ಆಂದೋಲನ ಪುರವಣಿ

ಹೊಸ ಪುಸ್ತಕ: ಕಾಡು ಹುಡುಗನ ಹಾಡು ಪಾಡು; ಅನುಭವ ಕಥನ

ಸ್ವಾಮಿ ಪೊನ್ನಾಚಿ
ಕನ್ನಡದ ಪ್ರತಿಭಾವಂತ ಕಥೆಗಾರ ಸ್ವಾಮಿ ಪೊನ್ನಾಚಿ ಯವರು ಬಹುತೇಕವಾಗಿ ‘ಆಂದೋಲನ’ಕ್ಕೆ ಬರೆದ ಪತ್ರಿಕಾ ಬರಹಗಳ ಸಂಕಲನ ‘ಕಾಡು ಹುಡುಗನ ಹಾಡು ಪಾಡು’ ಇಂದು (ಮಾ.3) ಬೆಳಿಗ್ಗೆ ಚಾಮರಾಜ ನಗರದ ಡಾ.ರಾಜ್‌ಕುಮಾರ್ ರಂಗಮಂದಿರದಲ್ಲಿ ಬೆಳಿಗ್ಗೆ ಒಂಬತ್ತೂವರೆಗೆ ಬಿಡುಗಡೆಯಾಗಲಿದೆ.

ಈ ಸಂಕಲನದ ಬರಹಗಳು ಸಣ್ಣಕತೆ, ಲಲಿತ ಪ್ರಬಂಧಗಳ ಸೃಜನಶೀಲತೆ, ಸ್ವಾರಸ್ಯ, ರಂಜಕತೆ, ಪತ್ರಿಕಾ ಬರಹಗಳ ಖಚಿತತೆ, ಸಂಕ್ಷಿಪ್ತತೆ, ಸಂಶೋಧಕನ ಅಧ್ಯಯನಶೀಲತೆ ಸಾಮಾಜಿಕ ಕಳಕಳಿ ಈ ಎಲ್ಲವನ್ನೂ ಒಳಗೊಂಡಿವೆ. ಇಲ್ಲಿಯ ಬರಹಗಳು ರಂಜನೀಯತೆಯ ಆಚೆಗೂ ತಮ್ಮ ಕೈ ಚಾಚುತ್ತವೆ.

ಸ್ವಾಮಿಯವರು ಬರಹಗಳಲ್ಲಿ ಪ್ರಕರಣಗಳ ಮತ್ತೊಂದು ಮಾನವೀಯ ಮುಖ ಬಿಚ್ಚಿಡುತ್ತಾರೆ. ಈ ಸಂಕಲನದಲ್ಲಿ ಹುತಾತ್ಮರಾದಶಕೀಲ್ ಅಹಮದ್ ಅವರ ಬಗ್ಗೆ ಬರಹ ಇದೆ. ಶಕೀಲ್ ಅಹಮದ್ ಅವರ ಕೆಲಸ ಸಾಧನೆ ತ್ಯಾಗ ಎಲ್ಲ ದಾಖಲೆಗಳಲ್ಲಿ ಸಿಕ್ಕೀತು. ಆದರೆ ಸ್ವಾಮಿ, ಶಕೀಲ್ ಅಹಮದ್ ಅವರ ವ್ಯಕ್ತಿಚಿತ್ರ ಬಿಡಿಸಿರುವ ಪರಿಯೇ ಬೇರೆ. ಒಬ್ಬಕತೆಗಾರ ಮಾತ್ರ ಹೀಗೆ ಬಿಡಿಸಬಲ್ಲ. ಪೊನ್ನಾಚಿ ಚೆಂಗಡಿ ಸುತ್ತಮುತ್ತಲ ಪ್ರದೇಶಕ್ಕೆ ತಮ್ಮ ಯೌವನದ ದಿವಸ
ಗಳಲ್ಲಿ ಕನಸು ಹೊತ್ತು ಬಂದ ಸಾಕೇತ್ ರಾಜನ್ ಅವರ ವಿವರ ಇದೆ. ಇವು ಎಪ್ಪತ್ತರ ದಶಕದಲ್ಲಿನ ಮಹಾ ರಾಜ ಕಾಲೇಜು, ಗಂಗೋತ್ರಿಯ ಸಮಾಜವಾದಿ, ಮಾರ್ಕ್ಸಿಸ್ಟ್ ಹೋರಾಟಗಳ ಜಲಕ್ ನೀಡುತ್ತವೆ.

ಜೊತೆಗೆ ಸೋಲಿಗರ ಬದುಕಿನಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಬದಲಾವಣೆಗಳು ತಂದ ಸ್ಥಿತ್ಯಂತರ ಗಳು, ಅವರನ್ನು ಎಲ್ಲಿಯೂ ಸಲ್ಲದ ಮನುಷ್ಯರನ್ನಾಗಿ ಸಿದ ಬಗೆ ವಿವರಗಳು ಇವೆ. ಈ ಲೇಖನಗಳ ಸಂಕಲನ ಕನ್ನಡದ ಒಂದು ವಿಶಿಷ್ಟವಾದ ಮತ್ತು ಅನನ್ಯವಾದ ಲೇಖನಗಳ ಸಂಕಲನವಾಗುವುದರಲ್ಲಿ ಸಂಶಯ ಇಲ್ಲ.

(ಚಾ.ನಗರದ ಕೆ. ವೆಂಕಟರಾಜು ಅವರ ಮುನ್ನುಡಿಯ ಕೆಲವು ಸಾಲುಗಳು)

andolana

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

6 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

7 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

7 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

8 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

9 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

13 hours ago