ಆಂದೋಲನ ಪುರವಣಿ

ವನಿತೆ ಮಮತೆ : ಹಕ್ಕಿಯ ಬೆನ್ನುಬಿದ್ದರೆ ದೂರ ದೂರವೆನಿಸದು

ಅಪರಿಮಿತ ಉತ್ಸಾಹಕ್ಕೆ ಲೀಲಾ ಅಪ್ಪಾಜಿ ಅವರನ್ನು ಆರಾಮವಾಗಿ ಉದಾಹರಿಸಬಹುದು. ನಿವೃತ್ತಿಯ ಜೀವನವನ್ನು ತಮ್ಮಿಷ್ಟದ ಫೋಟೋಗ್ರಫಿ ಪ್ರಪಂಚಕ್ಕೆ ಮೀಸಲಿಟ್ಟು ಕಾಡು, ಮೇಡು, ಬೆಟ್ಟ, ಬಯಲುಗಳನ್ನು ಹತ್ತಿಳಿದು ಹಕ್ಕಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಮಂಡ್ಯ ನೆಲದ ಸಾಧಕಿ ಲೀಲಾ ಅಪ್ಪಾಜಿ ಇಲ್ಲಿ ತಮ್ಮ ಬದುಕು ಮತ್ತು ಹಕ್ಕಿ ಛಾಯಾಗ್ರಹಣದ ಬಗ್ಗೆ ಸಂಕ್ಷಿಪ್ತವಾಗಿ ಹೇಳಿಕೊಂಡಿದ್ದಾರೆ.

 

ಮೂವತ್ತೆ ದು ವರ್ಷ ಕನ್ನಡ ಉಪನ್ಯಾಸಕಿಯಾಗಿ, ನಂತರ ಪ್ರಿನ್ಸಿಪಾಲ್ ಆಗಿ ಕೆಲಸ ಮಾಡಿ ನಿವೃತ್ತಿಯ ನಂತರ ಹಕ್ಕಿ ಛಾಯಾಗ್ರಹಣದ ಕ್ಷೇತ್ರಕ್ಕೆ ಬಂದೆ. ಕ್ಯಾಮೆರಾದ ಒಡನಾಟ ಆ ಮೊದಲೇ ಇದ್ದರೂ ಸೀಮಿತ ಉದ್ದೇಶಕ್ಕಾಗಿ ಬಳಕೆಯಾಗುತ್ತಿತ್ತು. ನನ್ನ ಸಂಶೋಧನಾ ಅಧ್ಯಯನ ಹಾಗೂ ಪ್ರಿನ್ಸಿಪಾಲ್ ಆದ ಬಳಿಕ ಎಲ್ಲ ಕಾರ್ಯಕ್ರಮಗಳಿಗೆ ಕ್ಯಾಮೆರಾ ಬಳಸುತ್ತಿದ್ದೆ. ಸಾಹಿತ್ಯದ ಪಾಠ ಮಾಡುವಾಗ ಅದರಲ್ಲೂ ತೇಜಸ್ವಿ ಕುರಿತು ಹೇಳುವಾಗ ಕ್ಯಾಮರಾ ಬಗ್ಗೆ ವಿಶೇಷ ಸೆಳೆತ ಇದ್ದೇ ಇತ್ತು. ಅದರಲ್ಲೂ ಅವರ ಛಾಯಾಗ್ರಹಣ ಹಾಗೂ ಪ್ರೋಂಗಗಳ ಬಗ್ಗೆ ಕುತೂಹಲ ಇತ್ತು. ಕೆಲಸದ ಜವಾಬ್ದಾರಿಯ ಒತ್ತಡ ಕಳೆದ ಬಳಿಕ ಅದುವರೆಗೂ ಹೆಚ್ಚು ಕೆಲಸ ಮಾಡದಿದ್ದ ಕ್ಷೇತ್ರದ ಆ್ಂಕೆುಯಾಗಿ ಹಕ್ಕಿ ಛಾಯಾಗ್ರಹಣ ಆರಿಸಿಕೊಂಡೆ. ಪಕ್ಷಿ ಜೊತೆಗೆ ಪರಿಸರವೂ ಎಷ್ಟು ಮಹತ್ವದ್ದೆಂಬುದೂ ಅರಿವಾಯಿತು. ಹಕ್ಕಿಗಳ ವೈವಿಧ್ಯತೆ ಬಣ್ಣ, ಕೊಕ್ಕು ಮತ್ತೊಂದು ಆಕರ್ಷಕ.

ಹಕ್ಕಿ ಕಲಿಸಿದ ಮೌನ
ಮಾತುಗಾರಿಕೆಯ ಉಪನ್ಯಾಸಕಿಯಾಗಿ, ಭಾಷಣಕಾರ್ತಿಯಾಗಿ ಕಾಲ ಕಳೆದಿದ್ದ ನನಗೆ ಹಕ್ಕಿ ಮೌನ ಕಲಿಸಿದೆ, ಏಕಾಗ್ರತೆ ತಂದಿದೆ, ಹೊಸ ಉತ್ಸಾಹ ತುಂಬಿದೆ. ದೈಹಿಕ ನೋವು ಆಯಾಸಗಳನ್ನು ಮರೆಸಿ ಉತ್ಸಾಹ ತುಂಬಿಸಿದೆ. ಅಲ್ಲಿಯ ತನಕ ನಾ ಕಾಣದೇ ಇದ್ದ ಹೊಸತೊಂದು ಲೋಕಕ್ಕೆ ಕರೆದೊಯ್ದಿದೆ. ಬೇರೆ ಎಲ್ಲ ಫೋಟೋಗ್ರಾಫಿಗಳಿಗಿಂತ ಹಕ್ಕಿ ಫೋಟೋಗ್ರಾಫಿಯಲ್ಲಿ ತೇಜಸ್ವಿ ಹೇಳಿದಂತೆ ಯಾವುದೂ ನಮ್ಮ ನಿಯಂತ್ರಣದಲ್ಲಿ ಇರುವುದಿಲ್ಲ. ಹಿಡಿಯಷ್ಟಿರುವ ಹಕ್ಕಿ ಅನಂತದಷ್ಟು ತಾಳ್ಮೆ ಕಲಿಸುತ್ತದೆ. ಹಕ್ಕಿಯ ಚಲನವಲನಗಳ ಅರಿವು, ಆಹಾರಾಭ್ಯಾಸ, ಬ್ರೀಡಿಂಗ್ ಸೀಜನ್ ಇತ್ಯಾದಿಗಳ ಜ್ಞಾನ ಅತ್ಯವಶ್ಯ.

ಎಲ್ಲದರ ಹಿಂದೆ ಇದೆ ರೋಚಕ ಹಿನ್ನೆಲೆ
ನಿಸದು. ಭಾರತದ ಬಹುತೇಕ ರಾಜ್ಯಗಳಲ್ಲಿ ಅಡ್ಡಾಡುವಾಗ ಆ ಪ್ರದೇಶದ ವಿಶಿಷ್ಟ ಹಕ್ಕಿಗಳನ್ನು ಸೆರೆಹಿಡಿಯಲು ಪ್ರಯತ್ನಿಸಿದ್ದೇನೆ. ಕಾಡು, ಕಡಲು, ಹಿಮಾಲಯ… ಹೀಗೆ ಎಲ್ಲೆಲ್ಲೂ ಹೊಸ ಹೊಸ ಅನುಭವಗಳು ಸಾಕಷ್ಟಾಗಿವೆ. ಪ್ರತಿ ಹಕ್ಕಿಯ ಹುಡುಕಾಟದ ಹಿಂದೆ ರೋಚಕ ಹಿನ್ನೆಲೆ,ಅಲೆತ ಇದ್ದೇ ಇದೆ. ಉಸಿರುಗಟ್ಟಿದ ಅನುಭವಗಳಾದರೂ ಬಯಸಿದ ಹಕ್ಕಿ ಸಿಕ್ಕಿದಾಗ ಸಂಭ್ರಮವೂ ಮುಗಿಲು ಮುಟ್ಟಿರುತ್ತದೆ.

ಹಕ್ಕಿ ಫೋಟೋಗ್ರಾಫಿ ಒಂದು ಧ್ಯಾನ. ತನ್ಮಯತೆ, ತಾಳ್ಮೆ ಇದ್ದರೆ ನೀವು ಬಯಸಿದ ಚಿತ್ರ ತೆಗೆಯಲು ಸಾಧ್ಯವಾಗಬಹುದು. ಕ್ಯಾಮೆರಾ ಸಲಕರಣೆಗಳು ಎಷ್ಟು ಅಗತ್ಯವೋ ಅಷ್ಟೆ ಅವನ್ನು ಸಮರ್ಪಕವಾಗಿ ಸಾಂದರ್ಭಿಕವಾಗಿ ಬಳಸುವ ತಿಳಿವಳಿಕೆಯೂ ಅತ್ಯಗತ್ಯ.

andolana

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

5 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

5 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

5 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

7 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

7 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

10 hours ago