ಡಿಗ್ರಿ ಓದುವ ಸಮಯ ಮತ್ತು ಡಿಎಸ್ಎಸ್ನ ಚಳವಳಿಯ ಕಾವು ನನಗಿತ್ತು. ನಮ್ಮೂರು ಮಳವಳ್ಳಿ. ತಾಲ್ಲೂಕು ಕೇಂದ್ರ ಕೂಡ. ಸುತ್ತಮುತ್ತಲಿನ ಗ್ರಾಮದವರು ತಾಲ್ಲೂಕು ಕಚೇರಿಗೆ ಬರುತ್ತಿದ್ದರು. ಹಾಗೆ ಬಂದವರು ಟೀ-ಕಾಫಿ ಅಂಗಡಿಗೆ ಬಂದು ‘‘ಸ್ವಾಮಿ ಅಪ್ಪ’’ ಎನ್ನುತ್ತ ಜಾತಿ ಪ್ರಮಾಣಪತ್ರ, ಪೊಲೀಸ್ ಠಾಣೆಗೆ ಅರ್ಜಿ, ಪಿಂಚಣಿಗೆ ಇತ್ಯಾದಿಗೆ ಅರ್ಜಿ ಬರೆದುಕೊಡಿ ಎಂದು ಬಹಳ ಭಯ ಭಕ್ತಿಯಿಂದ ಕೇಳ್ತಿದ್ರು. ಇದ್ನೆಲ್ಲ ನೋಡುವಾಗ ಮನದಲ್ಲಿ ಒಂದು ರೀತಿಯ ತಾಕಲಾಟ.
ಒಂದಿನ ಸುಮಾರು ಪ್ರಾಯದ ಹೆಂಗಸು ಬಂದು ಟೀ ಕಂ ಸ್ಟೇಷನರಿ ಅಂಗಡಿಯ ಮುಂದೆ ಕುಳಿತಳು. ಸುಮಾರು ಹೊತ್ತು ಕಳೆದ ನಂತರ ಆ ಹೆಂಗಸು ‘ಅಣ್ಣ ಇಲ್ಲಿ ಅರ್ಜಿ ಬರ್ದು ಕೊಡ್ತಾರಲ್ಲಾ ಅವುತ್ರೃ ಬಂದಿಲ್ವಾ’ ಎಂದಳು. ‘ಯಾಕಮ್ಮ’ ಅಂದೆ. ‘ನಂಗೆ ಮುಂಡೆ ಪಿಂಚಣಿ ಮಾಡುಸ್ಬೇಕು’ ಅಂದಳು. ‘ಅಲ್ಲಮ್ಮ ನೀ ಓದಿಲ್ವಾ. ಒಂದ್ ಅರ್ಜಿ ಬರೆಯೋಕಾಗಲ್ವ’ ಅಂದೆ. ‘‘ಅಯ್ಯೋ ಹೆಣ್ಮಕ್ಳು ಹೆಚ್ಚು ಓದ್ಬಾರ್ದು ಅಂತ ನಮ್ ಮನೇಲಿ ಸ್ಕೂಲ್ ಬಿಡುಸ್ಬುಟ್ರು. ಅದು ಅಲ್ದೆ ನಾವು ತಳ’ ಆ ಜಾತಿಯವುತ್ರೃ. ನಮ್ಗೆ ಯಾಕಪ್ಪ ಓದು ಬರಹ, ನೀನು ಅರ್ಜಿ ಬರೆಯವ್ರ ತೋರ್ಸಪ್ಪ’’ ಅಂದಳು.
ಅರ್ಜಿ ಬರೆದುಕೊಡಲು ಇಪ್ಪತ್ತು ರೂಪಾಯಿ ಕೊಡಬೇಕಾಗುತ್ತೆ ಎಂದೆ. ಆ ಹೆಂಗಸು ‘ಫಸ್ಟ್ ಸರಿ ಬರುವ ಪಿಂಚಣಿಯ ಎಲ್ಲಾ ಅವರೆ ತಕ್ಕಳ್ಲಿ. ಅದು ಬರೋಹಂಗೆ ಮಾಡ್ಲಿ’ ಎನ್ನುತ್ತ ಕಣ್ಣೀರು ಹಾಕಿ ‘ನಂಗೆ ಯಾರು ದಿಕ್ಕುದೆಸೆ ಇಲ್ಲ. ಆ ಮುಂಡೆಮಗ ಏಡ್ ಮಕ್ಕಳ ಕೊಟ್ಬುಟ್ಟು ಮಣ್ ಪಾಲಾದ. ಕೂಲಿನಾಲಿ ಮಾಡಿ ಮಕ್ಕಳ ಸಾಕ್ತೀನಿ. ಸಣ್ಣಪುಟ್ಟ ಸಾಲ ಮಾಡುದ್ರೆ ಈ ದುಡ್ಡಿಂದ ಆ ಸಾಲ ತೀರುಸ್ಬಹುದು’ ಎಂದು ಧೈರ್ಯದಿಂದಲೇ ಹೇಳಿದಳು. ತಕ್ಷಣವೇ ಅಂಗಡಿಯಲ್ಲಿ ಹಾಳೆ ತೆಕ್ಕೊಂಡು ನನಗೆ ತಿಳಿದ ರೀತಿಯಲ್ಲಿ ಅರ್ಜಿ ಬರೆದುಕೊಟ್ಟೆ. ‘ಟೀ ನಾದ್ರು ಕುಡ್ಕಪ್ಪ’ ಎನ್ನುತ್ತ ಐದು ರುಪಾಯಿ ನೋಟ ಕೈಗಿಟ್ಟು ಹೊರಟಳು.
ಆಗ ನಾಲ್ಕು ಸಾಲು ಅರ್ಜಿ ಬರಸ್ಕೋಳೋಕೆ ಜನ ಅಕ್ಷರ ಜ್ಞಾನವಿಲ್ಲದೇ ಯಾಕ್ ಪರ್ದಾಡ್ಬೇಕು. ಇದಕ್ಕೆ ಏನಾರ ಮಾಡ್ಬೇಕು. ಅಂತ ಯೋಚನೆ ಶುರುವಾಯ್ತು. ಆಗ ಮನ್ಸಿಗೆ ಮೂಡಿದ್ದು ನಮ್ ಜನಕ್ಕೆ ಶಿಕ್ಷಣದ ಅರಿವು ಮೂಡುಸ್ಬೇಕು. ಅದನ್ನ ಹೇಳೋರೀತಿ ಹೆಂಗೆ ಅಂತ ಯೋಚ್ನೆ ಮಾಡಿ ಕವಿತೆ ಬರಿೋಂಕೆ ಶುರುಮಾಡ್ದೆ. ಒಂದೆರಡು ಕವಿತೆಗಳು ಸ್ಥಳೀಯ ಪತ್ರಿಕೇಲಿ ಪ್ರಕಟವಾದ್ವು. ಮತ್ತೆ ಯೋಚನೆ ಶುರುವಾಯ್ತು. ಓದುಬರಹ ತಿಳಿಯದ ಜನಕ್ಕೆ ಕವಿತೆ ಓದಿ ಹೇಳೋರ್ಯಾರು ಅಂತ. ಆಗ ಬೀದಿ ನಾಟಕಗಳ ಚಳವಳಿ ತುಂಬಾ ಇತ್ತು. ನಾನು ಒಂದ್ ತಂಡ ಸೇರ್ಕಂಡು ನಾಟ್ಕ ಮಾಡ್ತ ಹಳ್ಳಿಗಳಿಗೆ ಹೋದಾಗ ಎಲ್ಲರಿಗೂ ಶಿಕ್ಷಣ ಪಡಿಬೇಕು ಅಂತ ಹೇಳೋಕ್ ಶುರುಮಾಡ್ದೆ. ಇಂತ ಘಟನೆಗಳೇ ನನ್ನೊಳಗಿನ ಬರಹಗಾರನನ್ನು ಉಂಟುಮಾಡಿವೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…