ಆಂದೋಲನ ಪುರವಣಿ

ಹೊಸ ಪುಸ್ತಕ: ಕಾಡು ಹುಡುಗನ ಹಾಡು ಪಾಡು; ಅನುಭವ ಕಥನ

ಸ್ವಾಮಿ ಪೊನ್ನಾಚಿ
ಕನ್ನಡದ ಪ್ರತಿಭಾವಂತ ಕಥೆಗಾರ ಸ್ವಾಮಿ ಪೊನ್ನಾಚಿ ಯವರು ಬಹುತೇಕವಾಗಿ ‘ಆಂದೋಲನ’ಕ್ಕೆ ಬರೆದ ಪತ್ರಿಕಾ ಬರಹಗಳ ಸಂಕಲನ ‘ಕಾಡು ಹುಡುಗನ ಹಾಡು ಪಾಡು’ ಇಂದು (ಮಾ.3) ಬೆಳಿಗ್ಗೆ ಚಾಮರಾಜ ನಗರದ ಡಾ.ರಾಜ್‌ಕುಮಾರ್ ರಂಗಮಂದಿರದಲ್ಲಿ ಬೆಳಿಗ್ಗೆ ಒಂಬತ್ತೂವರೆಗೆ ಬಿಡುಗಡೆಯಾಗಲಿದೆ.

ಈ ಸಂಕಲನದ ಬರಹಗಳು ಸಣ್ಣಕತೆ, ಲಲಿತ ಪ್ರಬಂಧಗಳ ಸೃಜನಶೀಲತೆ, ಸ್ವಾರಸ್ಯ, ರಂಜಕತೆ, ಪತ್ರಿಕಾ ಬರಹಗಳ ಖಚಿತತೆ, ಸಂಕ್ಷಿಪ್ತತೆ, ಸಂಶೋಧಕನ ಅಧ್ಯಯನಶೀಲತೆ ಸಾಮಾಜಿಕ ಕಳಕಳಿ ಈ ಎಲ್ಲವನ್ನೂ ಒಳಗೊಂಡಿವೆ. ಇಲ್ಲಿಯ ಬರಹಗಳು ರಂಜನೀಯತೆಯ ಆಚೆಗೂ ತಮ್ಮ ಕೈ ಚಾಚುತ್ತವೆ.

ಸ್ವಾಮಿಯವರು ಬರಹಗಳಲ್ಲಿ ಪ್ರಕರಣಗಳ ಮತ್ತೊಂದು ಮಾನವೀಯ ಮುಖ ಬಿಚ್ಚಿಡುತ್ತಾರೆ. ಈ ಸಂಕಲನದಲ್ಲಿ ಹುತಾತ್ಮರಾದಶಕೀಲ್ ಅಹಮದ್ ಅವರ ಬಗ್ಗೆ ಬರಹ ಇದೆ. ಶಕೀಲ್ ಅಹಮದ್ ಅವರ ಕೆಲಸ ಸಾಧನೆ ತ್ಯಾಗ ಎಲ್ಲ ದಾಖಲೆಗಳಲ್ಲಿ ಸಿಕ್ಕೀತು. ಆದರೆ ಸ್ವಾಮಿ, ಶಕೀಲ್ ಅಹಮದ್ ಅವರ ವ್ಯಕ್ತಿಚಿತ್ರ ಬಿಡಿಸಿರುವ ಪರಿಯೇ ಬೇರೆ. ಒಬ್ಬಕತೆಗಾರ ಮಾತ್ರ ಹೀಗೆ ಬಿಡಿಸಬಲ್ಲ. ಪೊನ್ನಾಚಿ ಚೆಂಗಡಿ ಸುತ್ತಮುತ್ತಲ ಪ್ರದೇಶಕ್ಕೆ ತಮ್ಮ ಯೌವನದ ದಿವಸ
ಗಳಲ್ಲಿ ಕನಸು ಹೊತ್ತು ಬಂದ ಸಾಕೇತ್ ರಾಜನ್ ಅವರ ವಿವರ ಇದೆ. ಇವು ಎಪ್ಪತ್ತರ ದಶಕದಲ್ಲಿನ ಮಹಾ ರಾಜ ಕಾಲೇಜು, ಗಂಗೋತ್ರಿಯ ಸಮಾಜವಾದಿ, ಮಾರ್ಕ್ಸಿಸ್ಟ್ ಹೋರಾಟಗಳ ಜಲಕ್ ನೀಡುತ್ತವೆ.

ಜೊತೆಗೆ ಸೋಲಿಗರ ಬದುಕಿನಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಬದಲಾವಣೆಗಳು ತಂದ ಸ್ಥಿತ್ಯಂತರ ಗಳು, ಅವರನ್ನು ಎಲ್ಲಿಯೂ ಸಲ್ಲದ ಮನುಷ್ಯರನ್ನಾಗಿ ಸಿದ ಬಗೆ ವಿವರಗಳು ಇವೆ. ಈ ಲೇಖನಗಳ ಸಂಕಲನ ಕನ್ನಡದ ಒಂದು ವಿಶಿಷ್ಟವಾದ ಮತ್ತು ಅನನ್ಯವಾದ ಲೇಖನಗಳ ಸಂಕಲನವಾಗುವುದರಲ್ಲಿ ಸಂಶಯ ಇಲ್ಲ.

(ಚಾ.ನಗರದ ಕೆ. ವೆಂಕಟರಾಜು ಅವರ ಮುನ್ನುಡಿಯ ಕೆಲವು ಸಾಲುಗಳು)

andolana

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

10 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

11 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

15 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

17 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

17 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

18 hours ago