಕೂಲ್ ಬಿಡುಸ್ಬುಟ್ರು. ಅದು ಅಲ್ದೆ ನಾವು ತಳ’ ಆ ಜಾತಿಯವುತ್ರೃ. ನಮ್ಗೆ ಯಾಕಪ್ಪ ಓದು ಬರಹ, ನೀನು ಅರ್ಜಿ ಬರೆಯವ್ರ ತೋರ್ಸಪ್ಪ’’ ಅಂದಳು.

ಅರ್ಜಿ ಬರೆದುಕೊಡಲು ಇಪ್ಪತ್ತು ರೂಪಾಯಿ ಕೊಡಬೇಕಾಗುತ್ತೆ ಎಂದೆ. ಆ ಹೆಂಗಸು ‘ಫಸ್ಟ್ ಸರಿ ಬರುವ ಪಿಂಚಣಿಯ ಎಲ್ಲಾ ಅವರೆ ತಕ್ಕಳ್ಲಿ. ಅದು ಬರೋಹಂಗೆ ಮಾಡ್ಲಿ’ ಎನ್ನುತ್ತ ಕಣ್ಣೀರು ಹಾಕಿ ‘ನಂಗೆ ಯಾರು ದಿಕ್ಕುದೆಸೆ ಇಲ್ಲ. ಆ ಮುಂಡೆಮಗ ಏಡ್ ಮಕ್ಕಳ ಕೊಟ್ಬುಟ್ಟು ಮಣ್ ಪಾಲಾದ. ಕೂಲಿನಾಲಿ ಮಾಡಿ ಮಕ್ಕಳ ಸಾಕ್ತೀನಿ. ಸಣ್ಣಪುಟ್ಟ ಸಾಲ ಮಾಡುದ್ರೆ ಈ ದುಡ್ಡಿಂದ ಆ ಸಾಲ ತೀರುಸ್ಬಹುದು’ ಎಂದು ಧೈರ್ಯದಿಂದಲೇ ಹೇಳಿದಳು. ತಕ್ಷಣವೇ ಅಂಗಡಿಯಲ್ಲಿ ಹಾಳೆ ತೆಕ್ಕೊಂಡು ನನಗೆ ತಿಳಿದ ರೀತಿಯಲ್ಲಿ ಅರ್ಜಿ ಬರೆದುಕೊಟ್ಟೆ. ‘ಟೀ ನಾದ್ರು ಕುಡ್ಕಪ್ಪ’ ಎನ್ನುತ್ತ ಐದು ರುಪಾಯಿ ನೋಟ ಕೈಗಿಟ್ಟು ಹೊರಟಳು.

ಆಗ ನಾಲ್ಕು ಸಾಲು ಅರ್ಜಿ ಬರಸ್ಕೋಳೋಕೆ ಜನ ಅಕ್ಷರ ಜ್ಞಾನವಿಲ್ಲದೇ ಯಾಕ್ ಪರ್ದಾಡ್‌ಬೇಕು. ಇದಕ್ಕೆ ಏನಾರ ಮಾಡ್ಬೇಕು. ಅಂತ ಯೋಚನೆ ಶುರುವಾಯ್ತು. ಆಗ ಮನ್ಸಿಗೆ ಮೂಡಿದ್ದು ನಮ್ ಜನಕ್ಕೆ ಶಿಕ್ಷಣದ ಅರಿವು ಮೂಡುಸ್ಬೇಕು. ಅದನ್ನ ಹೇಳೋರೀತಿ ಹೆಂಗೆ ಅಂತ ಯೋಚ್ನೆ ಮಾಡಿ ಕವಿತೆ ಬರಿೋಂಕೆ ಶುರುಮಾಡ್ದೆ. ಒಂದೆರಡು ಕವಿತೆಗಳು ಸ್ಥಳೀಯ ಪತ್ರಿಕೇಲಿ ಪ್ರಕಟವಾದ್ವು. ಮತ್ತೆ ಯೋಚನೆ ಶುರುವಾಯ್ತು. ಓದುಬರಹ ತಿಳಿಯದ ಜನಕ್ಕೆ ಕವಿತೆ ಓದಿ ಹೇಳೋರ್ಯಾರು ಅಂತ. ಆಗ ಬೀದಿ ನಾಟಕಗಳ ಚಳವಳಿ ತುಂಬಾ ಇತ್ತು. ನಾನು ಒಂದ್ ತಂಡ ಸೇರ್ಕಂಡು ನಾಟ್ಕ ಮಾಡ್ತ ಹಳ್ಳಿಗಳಿಗೆ ಹೋದಾಗ ಎಲ್ಲರಿಗೂ ಶಿಕ್ಷಣ ಪಡಿಬೇಕು ಅಂತ ಹೇಳೋಕ್ ಶುರುಮಾಡ್ದೆ. ಇಂತ ಘಟನೆಗಳೇ ನನ್ನೊಳಗಿನ ಬರಹಗಾರನನ್ನು ಉಂಟುಮಾಡಿವೆ.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago