ಆಂದೋಲನ ಪುರವಣಿ

ಹೊಸ ಪುಸ್ತಕ: ಕಾಡು ಹುಡುಗನ ಹಾಡು ಪಾಡು; ಅನುಭವ ಕಥನ

ಸ್ವಾಮಿ ಪೊನ್ನಾಚಿ
ಕನ್ನಡದ ಪ್ರತಿಭಾವಂತ ಕಥೆಗಾರ ಸ್ವಾಮಿ ಪೊನ್ನಾಚಿ ಯವರು ಬಹುತೇಕವಾಗಿ ‘ಆಂದೋಲನ’ಕ್ಕೆ ಬರೆದ ಪತ್ರಿಕಾ ಬರಹಗಳ ಸಂಕಲನ ‘ಕಾಡು ಹುಡುಗನ ಹಾಡು ಪಾಡು’ ಇಂದು (ಮಾ.3) ಬೆಳಿಗ್ಗೆ ಚಾಮರಾಜ ನಗರದ ಡಾ.ರಾಜ್‌ಕುಮಾರ್ ರಂಗಮಂದಿರದಲ್ಲಿ ಬೆಳಿಗ್ಗೆ ಒಂಬತ್ತೂವರೆಗೆ ಬಿಡುಗಡೆಯಾಗಲಿದೆ.

ಈ ಸಂಕಲನದ ಬರಹಗಳು ಸಣ್ಣಕತೆ, ಲಲಿತ ಪ್ರಬಂಧಗಳ ಸೃಜನಶೀಲತೆ, ಸ್ವಾರಸ್ಯ, ರಂಜಕತೆ, ಪತ್ರಿಕಾ ಬರಹಗಳ ಖಚಿತತೆ, ಸಂಕ್ಷಿಪ್ತತೆ, ಸಂಶೋಧಕನ ಅಧ್ಯಯನಶೀಲತೆ ಸಾಮಾಜಿಕ ಕಳಕಳಿ ಈ ಎಲ್ಲವನ್ನೂ ಒಳಗೊಂಡಿವೆ. ಇಲ್ಲಿಯ ಬರಹಗಳು ರಂಜನೀಯತೆಯ ಆಚೆಗೂ ತಮ್ಮ ಕೈ ಚಾಚುತ್ತವೆ.

ಸ್ವಾಮಿಯವರು ಬರಹಗಳಲ್ಲಿ ಪ್ರಕರಣಗಳ ಮತ್ತೊಂದು ಮಾನವೀಯ ಮುಖ ಬಿಚ್ಚಿಡುತ್ತಾರೆ. ಈ ಸಂಕಲನದಲ್ಲಿ ಹುತಾತ್ಮರಾದಶಕೀಲ್ ಅಹಮದ್ ಅವರ ಬಗ್ಗೆ ಬರಹ ಇದೆ. ಶಕೀಲ್ ಅಹಮದ್ ಅವರ ಕೆಲಸ ಸಾಧನೆ ತ್ಯಾಗ ಎಲ್ಲ ದಾಖಲೆಗಳಲ್ಲಿ ಸಿಕ್ಕೀತು. ಆದರೆ ಸ್ವಾಮಿ, ಶಕೀಲ್ ಅಹಮದ್ ಅವರ ವ್ಯಕ್ತಿಚಿತ್ರ ಬಿಡಿಸಿರುವ ಪರಿಯೇ ಬೇರೆ. ಒಬ್ಬಕತೆಗಾರ ಮಾತ್ರ ಹೀಗೆ ಬಿಡಿಸಬಲ್ಲ. ಪೊನ್ನಾಚಿ ಚೆಂಗಡಿ ಸುತ್ತಮುತ್ತಲ ಪ್ರದೇಶಕ್ಕೆ ತಮ್ಮ ಯೌವನದ ದಿವಸ
ಗಳಲ್ಲಿ ಕನಸು ಹೊತ್ತು ಬಂದ ಸಾಕೇತ್ ರಾಜನ್ ಅವರ ವಿವರ ಇದೆ. ಇವು ಎಪ್ಪತ್ತರ ದಶಕದಲ್ಲಿನ ಮಹಾ ರಾಜ ಕಾಲೇಜು, ಗಂಗೋತ್ರಿಯ ಸಮಾಜವಾದಿ, ಮಾರ್ಕ್ಸಿಸ್ಟ್ ಹೋರಾಟಗಳ ಜಲಕ್ ನೀಡುತ್ತವೆ.

ಜೊತೆಗೆ ಸೋಲಿಗರ ಬದುಕಿನಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಬದಲಾವಣೆಗಳು ತಂದ ಸ್ಥಿತ್ಯಂತರ ಗಳು, ಅವರನ್ನು ಎಲ್ಲಿಯೂ ಸಲ್ಲದ ಮನುಷ್ಯರನ್ನಾಗಿ ಸಿದ ಬಗೆ ವಿವರಗಳು ಇವೆ. ಈ ಲೇಖನಗಳ ಸಂಕಲನ ಕನ್ನಡದ ಒಂದು ವಿಶಿಷ್ಟವಾದ ಮತ್ತು ಅನನ್ಯವಾದ ಲೇಖನಗಳ ಸಂಕಲನವಾಗುವುದರಲ್ಲಿ ಸಂಶಯ ಇಲ್ಲ.

(ಚಾ.ನಗರದ ಕೆ. ವೆಂಕಟರಾಜು ಅವರ ಮುನ್ನುಡಿಯ ಕೆಲವು ಸಾಲುಗಳು)

andolana

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

5 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

10 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

10 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

11 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

12 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

12 hours ago