ಆಂದೋಲನ ಪುರವಣಿ

ವನಿತೆ ಮಮತೆ : ಹಕ್ಕಿಯ ಬೆನ್ನುಬಿದ್ದರೆ ದೂರ ದೂರವೆನಿಸದು

ಅಪರಿಮಿತ ಉತ್ಸಾಹಕ್ಕೆ ಲೀಲಾ ಅಪ್ಪಾಜಿ ಅವರನ್ನು ಆರಾಮವಾಗಿ ಉದಾಹರಿಸಬಹುದು. ನಿವೃತ್ತಿಯ ಜೀವನವನ್ನು ತಮ್ಮಿಷ್ಟದ ಫೋಟೋಗ್ರಫಿ ಪ್ರಪಂಚಕ್ಕೆ ಮೀಸಲಿಟ್ಟು ಕಾಡು, ಮೇಡು, ಬೆಟ್ಟ, ಬಯಲುಗಳನ್ನು ಹತ್ತಿಳಿದು ಹಕ್ಕಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಮಂಡ್ಯ ನೆಲದ ಸಾಧಕಿ ಲೀಲಾ ಅಪ್ಪಾಜಿ ಇಲ್ಲಿ ತಮ್ಮ ಬದುಕು ಮತ್ತು ಹಕ್ಕಿ ಛಾಯಾಗ್ರಹಣದ ಬಗ್ಗೆ ಸಂಕ್ಷಿಪ್ತವಾಗಿ ಹೇಳಿಕೊಂಡಿದ್ದಾರೆ.

 

ಮೂವತ್ತೆ ದು ವರ್ಷ ಕನ್ನಡ ಉಪನ್ಯಾಸಕಿಯಾಗಿ, ನಂತರ ಪ್ರಿನ್ಸಿಪಾಲ್ ಆಗಿ ಕೆಲಸ ಮಾಡಿ ನಿವೃತ್ತಿಯ ನಂತರ ಹಕ್ಕಿ ಛಾಯಾಗ್ರಹಣದ ಕ್ಷೇತ್ರಕ್ಕೆ ಬಂದೆ. ಕ್ಯಾಮೆರಾದ ಒಡನಾಟ ಆ ಮೊದಲೇ ಇದ್ದರೂ ಸೀಮಿತ ಉದ್ದೇಶಕ್ಕಾಗಿ ಬಳಕೆಯಾಗುತ್ತಿತ್ತು. ನನ್ನ ಸಂಶೋಧನಾ ಅಧ್ಯಯನ ಹಾಗೂ ಪ್ರಿನ್ಸಿಪಾಲ್ ಆದ ಬಳಿಕ ಎಲ್ಲ ಕಾರ್ಯಕ್ರಮಗಳಿಗೆ ಕ್ಯಾಮೆರಾ ಬಳಸುತ್ತಿದ್ದೆ. ಸಾಹಿತ್ಯದ ಪಾಠ ಮಾಡುವಾಗ ಅದರಲ್ಲೂ ತೇಜಸ್ವಿ ಕುರಿತು ಹೇಳುವಾಗ ಕ್ಯಾಮರಾ ಬಗ್ಗೆ ವಿಶೇಷ ಸೆಳೆತ ಇದ್ದೇ ಇತ್ತು. ಅದರಲ್ಲೂ ಅವರ ಛಾಯಾಗ್ರಹಣ ಹಾಗೂ ಪ್ರೋಂಗಗಳ ಬಗ್ಗೆ ಕುತೂಹಲ ಇತ್ತು. ಕೆಲಸದ ಜವಾಬ್ದಾರಿಯ ಒತ್ತಡ ಕಳೆದ ಬಳಿಕ ಅದುವರೆಗೂ ಹೆಚ್ಚು ಕೆಲಸ ಮಾಡದಿದ್ದ ಕ್ಷೇತ್ರದ ಆ್ಂಕೆುಯಾಗಿ ಹಕ್ಕಿ ಛಾಯಾಗ್ರಹಣ ಆರಿಸಿಕೊಂಡೆ. ಪಕ್ಷಿ ಜೊತೆಗೆ ಪರಿಸರವೂ ಎಷ್ಟು ಮಹತ್ವದ್ದೆಂಬುದೂ ಅರಿವಾಯಿತು. ಹಕ್ಕಿಗಳ ವೈವಿಧ್ಯತೆ ಬಣ್ಣ, ಕೊಕ್ಕು ಮತ್ತೊಂದು ಆಕರ್ಷಕ.

ಹಕ್ಕಿ ಕಲಿಸಿದ ಮೌನ
ಮಾತುಗಾರಿಕೆಯ ಉಪನ್ಯಾಸಕಿಯಾಗಿ, ಭಾಷಣಕಾರ್ತಿಯಾಗಿ ಕಾಲ ಕಳೆದಿದ್ದ ನನಗೆ ಹಕ್ಕಿ ಮೌನ ಕಲಿಸಿದೆ, ಏಕಾಗ್ರತೆ ತಂದಿದೆ, ಹೊಸ ಉತ್ಸಾಹ ತುಂಬಿದೆ. ದೈಹಿಕ ನೋವು ಆಯಾಸಗಳನ್ನು ಮರೆಸಿ ಉತ್ಸಾಹ ತುಂಬಿಸಿದೆ. ಅಲ್ಲಿಯ ತನಕ ನಾ ಕಾಣದೇ ಇದ್ದ ಹೊಸತೊಂದು ಲೋಕಕ್ಕೆ ಕರೆದೊಯ್ದಿದೆ. ಬೇರೆ ಎಲ್ಲ ಫೋಟೋಗ್ರಾಫಿಗಳಿಗಿಂತ ಹಕ್ಕಿ ಫೋಟೋಗ್ರಾಫಿಯಲ್ಲಿ ತೇಜಸ್ವಿ ಹೇಳಿದಂತೆ ಯಾವುದೂ ನಮ್ಮ ನಿಯಂತ್ರಣದಲ್ಲಿ ಇರುವುದಿಲ್ಲ. ಹಿಡಿಯಷ್ಟಿರುವ ಹಕ್ಕಿ ಅನಂತದಷ್ಟು ತಾಳ್ಮೆ ಕಲಿಸುತ್ತದೆ. ಹಕ್ಕಿಯ ಚಲನವಲನಗಳ ಅರಿವು, ಆಹಾರಾಭ್ಯಾಸ, ಬ್ರೀಡಿಂಗ್ ಸೀಜನ್ ಇತ್ಯಾದಿಗಳ ಜ್ಞಾನ ಅತ್ಯವಶ್ಯ.

ಎಲ್ಲದರ ಹಿಂದೆ ಇದೆ ರೋಚಕ ಹಿನ್ನೆಲೆ
ನಿಸದು. ಭಾರತದ ಬಹುತೇಕ ರಾಜ್ಯಗಳಲ್ಲಿ ಅಡ್ಡಾಡುವಾಗ ಆ ಪ್ರದೇಶದ ವಿಶಿಷ್ಟ ಹಕ್ಕಿಗಳನ್ನು ಸೆರೆಹಿಡಿಯಲು ಪ್ರಯತ್ನಿಸಿದ್ದೇನೆ. ಕಾಡು, ಕಡಲು, ಹಿಮಾಲಯ… ಹೀಗೆ ಎಲ್ಲೆಲ್ಲೂ ಹೊಸ ಹೊಸ ಅನುಭವಗಳು ಸಾಕಷ್ಟಾಗಿವೆ. ಪ್ರತಿ ಹಕ್ಕಿಯ ಹುಡುಕಾಟದ ಹಿಂದೆ ರೋಚಕ ಹಿನ್ನೆಲೆ,ಅಲೆತ ಇದ್ದೇ ಇದೆ. ಉಸಿರುಗಟ್ಟಿದ ಅನುಭವಗಳಾದರೂ ಬಯಸಿದ ಹಕ್ಕಿ ಸಿಕ್ಕಿದಾಗ ಸಂಭ್ರಮವೂ ಮುಗಿಲು ಮುಟ್ಟಿರುತ್ತದೆ.

ಹಕ್ಕಿ ಫೋಟೋಗ್ರಾಫಿ ಒಂದು ಧ್ಯಾನ. ತನ್ಮಯತೆ, ತಾಳ್ಮೆ ಇದ್ದರೆ ನೀವು ಬಯಸಿದ ಚಿತ್ರ ತೆಗೆಯಲು ಸಾಧ್ಯವಾಗಬಹುದು. ಕ್ಯಾಮೆರಾ ಸಲಕರಣೆಗಳು ಎಷ್ಟು ಅಗತ್ಯವೋ ಅಷ್ಟೆ ಅವನ್ನು ಸಮರ್ಪಕವಾಗಿ ಸಾಂದರ್ಭಿಕವಾಗಿ ಬಳಸುವ ತಿಳಿವಳಿಕೆಯೂ ಅತ್ಯಗತ್ಯ.

andolana

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

2 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

3 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

3 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

4 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

4 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

4 hours ago