ಆಂದೋಲನ ಪುರವಣಿ

ವನಿತೆ ಮಮತೆ : ಹಕ್ಕಿಯ ಬೆನ್ನುಬಿದ್ದರೆ ದೂರ ದೂರವೆನಿಸದು

ಅಪರಿಮಿತ ಉತ್ಸಾಹಕ್ಕೆ ಲೀಲಾ ಅಪ್ಪಾಜಿ ಅವರನ್ನು ಆರಾಮವಾಗಿ ಉದಾಹರಿಸಬಹುದು. ನಿವೃತ್ತಿಯ ಜೀವನವನ್ನು ತಮ್ಮಿಷ್ಟದ ಫೋಟೋಗ್ರಫಿ ಪ್ರಪಂಚಕ್ಕೆ ಮೀಸಲಿಟ್ಟು ಕಾಡು, ಮೇಡು, ಬೆಟ್ಟ, ಬಯಲುಗಳನ್ನು ಹತ್ತಿಳಿದು ಹಕ್ಕಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಮಂಡ್ಯ ನೆಲದ ಸಾಧಕಿ ಲೀಲಾ ಅಪ್ಪಾಜಿ ಇಲ್ಲಿ ತಮ್ಮ ಬದುಕು ಮತ್ತು ಹಕ್ಕಿ ಛಾಯಾಗ್ರಹಣದ ಬಗ್ಗೆ ಸಂಕ್ಷಿಪ್ತವಾಗಿ ಹೇಳಿಕೊಂಡಿದ್ದಾರೆ.

 

ಮೂವತ್ತೆ ದು ವರ್ಷ ಕನ್ನಡ ಉಪನ್ಯಾಸಕಿಯಾಗಿ, ನಂತರ ಪ್ರಿನ್ಸಿಪಾಲ್ ಆಗಿ ಕೆಲಸ ಮಾಡಿ ನಿವೃತ್ತಿಯ ನಂತರ ಹಕ್ಕಿ ಛಾಯಾಗ್ರಹಣದ ಕ್ಷೇತ್ರಕ್ಕೆ ಬಂದೆ. ಕ್ಯಾಮೆರಾದ ಒಡನಾಟ ಆ ಮೊದಲೇ ಇದ್ದರೂ ಸೀಮಿತ ಉದ್ದೇಶಕ್ಕಾಗಿ ಬಳಕೆಯಾಗುತ್ತಿತ್ತು. ನನ್ನ ಸಂಶೋಧನಾ ಅಧ್ಯಯನ ಹಾಗೂ ಪ್ರಿನ್ಸಿಪಾಲ್ ಆದ ಬಳಿಕ ಎಲ್ಲ ಕಾರ್ಯಕ್ರಮಗಳಿಗೆ ಕ್ಯಾಮೆರಾ ಬಳಸುತ್ತಿದ್ದೆ. ಸಾಹಿತ್ಯದ ಪಾಠ ಮಾಡುವಾಗ ಅದರಲ್ಲೂ ತೇಜಸ್ವಿ ಕುರಿತು ಹೇಳುವಾಗ ಕ್ಯಾಮರಾ ಬಗ್ಗೆ ವಿಶೇಷ ಸೆಳೆತ ಇದ್ದೇ ಇತ್ತು. ಅದರಲ್ಲೂ ಅವರ ಛಾಯಾಗ್ರಹಣ ಹಾಗೂ ಪ್ರೋಂಗಗಳ ಬಗ್ಗೆ ಕುತೂಹಲ ಇತ್ತು. ಕೆಲಸದ ಜವಾಬ್ದಾರಿಯ ಒತ್ತಡ ಕಳೆದ ಬಳಿಕ ಅದುವರೆಗೂ ಹೆಚ್ಚು ಕೆಲಸ ಮಾಡದಿದ್ದ ಕ್ಷೇತ್ರದ ಆ್ಂಕೆುಯಾಗಿ ಹಕ್ಕಿ ಛಾಯಾಗ್ರಹಣ ಆರಿಸಿಕೊಂಡೆ. ಪಕ್ಷಿ ಜೊತೆಗೆ ಪರಿಸರವೂ ಎಷ್ಟು ಮಹತ್ವದ್ದೆಂಬುದೂ ಅರಿವಾಯಿತು. ಹಕ್ಕಿಗಳ ವೈವಿಧ್ಯತೆ ಬಣ್ಣ, ಕೊಕ್ಕು ಮತ್ತೊಂದು ಆಕರ್ಷಕ.

ಹಕ್ಕಿ ಕಲಿಸಿದ ಮೌನ
ಮಾತುಗಾರಿಕೆಯ ಉಪನ್ಯಾಸಕಿಯಾಗಿ, ಭಾಷಣಕಾರ್ತಿಯಾಗಿ ಕಾಲ ಕಳೆದಿದ್ದ ನನಗೆ ಹಕ್ಕಿ ಮೌನ ಕಲಿಸಿದೆ, ಏಕಾಗ್ರತೆ ತಂದಿದೆ, ಹೊಸ ಉತ್ಸಾಹ ತುಂಬಿದೆ. ದೈಹಿಕ ನೋವು ಆಯಾಸಗಳನ್ನು ಮರೆಸಿ ಉತ್ಸಾಹ ತುಂಬಿಸಿದೆ. ಅಲ್ಲಿಯ ತನಕ ನಾ ಕಾಣದೇ ಇದ್ದ ಹೊಸತೊಂದು ಲೋಕಕ್ಕೆ ಕರೆದೊಯ್ದಿದೆ. ಬೇರೆ ಎಲ್ಲ ಫೋಟೋಗ್ರಾಫಿಗಳಿಗಿಂತ ಹಕ್ಕಿ ಫೋಟೋಗ್ರಾಫಿಯಲ್ಲಿ ತೇಜಸ್ವಿ ಹೇಳಿದಂತೆ ಯಾವುದೂ ನಮ್ಮ ನಿಯಂತ್ರಣದಲ್ಲಿ ಇರುವುದಿಲ್ಲ. ಹಿಡಿಯಷ್ಟಿರುವ ಹಕ್ಕಿ ಅನಂತದಷ್ಟು ತಾಳ್ಮೆ ಕಲಿಸುತ್ತದೆ. ಹಕ್ಕಿಯ ಚಲನವಲನಗಳ ಅರಿವು, ಆಹಾರಾಭ್ಯಾಸ, ಬ್ರೀಡಿಂಗ್ ಸೀಜನ್ ಇತ್ಯಾದಿಗಳ ಜ್ಞಾನ ಅತ್ಯವಶ್ಯ.

ಎಲ್ಲದರ ಹಿಂದೆ ಇದೆ ರೋಚಕ ಹಿನ್ನೆಲೆ
ನಿಸದು. ಭಾರತದ ಬಹುತೇಕ ರಾಜ್ಯಗಳಲ್ಲಿ ಅಡ್ಡಾಡುವಾಗ ಆ ಪ್ರದೇಶದ ವಿಶಿಷ್ಟ ಹಕ್ಕಿಗಳನ್ನು ಸೆರೆಹಿಡಿಯಲು ಪ್ರಯತ್ನಿಸಿದ್ದೇನೆ. ಕಾಡು, ಕಡಲು, ಹಿಮಾಲಯ… ಹೀಗೆ ಎಲ್ಲೆಲ್ಲೂ ಹೊಸ ಹೊಸ ಅನುಭವಗಳು ಸಾಕಷ್ಟಾಗಿವೆ. ಪ್ರತಿ ಹಕ್ಕಿಯ ಹುಡುಕಾಟದ ಹಿಂದೆ ರೋಚಕ ಹಿನ್ನೆಲೆ,ಅಲೆತ ಇದ್ದೇ ಇದೆ. ಉಸಿರುಗಟ್ಟಿದ ಅನುಭವಗಳಾದರೂ ಬಯಸಿದ ಹಕ್ಕಿ ಸಿಕ್ಕಿದಾಗ ಸಂಭ್ರಮವೂ ಮುಗಿಲು ಮುಟ್ಟಿರುತ್ತದೆ.

ಹಕ್ಕಿ ಫೋಟೋಗ್ರಾಫಿ ಒಂದು ಧ್ಯಾನ. ತನ್ಮಯತೆ, ತಾಳ್ಮೆ ಇದ್ದರೆ ನೀವು ಬಯಸಿದ ಚಿತ್ರ ತೆಗೆಯಲು ಸಾಧ್ಯವಾಗಬಹುದು. ಕ್ಯಾಮೆರಾ ಸಲಕರಣೆಗಳು ಎಷ್ಟು ಅಗತ್ಯವೋ ಅಷ್ಟೆ ಅವನ್ನು ಸಮರ್ಪಕವಾಗಿ ಸಾಂದರ್ಭಿಕವಾಗಿ ಬಳಸುವ ತಿಳಿವಳಿಕೆಯೂ ಅತ್ಯಗತ್ಯ.

andolana

Recent Posts

ಚಾ.ನಗರ | ಗುಣಮಟ್ಟದ ಕೊರತೆ : ಹೋಟೆಲ್, ರೆಸ್ಟೋರೆಂಟ್ ಬಂದ್

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…

2 hours ago

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

3 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

9 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

9 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

9 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

9 hours ago