ಆಂದೋಲನ ಪುರವಣಿ

ಹೊಸ ಪುಸ್ತಕ: ಕಾಡು ಹುಡುಗನ ಹಾಡು ಪಾಡು; ಅನುಭವ ಕಥನ

ಸ್ವಾಮಿ ಪೊನ್ನಾಚಿ
ಕನ್ನಡದ ಪ್ರತಿಭಾವಂತ ಕಥೆಗಾರ ಸ್ವಾಮಿ ಪೊನ್ನಾಚಿ ಯವರು ಬಹುತೇಕವಾಗಿ ‘ಆಂದೋಲನ’ಕ್ಕೆ ಬರೆದ ಪತ್ರಿಕಾ ಬರಹಗಳ ಸಂಕಲನ ‘ಕಾಡು ಹುಡುಗನ ಹಾಡು ಪಾಡು’ ಇಂದು (ಮಾ.3) ಬೆಳಿಗ್ಗೆ ಚಾಮರಾಜ ನಗರದ ಡಾ.ರಾಜ್‌ಕುಮಾರ್ ರಂಗಮಂದಿರದಲ್ಲಿ ಬೆಳಿಗ್ಗೆ ಒಂಬತ್ತೂವರೆಗೆ ಬಿಡುಗಡೆಯಾಗಲಿದೆ.

ಈ ಸಂಕಲನದ ಬರಹಗಳು ಸಣ್ಣಕತೆ, ಲಲಿತ ಪ್ರಬಂಧಗಳ ಸೃಜನಶೀಲತೆ, ಸ್ವಾರಸ್ಯ, ರಂಜಕತೆ, ಪತ್ರಿಕಾ ಬರಹಗಳ ಖಚಿತತೆ, ಸಂಕ್ಷಿಪ್ತತೆ, ಸಂಶೋಧಕನ ಅಧ್ಯಯನಶೀಲತೆ ಸಾಮಾಜಿಕ ಕಳಕಳಿ ಈ ಎಲ್ಲವನ್ನೂ ಒಳಗೊಂಡಿವೆ. ಇಲ್ಲಿಯ ಬರಹಗಳು ರಂಜನೀಯತೆಯ ಆಚೆಗೂ ತಮ್ಮ ಕೈ ಚಾಚುತ್ತವೆ.

ಸ್ವಾಮಿಯವರು ಬರಹಗಳಲ್ಲಿ ಪ್ರಕರಣಗಳ ಮತ್ತೊಂದು ಮಾನವೀಯ ಮುಖ ಬಿಚ್ಚಿಡುತ್ತಾರೆ. ಈ ಸಂಕಲನದಲ್ಲಿ ಹುತಾತ್ಮರಾದಶಕೀಲ್ ಅಹಮದ್ ಅವರ ಬಗ್ಗೆ ಬರಹ ಇದೆ. ಶಕೀಲ್ ಅಹಮದ್ ಅವರ ಕೆಲಸ ಸಾಧನೆ ತ್ಯಾಗ ಎಲ್ಲ ದಾಖಲೆಗಳಲ್ಲಿ ಸಿಕ್ಕೀತು. ಆದರೆ ಸ್ವಾಮಿ, ಶಕೀಲ್ ಅಹಮದ್ ಅವರ ವ್ಯಕ್ತಿಚಿತ್ರ ಬಿಡಿಸಿರುವ ಪರಿಯೇ ಬೇರೆ. ಒಬ್ಬಕತೆಗಾರ ಮಾತ್ರ ಹೀಗೆ ಬಿಡಿಸಬಲ್ಲ. ಪೊನ್ನಾಚಿ ಚೆಂಗಡಿ ಸುತ್ತಮುತ್ತಲ ಪ್ರದೇಶಕ್ಕೆ ತಮ್ಮ ಯೌವನದ ದಿವಸ
ಗಳಲ್ಲಿ ಕನಸು ಹೊತ್ತು ಬಂದ ಸಾಕೇತ್ ರಾಜನ್ ಅವರ ವಿವರ ಇದೆ. ಇವು ಎಪ್ಪತ್ತರ ದಶಕದಲ್ಲಿನ ಮಹಾ ರಾಜ ಕಾಲೇಜು, ಗಂಗೋತ್ರಿಯ ಸಮಾಜವಾದಿ, ಮಾರ್ಕ್ಸಿಸ್ಟ್ ಹೋರಾಟಗಳ ಜಲಕ್ ನೀಡುತ್ತವೆ.

ಜೊತೆಗೆ ಸೋಲಿಗರ ಬದುಕಿನಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಬದಲಾವಣೆಗಳು ತಂದ ಸ್ಥಿತ್ಯಂತರ ಗಳು, ಅವರನ್ನು ಎಲ್ಲಿಯೂ ಸಲ್ಲದ ಮನುಷ್ಯರನ್ನಾಗಿ ಸಿದ ಬಗೆ ವಿವರಗಳು ಇವೆ. ಈ ಲೇಖನಗಳ ಸಂಕಲನ ಕನ್ನಡದ ಒಂದು ವಿಶಿಷ್ಟವಾದ ಮತ್ತು ಅನನ್ಯವಾದ ಲೇಖನಗಳ ಸಂಕಲನವಾಗುವುದರಲ್ಲಿ ಸಂಶಯ ಇಲ್ಲ.

(ಚಾ.ನಗರದ ಕೆ. ವೆಂಕಟರಾಜು ಅವರ ಮುನ್ನುಡಿಯ ಕೆಲವು ಸಾಲುಗಳು)

andolana

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

3 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

3 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

3 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

3 hours ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

3 hours ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

3 hours ago