ಆಂದೋಲನ ಪುರವಣಿ

ಬರಹ-ಬದುಕು : ಬರೆದುದನು ಯಾರಿಗೂ ತೋರಿಸುವ ಧೈರ್ಯ ಮಾತ್ರ ಇರಲಿಲ್ಲ…

 

ಫಾತಿಮಾ ರಲಿಯಾ
imraliya101@gmail.com

ನಾನು ಓದುತ್ತಿದ್ದ ನಮ್ಮೂರಿನ ಸರ್ಕಾರಿ ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯ ಕ್ರಮಗಳಲ್ಲಿ ಮಕ್ಕಳು ಭಾಗವಹಿಸುವಂತೆ ಆಗಲೇ ವಿಶಿಷ್ಟ ಆಸ್ಥೆ ವಹಿಸಲಾಗುತ್ತಿತ್ತು. ಹಾಗೆಂದೇ ನಮ್ಮಲ್ಲಿ ಕೆಲವರನ್ನು ಆಯ್ಕೆ ಮಾಡಿ ನಮ್ಮ ಮೇಷ್ಟ್ರು ಅಂತರ್ ಶಾಲೆ ನಾಟಕ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದರು. ನನಗೂ ಒಂದು ಪಾತ್ರ ಕೊಟ್ಟಿದ್ದರು, ತುಂಬಾ ಒಳ್ಳೆಯ ಪಾತ್ರವೇ. ಆಡಿಷನ್ ತರ ಮಾಡಿ ಪಾತ್ರಧಾರಿಗಳನ್ನು ಆಯ್ಕೆ ಮಾಡಿದ್ದರಿಂದ ತಲೆಯಲ್ಲಿ ನಾವೇನೋ ದೊಡ್ಡ ಸಾಧನೆ ಮಾಡುತ್ತಿದ್ದೇವೆ ಎನ್ನುವ ಭಾವ.

ಹೋದಲ್ಲಿ ಬಂದಲೆಲ್ಲಾ ನಾಟಕದ್ದೇ ಧ್ಯಾನ. ಜೊತೆಗೆ ಸ್ಪರ್ಧೆಗೆ ಆಯ್ಕೆಯಾಗದವರ ಎದೆಯಲ್ಲಿ ಒಂದು ಸಣ್ಣ ಈರ್ಷ್ಯೆಯ ಭಾವ. ಆ ಟೀಚರ್‌ಗೆ ಅವರಿಷ್ಟ, ಈ ಟೀಚರ್‌ಗೆ ಇವರಿಷ್ಟ ಹಾಗಾಗಿಯೇ ಆಯ್ಕೆಯಾಗಿದ್ದಾರೆ ಎನ್ನುವ ಮಾತುಗಳೂ ನಮ್ಮ ನಡುವಿಂದಲೇ ಕೇಳಿ ಬರುತ್ತಿತ್ತು. ಆದ್ರೆ ಹೊರಗಡೆ ಮಾತ್ರ ಇದ್ಯಾವುದೂ ಗೊತ್ತೇ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದೆವು.

ಆದರೆ ನನ್ನ ಸಂಭ್ರಮ, ಸಣ್ಣ ಅಹಂ ಮುರಿಯಲು ಮನೆಯವರ ಒಂದು ನಿರಾಕರಣೆ ಸಾಕಾಯ್ತು. ಸ್ಪರ್ಧೆಗೆ ಅಂತ ಹೋದವರು ಅಲ್ಲೇ ಒಂದು ದಿನ ತಂಗಬೇಕು ಎನ್ನುವ ಷರತ್ತಿಗೆ ನನ್ನ ಮನೆುಂವರು ಒಪ್ಪಲೇ ಇಲ್ಲ. ‘‘ಬೇಕಿದ್ದರೆ ಸ್ಪರ್ಧೆಗೆ ಹೋಗು, ಭಾಗವಹಿಸು, ಸಂಜೆಯ ಹೊತ್ತಿಗೆ ವಾಪಾಸು ಬಾ. ಮರುದಿನ ಬೆಳಿಗ್ಗೆ ನಾವೇ ನಿನ್ನ ಕರೆದುಕೊಂಡು ಹೋಗಿ ಸ್ಪರ್ಧೆ ನಡೆಯುವಲ್ಲಿಗೆ ಬಿಡುತ್ತೇವೆ’’ ಎಂದು ಬಿಟ್ಟರು ಮಾವ.

ನಾನು ವಾದಕ್ಕಿಳಿದೆ, ಜಗಳ ವಾಡಿದೆ, ಉಪವಾಸ ಸತ್ಯಾಗ್ರಹ ಮಾಡುತ್ತೇನೆಂದು ಬೆದರಿಕೆ ಹಾಕಿದೆ, ಮನೆಯೊಳಗೆ ಬರುವುದಿಲ್ಲ ಎಂದು ಗಂಟೆಗಟ್ಟಲೆ ಮನೆಯ ಗೇಟಿನ ಹೊರಗೆ ನಿಂತೆ… ಊಹೂಂ, ಇವ್ಯಾವುವೂ ಅವರ ನಿರ್ಧಾರವನ್ನು ಬದಲಿಸಲಿಲ್ಲ. ಮಾವ ‘‘ಸಂಜೆ ಮರಳಿ ಬಾ, ಮರುದಿನ ಬೆಳಿಗ್ಗೆ ಮತ್ತೆ ಹೋಗುವಿಯಂತೆ‘ ಎಂದು ಪದೇ ಪದೇ ಹೇಳಿದರು, ನನ್ನನ್ನು ಸಮಾಧಾನಪಡಿಸಲು ಯತ್ನಿಸಿದರು. ‘‘ನಾನೇ ನಿನ್ನ ಕರೆದುಕೊಂಡು ಹೋಗಿ ನಿಗದಿತ ಸಮಯಕ್ಕಿಂತ ಅರ್ಧಗಂಟೆ ಮೊದಲೇ ಬಿಡುತ್ತೇನೆ’’ ಎಂದು ಭರವಸೆ ಕೊಟ್ಟರು.
ಆದರೆ ಅಂತಹ ಯಾವುದೇ ‘ಷರತ್ತು ಬದ್ಧ ಭರವಸೆ’ಗಳನ್ನು ಒಪ್ಪಲು ನಾನು ತಯಾರಿರಲಿಲ್ಲ. ಫ್ರೆಂಡ್ಸ್ ಜೊತೆ ರಾತ್ರಿ ತಂಗುವ ಅಪರೂಪದ ಅವಕಾಶವನ್ನು ಯಾವ ಕಾರಣಕ್ಕೂ ತಪ್ಪಿಸಿಕೊಳ್ಳಲು ನನಗೆ ಮನಸ್ಸಿರಲಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ನಾನೊಬ್ಬಳೇ ಸಂಜೆ ವಾಪಾಸು ಬರುವುದು, ಮರುದಿನ ಮತ್ತೆ ಅವರೆಲ್ಲರನ್ನು ಸೇರಿಕೊಳ್ಳುವುದು ನನಗೆ ಅವಮಾನಕರ ಅನ್ನಿಸುತ್ತಿತ್ತು. ನನ್ನ ಯಾವ ಪ್ರತಿಭಟನೆಗಳೂ ಫಲ ಕಾಣದಿದ್ದಾಗ ಸ್ಪರ್ಧೆಯಲ್ಲಿ ಭಾಗವಹಿಸುವುದೇ ಬೇಡ ಎಂದು ತೀರ್ಮಾನಿಸಿದೆ.

ಆದರೆ, ಅದರ ನಿಜವಾದ ಸಂಕಟ ಏನೆಂದು ಅರಿವಿಗೆ ಬಂದದ್ದು ನನ್ನ ಸಹಪಾಠಿಗಳೆಲ್ಲಾ ಸ್ಪರ್ಧೆಗೆಂದು ಹೊರಟು ನಿಂತಾಗ. ಸ್ಪರ್ಧಿಗಳ ಆಯ್ಕೆ, ಆಮೇಲಿನ ಅಭ್ಯಾಸ, ಮನೆಯಲ್ಲಿ ಒಪ್ಪಿಗೆ ಸಿಗದೇ ಇದ್ದದ್ದು ಎಲ್ಲಾ ಸೇರಿ ಆವತ್ತು ನನ್ನೊಳಗೆ ಒಂದು ಅಸಹಾಯಕ ಭಾವವನ್ನು ಸೃಷ್ಟಿಸಿತ್ತಾ ಗೊತ್ತಿಲ್ಲ, ಪ್ರತಿಭಟನಾತ್ಮಕವಾಗಿ ‘ನಾನೊಂದು ಬೋನ್ಸಾಯಿ ಗಿಡ’ ಎಂಬ ಕವಿತೆ ಬರೆದೆ. ನಾನು ಬರೆದ ಮೊದಲ ಸೃಜನಶೀಲ ಬರವಣಿಗೆಯದು. ಅದಕ್ಕಿಂತ ಮೊದಲು ‘ಪರಿಸರ ಸಂರಕ್ಷಣೆ’ ಎನ್ನುವ ವಿಷಯದ ಮೇಲೆ ಪ್ರಬಂಧ ಬರೆದಿದ್ದರೂ ಅದು ಸೃಜನಶೀಲ ಬರವಣಿಗೆಯಾಗಿರಲಿಲ್ಲ. ಈ ಘಟನೆ ನಡೆದ ಮರುವರ್ಷವೇ ‘ಗೈಡ್ಸ್’ ದಳದ ಭಾಗವಾಗಿ ರ‍್ಯಾಲಿಗೆ ಹೋದವಳು ಮೂರು ದಿನಗಳ ಕಾಲ ಬೇರೆ ಶಾಲೆಯಲ್ಲಿ ತಂಗಬೇಕಾಗಿ ಬಂದಿತ್ತು. ಆಗ ನಮ್ಮನೆಯಲ್ಲಿ ಯಾವ ವಿರೋಧವೂ ಬರಲಿಲ್ಲ. ಆದರೆ ಅಷ್ಟು ಹೊತ್ತಿಗಾಗುವಾಗಲೇ ಬರವಣಿಗೆಯ ರುಚಿ ನನಗೆ ಹತ್ತಿತ್ತು. ಡೈರಿ ಬರೆಯಲು, ಸಣ್ಣ ಪುಟ್ಟ ಕವಿತೆ ಬರೆಯಲು ಪ್ರಾರಂಭಿಸಿದ್ದೆ. ಆದರೆ ಅದನ್ನು ಯಾರಿಗೂ ತೋರಿಸುವ ಧೈರ್ಯ ಮಾತ್ರ ಇರಲಿಲ್ಲ.

andolana

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

3 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

3 hours ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

3 hours ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

3 hours ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

3 hours ago