ಆಂದೋಲನ ಪುರವಣಿ

‘ಇದು ನಿಮ್ಮ ಅನುಭವವಾ?’ ಎಂಬ ಪ್ರಶ್ನೆ!

ಅರ್ಪಣ ಎಚ್.ಎಸ್.

ಬಹುತೇಕ ಎಲ್ಲಾ ಮಕ್ಕಳಂತೆ ನನ್ನ ಮಗನಿಗೂ ಸಣ್ಣವನಿದ್ದಾಗ ರಾತ್ರಿ ಮಲಗುವ ಮುನ್ನ ಒಂದು ಕತೆ ಹೇಳಲೇಬೇಕಿತ್ತು. ಅತ್ಯಂತ ಬೋರಿಂಗ್ ಎನಿಸುವ ಈ ದಿನಚರಿಯನ್ನು, ಬೇರೆ ದಾರಿಯಿಲ್ಲದೆ ಒಂದೆರಡು ವರ್ಷ ನಡೆಸಿಕೊಂಡು ಬಂದರೂ, ಅವನು ಕೊಂಚ ದೊಡ್ಡವನಾದ ಕೂಡಲೇ ದಿನಕ್ಕೊಂದು ಹೊಸ ಕತೆ ಪೂರೈಸಲಾಗದೆ ನಂಗೆ ಕತೆ ಗೊತ್ತಿಲ ್ನುವ ಮಂತ್ರ ಪಠಿಸತೊಡಗಿದೆ. ‘‘ನೀನೇ ಕತೆ ಬರೀತೀಯಲ್ಲ ಹೇಗೂ, ಅದೇ ಹೇಳು’’ ಅನ್ನುವ ಬೇಡಿಕೆ ಇಡತೊಡಗಿದ. ‘‘ನಾನು ಬರೆೋಂ ಕತೆ ನಿಂಗೆ ಅರ್ಥ ಆಗಲ್ಲ’’ ಅನ್ನತೊಡಗಿದೆ. ದಿನಾ ಇದೇ ಸಬೂಬು ಕೇಳಿ ರೋಸಿ ಹೋದ ಅವನು ಒಂದು ರಾತ್ರಿ ‘‘ಅಷ್ಟೊಂದು ಕತೆ ಬರೀತೀಯಾ, ನನ್ನ ಕತೆಗೆ ಬಹುಮಾನ ಬಂತು ಅಂತ ಬೇರೇ ಹೇಳ್ತೀಯ. ಅದರಲ್ಲಿ ಒಂದೂ ನಂಗೆ ಹೇಳೋಕೆ ಆಗಲ್ಲ ಅಂದ ಮೇಲೆ, ನೀನು ಏನು ಕತೆ ಬರೆದು ಏನು ಪ್ರೋಂಜನ ಹೋಗು’’ ಅಂದ.

ಅವತ್ತು ರಾತ್ರಿ ಅವನ ಮಾತು ಬಹಳ ಕಾಡಿ ಮರುದಿನ ಮಕ್ಕಳ ಕತೆ ಬರಿೋಂದಕ್ಕೆ ಯತ್ನಿಸಿ, ಸಾಧ್ಯವಾಗದೆ ಸುಮ್ಮನಾಗಿದ್ದೆ. ಮುಂದೆ ದೊಡ್ಡವನಾದ ಮೇಲೆ ನನ್ನ ಕತೆ ಓದುತ್ತಾನೆ ಅಂದುಕೊಂಡು ಸಮಾಧಾನ ಮಾಡಿಕೊಳ್ಳಲು ಯತ್ನಿಸಿದೆ. ಆದರೆ, ನನ್ನ ಮಕ್ಕಳು ಮುಂದೆ ನನ್ನ ಕತೆಗಳನ್ನು ಓದುತ್ತಾರೆಂಬುದು ಆಗ ನನಗೆ ಸಮಾಧಾನ ಕೊಡುವ ಬದಲು ಹೆಚ್ಚು ತಳಮಳವನ್ನೇ ಉಂಟುಮಾಡಿತ್ತು. ಸುಮಾರು ಎಂಟು ವರ್ಷಗಳ ಹಿಂದೆ ನಾನು ಕತೆ ಬರೆಯಲು ಮತ್ತು ಅದು ಪ್ರಕಟವಾಗಲು ಶುರುವಾದಾಗ ನನಗೆ ಖುಷಿಯಾಗುವುದರ ಜೊತೆ ಜೊತೆಗೆ, ಕತೆಗಳನ್ನು ಜನ ಓದುತ್ತಾರಲ್ಲ ಎಂಬ ಆತಂಕ ಕಾಡುತ್ತಿತ್ತು. ಎಲ್ಲಕ್ಕಿಂತ ಹೆಚ್ಚಾಗಿ ನನ್ನ ಅಪ್ಪ, ಅಮ್ಮ ನನ್ನ ಕತೆಗಳನ್ನು ಓದುತ್ತಾರೆ ಎಂಬುದು ದೊಡ್ಡ ಹಿಂಜರಿಕೆಗೆ ಕಾರಣವಾಗಿತ್ತು. ಈ ಆತಂಕ ಕೊಂಚಮಟ್ಟಿಗೆ ನನ್ನ ಕತೆಗಳನ್ನು ಓದುಗರು ಹೇಗೆ ಸ್ವೀಕರಿಸುತ್ತಾರೆ ಎಂಬುದಕ್ಕೆ ಸಂಬಂಧಪಟ್ಟಿದ್ದಿರಬಹುದಾದರೋ, ಬಹುಮಟ್ಟಿಗೆ ನನ್ನ ಬಗ್ಗೆ ಏನೂ ಗೊತ್ತಿಲ್ಲದ ಓದುಗರು ನನ್ನ ಕತೆಯ ಜೊತೆಗೆ ನನ್ನನ್ನು ಯಾವ ರೀತಿ ಜೋಡಿಸಬಹುದು, ನನ್ನನ್ನು ಹೇಗೆ ‘ಜಡ್ಜ್’ ಮಾಡಬಹುದು ಎಂಬುದಕ್ಕೆ ಸಂಬಂಧಪಟ್ಟದ್ದಾಗಿತ್ತು. ಹಾಗೆ, ನೋಡಿದರೆ ನನ್ನ ಕತೆಗಳಾವುವೂ ತೀರಾ ವೈಯಕ್ತಿಕವಲ್ಲ. ಆದರೂ, ಮೊದ ಮೊದಲಿಗೆ ಕಾಡುತ್ತಿದ್ದ ಈ ತಳಮಳ ನಾನು ಕತೆಗಳನ್ನು ಬರೆಯುವ ರೀತಿಯನ್ನೂ ಮತ್ತು ನನ್ನ ವಿಷಯದ ಆ್ಂಕೆುಯನ್ನು ಪ್ರಭಾವಿಸುತ್ತಿದ್ದವು ಎಂಬುದು ಸುಳ್ಳಲ್ಲ.

ಇದಕ್ಕೆ ಮುಖ್ಯ ಕಾರಣ ಕತೆಗಾರ್ತಿಯಾಗುವುದಕ್ಕೂ ಮೊದಲು ಓದುಗಳಾಗಿದ್ದ ನನಗೆ, ಒಂದು ಕೃತಿಯಲ್ಲಿ ಲೇಖಕರನ್ನು ಹುಡುಕುವ ಓದುಗರ ಅತೀ ಸಹಜವಾದ ಮತ್ತು ಸಾಮಾನ್ಯವಾದ ಪ್ರಕ್ರಿೆುಂಯ ಅರಿವಿರುವುದು. ಎಲ್ಲಾ ಕತೆ, ಕವಿತೆ, ಕೃತಿಗಳೂ ಯಾವುದೋ ಒಂದು ರೀತಿಯಲ್ಲಿ ಬರಹಗಾರನ ಬದುಕು, ಚಿಂತನೆ, ಭಾವನೆಗಳಿಂದ ಪ್ರಭಾವಿತವಾಗಿರುತ್ತದೆ ಎಂಬುದು ನಿಜವೇ. ಕೃತಿಯಲ್ಲಿ ಒಂದು ಪಾತ್ರವಾಗಿೆುೀಂ, ಘಟನೆಯಾಗಿೋಂ, ಮಾತಾಗಿೋಂ, ಭಾವವಾಗಿೋಂ ಅವನು ಅಥವಾ ಅವಳು ನುಸುಳಿರುತ್ತಾರೆ. ಆದರೆ, ಎಲ್ಲ ಕೃತಿಗಳನ್ನೂ ಅದು ಬರೆದವರ ಅತ್ಮ ಚರಿತ್ರೆೆುೀಂನೋ ಎಂಬಂತೆ ನೋಡುವ ಮಂದಿಯೂ ಸಾಕಷ್ಟಿದ್ದಾರೆ. ತಮಾಷೆೆುಂಂದರೆ, ನನ್ನ ಕತೆ, ಕವನಗಳಲ್ಲಿ ‘‘ನಾನು’’ ತುಂಬಾ ಕಡಿಮೆ ಇರುತ್ತೇನೆ ಎಂಬುದು ಅರಿವಾದಾಗ, ಮೋಸ ಹೋದವರಂತೆ ಸಿಟ್ಟುಗೊಂಡ ಕೆಲ ಓದುಗರನ್ನೂ ನಾನು ನೋಡಿದ್ದೇನೆ. ‘ನಮ್ಮ ಬರಹಗಳಲ್ಲಿರುವುದು ನಮ್ಮ ಬದುಕೇ’ ಎಂದು ಪರಿಭಾವಿಸುವ ಇಂತಹ ಓದುಗರಿಂದ ನಾನು ಗಮನಿಸಿದಂತೆ ಹೆಚ್ಚು ನಷ್ಟವಾಗಿರುವುದು ಮಹಿಳಾ ಸಾಹಿತಿಗಳಿಗೆ. ಇಂತಹ ಕಾರಣಗಳಿಂದಾಗಿೆುೀಂ ಯಾವುದೇ ಭಿಡೆ ಇಲ್ಲದೆ ಬರೆಯುವುದು ಹಲವರಿಗೆ ಸಾಧ್ಯವಾಗುವುದೇ ಇಲ್ಲ.

ನಾನೇನೋ ಈಗ ಈ ಹಂತ ದಾಟಿದ್ದರೂ ‘‘ಇದು ನಿಮ್ಮ ಅನುಭವವಾ?’’ ಎಂಬ ಪ್ರಶ್ನೆಗೆ ಹೆದರಿ, ಅದೆಷ್ಟು ಕತೆಗಳು, ಕವಿತೆಗಳು ಹುಟ್ಟದೇ ಸತ್ತು ಹೋಗಿವೆೋಂ ಎಂದು ಒಮ್ಮೊಮ್ಮೆ ೋಂಚಿಸುತ್ತಿರುತ್ತೇನೆ.

 

andolana

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

11 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

11 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

13 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

13 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

13 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

21 hours ago