ಆಂದೋಲನ ಪುರವಣಿ

ಅರ್ಜಿ ಬರೆದುಕೊಡುತ್ತಾ ಬರಹಗಾರನಾದೆ

 

ಮಧುಕರ ಮಳವಳ್ಳಿ
madhukaramalavalli@gmail.com

ಡಿಗ್ರಿ ಓದುವ ಸಮಯ ಮತ್ತು ಡಿಎಸ್‌ಎಸ್‌ನ ಚಳವಳಿಯ ಕಾವು ನನಗಿತ್ತು. ನಮ್ಮೂರು ಮಳವಳ್ಳಿ. ತಾಲ್ಲೂಕು ಕೇಂದ್ರ ಕೂಡ. ಸುತ್ತಮುತ್ತಲಿನ ಗ್ರಾಮದವರು ತಾಲ್ಲೂಕು ಕಚೇರಿಗೆ ಬರುತ್ತಿದ್ದರು. ಹಾಗೆ ಬಂದವರು ಟೀ-ಕಾಫಿ ಅಂಗಡಿಗೆ ಬಂದು ‘‘ಸ್ವಾಮಿ ಅಪ್ಪ’’ ಎನ್ನುತ್ತ ಜಾತಿ ಪ್ರಮಾಣಪತ್ರ, ಪೊಲೀಸ್ ಠಾಣೆಗೆ ಅರ್ಜಿ, ಪಿಂಚಣಿಗೆ ಇತ್ಯಾದಿಗೆ ಅರ್ಜಿ ಬರೆದುಕೊಡಿ ಎಂದು ಬಹಳ ಭಯ ಭಕ್ತಿಯಿಂದ ಕೇಳ್ತಿದ್ರು. ಇದ್ನೆಲ್ಲ ನೋಡುವಾಗ ಮನದಲ್ಲಿ ಒಂದು ರೀತಿಯ ತಾಕಲಾಟ.
ಒಂದಿನ ಸುಮಾರು ಪ್ರಾಯದ ಹೆಂಗಸು ಬಂದು ಟೀ ಕಂ ಸ್ಟೇಷನರಿ ಅಂಗಡಿಯ ಮುಂದೆ ಕುಳಿತಳು. ಸುಮಾರು ಹೊತ್ತು ಕಳೆದ ನಂತರ ಆ ಹೆಂಗಸು ‘ಅಣ್ಣ ಇಲ್ಲಿ ಅರ್ಜಿ ಬರ್ದು ಕೊಡ್ತಾರಲ್ಲಾ ಅವುತ್ರೃ ಬಂದಿಲ್ವಾ’ ಎಂದಳು. ‘ಯಾಕಮ್ಮ’ ಅಂದೆ. ‘ನಂಗೆ ಮುಂಡೆ ಪಿಂಚಣಿ ಮಾಡುಸ್ಬೇಕು’ ಅಂದಳು. ‘ಅಲ್ಲಮ್ಮ ನೀ ಓದಿಲ್ವಾ. ಒಂದ್ ಅರ್ಜಿ ಬರೆಯೋಕಾಗಲ್ವ’ ಅಂದೆ. ‘‘ಅಯ್ಯೋ ಹೆಣ್ಮಕ್ಳು ಹೆಚ್ಚು ಓದ್ಬಾರ್ದು ಅಂತ ನಮ್ ಮನೇಲಿ ಸ್ಕೂಲ್ ಬಿಡುಸ್ಬುಟ್ರು. ಅದು ಅಲ್ದೆ ನಾವು ತಳ’ ಆ ಜಾತಿಯವುತ್ರೃ. ನಮ್ಗೆ ಯಾಕಪ್ಪ ಓದು ಬರಹ, ನೀನು ಅರ್ಜಿ ಬರೆಯವ್ರ ತೋರ್ಸಪ್ಪ’’ ಅಂದಳು.

ಅರ್ಜಿ ಬರೆದುಕೊಡಲು ಇಪ್ಪತ್ತು ರೂಪಾಯಿ ಕೊಡಬೇಕಾಗುತ್ತೆ ಎಂದೆ. ಆ ಹೆಂಗಸು ‘ಫಸ್ಟ್ ಸರಿ ಬರುವ ಪಿಂಚಣಿಯ ಎಲ್ಲಾ ಅವರೆ ತಕ್ಕಳ್ಲಿ. ಅದು ಬರೋಹಂಗೆ ಮಾಡ್ಲಿ’ ಎನ್ನುತ್ತ ಕಣ್ಣೀರು ಹಾಕಿ ‘ನಂಗೆ ಯಾರು ದಿಕ್ಕುದೆಸೆ ಇಲ್ಲ. ಆ ಮುಂಡೆಮಗ ಏಡ್ ಮಕ್ಕಳ ಕೊಟ್ಬುಟ್ಟು ಮಣ್ ಪಾಲಾದ. ಕೂಲಿನಾಲಿ ಮಾಡಿ ಮಕ್ಕಳ ಸಾಕ್ತೀನಿ. ಸಣ್ಣಪುಟ್ಟ ಸಾಲ ಮಾಡುದ್ರೆ ಈ ದುಡ್ಡಿಂದ ಆ ಸಾಲ ತೀರುಸ್ಬಹುದು’ ಎಂದು ಧೈರ್ಯದಿಂದಲೇ ಹೇಳಿದಳು. ತಕ್ಷಣವೇ ಅಂಗಡಿಯಲ್ಲಿ ಹಾಳೆ ತೆಕ್ಕೊಂಡು ನನಗೆ ತಿಳಿದ ರೀತಿಯಲ್ಲಿ ಅರ್ಜಿ ಬರೆದುಕೊಟ್ಟೆ. ‘ಟೀ ನಾದ್ರು ಕುಡ್ಕಪ್ಪ’ ಎನ್ನುತ್ತ ಐದು ರುಪಾಯಿ ನೋಟ ಕೈಗಿಟ್ಟು ಹೊರಟಳು.

ಆಗ ನಾಲ್ಕು ಸಾಲು ಅರ್ಜಿ ಬರಸ್ಕೋಳೋಕೆ ಜನ ಅಕ್ಷರ ಜ್ಞಾನವಿಲ್ಲದೇ ಯಾಕ್ ಪರ್ದಾಡ್‌ಬೇಕು. ಇದಕ್ಕೆ ಏನಾರ ಮಾಡ್ಬೇಕು. ಅಂತ ಯೋಚನೆ ಶುರುವಾಯ್ತು. ಆಗ ಮನ್ಸಿಗೆ ಮೂಡಿದ್ದು ನಮ್ ಜನಕ್ಕೆ ಶಿಕ್ಷಣದ ಅರಿವು ಮೂಡುಸ್ಬೇಕು. ಅದನ್ನ ಹೇಳೋರೀತಿ ಹೆಂಗೆ ಅಂತ ಯೋಚ್ನೆ ಮಾಡಿ ಕವಿತೆ ಬರಿೋಂಕೆ ಶುರುಮಾಡ್ದೆ. ಒಂದೆರಡು ಕವಿತೆಗಳು ಸ್ಥಳೀಯ ಪತ್ರಿಕೇಲಿ ಪ್ರಕಟವಾದ್ವು. ಮತ್ತೆ ಯೋಚನೆ ಶುರುವಾಯ್ತು. ಓದುಬರಹ ತಿಳಿಯದ ಜನಕ್ಕೆ ಕವಿತೆ ಓದಿ ಹೇಳೋರ್ಯಾರು ಅಂತ. ಆಗ ಬೀದಿ ನಾಟಕಗಳ ಚಳವಳಿ ತುಂಬಾ ಇತ್ತು. ನಾನು ಒಂದ್ ತಂಡ ಸೇರ್ಕಂಡು ನಾಟ್ಕ ಮಾಡ್ತ ಹಳ್ಳಿಗಳಿಗೆ ಹೋದಾಗ ಎಲ್ಲರಿಗೂ ಶಿಕ್ಷಣ ಪಡಿಬೇಕು ಅಂತ ಹೇಳೋಕ್ ಶುರುಮಾಡ್ದೆ. ಇಂತ ಘಟನೆಗಳೇ ನನ್ನೊಳಗಿನ ಬರಹಗಾರನನ್ನು ಉಂಟುಮಾಡಿವೆ.

andolana

Recent Posts

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ: ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…

2 hours ago

ಕಳೆದ 4 ವರ್ಷದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಗೆ 35 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…

2 hours ago

ಮತ್ತೆರಡು ಸಮಾವೇಶ ಮಾಡಲು ಸಜ್ಜಾದ ಜೆಡಿಎಸ್‌: ಚುನಾವಣೆ ಗೆಲ್ಲಲು ರಣತಂತ್ರ

ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ…

2 hours ago

ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ: ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ

ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…

2 hours ago

ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ

ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…

3 hours ago

ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಹೇಳಿಕೆಗೆ ಕಿಚ್ಚ ಸುದೀಪ್‌ ಕೆಂಡಾಮಂಡಲ

ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…

4 hours ago