ಆಂದೋಲನ ಪುರವಣಿ

ಕಲ್ಪವೃಕ್ಷವ ನಂಬಿದ ಕಾಯಕ ಲಾಭದಾಯಕ

ತೆಂಗು ಮೌಲ್ಯವರ್ಧನೆ ಮಾಡಿ ಕೋಕೋ ಕೇವ್ ಎಂಬ ನವೀನ ಕಿರು ಉದ್ಯಮ ಸ್ಥಾಪನೆ

ತೆಂಗು ಬಹುಉಪಯೋಗಿ. ಇದರಿಂದ ತಯಾರಾಗುವ ಪ್ರತಿಯೊಂದು ಪದಾರ್ಥಗಳೂ ನಿತ್ಯ ಬದುಕಿಗೆ ಅತ್ಯವಶ್ಯಕ. ಇಂತಿಪ್ಪ ಕಲ್ಪವೃಕ್ಷದಿಂದ ಸಾಕಷ್ಟು ಮೌಲ್ಯವರ್ಧಿತ ಪದಾರ್ಥಗಳನ್ನು ತಯಾರಿಸಿ ಅವುಗಳಿಗೆ ಮಾರುಕಟ್ಟೆ ಸೃಷ್ಟಿಸಿಕೊಂಡರೆ ಖಂಡಿತ ಲಾಭದಾಯಕ ಎನ್ನುವುದಕ್ಕೆ ಮೈಸೂರಿನಲ್ಲಿ ‘ಕೋಕೋ ಕೇವ್’ ಒಳ್ಳೆಯ ಉದಾಹರಣೆ.

ಮೈಸೂರಿನ ರಮಾನುಜ ರಸ್ತೆಯಲ್ಲಿ ಅಡ್ಡಾಡಿದರೆ ‘ಕೋಕೋ ಕೇವ್’ ಎನ್ನುವ ಹಸಿರಾದ ಮಳಿಗೆ ಕಾಣಸಿಕ್ಕುತ್ತದೆ. ೯ ತಿಂಗಳ ಹಿಂದಷ್ಟೇ ಶುರುವಾದ ಈ ನವೀನ ಮಳಿಗೆ ಈಗ ಹೆಚ್ಚು ಮಂದಿಯನ್ನು ಆಕರ್ಷಿಸಿ ಮುನ್ನಡೆಯುತ್ತಿದೆ. ಇದಕ್ಕೆ ಮುಖ್ಯವಾದ ಕಾರಣ ಎಳನೀರು ಮತ್ತು ಅದರ ಉಪ ಉತ್ಪನ್ನಗಳು. ಇದನ್ನು ಮುನ್ನಡೆಸುತ್ತಿರುವುದು ದಿನೇಶ್ ಮತ್ತು ಕುಟುಂಬ.

ಎಳನೀರಿನಿಂದ ಏಳು ಬಗೆಯ ತಿನಿಸು

ಬೇಸಿಗೆ ಹೊಸ್ತಿಲಲ್ಲಿ ನಿಂತಿರುವ ಈ ಸಮಯದಲ್ಲಿ ಎಳನೀರಿಗೆ ಹೆಚ್ಚಿನ ಬೇಡಿಕೆ ಇದೆ. ಅದೇ ರೀತಿ ಕೋಕೋ ಕೇವ್‌ನಲ್ಲಿ ಎಳನೀರಿನಿಂದಲೇ ತಯಾರಿಸಿದ ಐಸ್‌ಕ್ರೀಮ್, ಎಳನೀರು ಕ್ರಶ್, ಎಳನೀರು ಕೂಲರ್, ಸ್ಕೂಪ್, ಕೋನ್, ಫುಡ್ಡಿಂಗ್‌ಗಳು ಎಲ್ಲರ ಮೆಚ್ಚುಗೆ ಗಳಿಸಿವೆ. ಆ ಮೂಲಕ ಹೊಸದಾಗಿ ಆರಂಭವಾದ ಉದ್ದಿಮೆ ಭರವಸೆ ಮೂಡಿಸಿದೆ.

ಕುಟುಂಬದ ನಿರ್ವಹಣೆ

ದಿನೇಶ್ ಅವರು ಹೆಂಡತಿ ಮಕ್ಕಳು, ಇಬ್ಬರು ಕೆಲಸದ ಆಳುಗಳನ್ನು ಒಟ್ಟಾಗಿಸಿಕೊಂಡು ಎಳನೀರಿನಿಂದ ಏಳು ಬಗೆಯ ಉತ್ಪನ್ನಗಳನ್ನು ಮನೆಯಲ್ಲಿಯೇ ತಯಾರು ಮಾಡುತ್ತಿದ್ದಾರೆ. ಇದಕ್ಕೆ ಬೇಕಾದ ಅಗತ್ಯ ಯಂತ್ರೋಪಕರಣಗಳನ್ನು ತರಿಸಿಕೊಂಡಿರುವ ಇವರು ಸ್ಥಳೀಯವಾಗಿ ದಿನವೂ ಎಳನೀರು ತರಿಸಿಕೊಂಡು ಐಸ್‌ಕ್ರೀಮ್, ಎಳನೀರು ಕ್ರಶ್, ಎಳನೀರು ಕೂಲರ್, ಸ್ಕೂಪ್, ಕೋನ್, ಫುಡ್ಡಿಂಗ್‌ಗಳನ್ನು ಸಿದ್ಧ ಮಾಡಿಕೊಳ್ಳುತ್ತಾರೆ. ಒಳ್ಳೆಯ ರುಚಿ ಮತ್ತು ಕೈಗೆಟಕುವ ಬೆಲೆ ನಿಗದಿ ಮಾಡಿರುವುದರಿಂದ ಕೋಕೋ ಕೇನ್‌ಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕುತ್ತಿದೆ.

ಕೊರೋನಾ ವೇಳೆಯಲ್ಲಿ ಹುಟ್ಟಿದ ಆಲೋಚನೆ

ಹಲವಾರು ಮಂದಿಯ ಉದ್ಯೋಗ ನಷ್ಟಕ್ಕೆ ಕೊರೋನಾ ಕಾರಣ. ಹಾಗೆಯೇ ಕೆಲವಾರು ಮಂದಿ ಹೊಸ ಉದ್ದಿಮೆ, ಹೊಸ ಸಾಹಸದತ್ತ ಮುಖ ಮಾಡಲು ಇದೇ ಕೊರೋನಾ ಕಾರಣ. ಇಂಜಿನಿಯರಿಂಗ್ ಮಾಡಿದ್ದ ಮಗ ಕೊರೋನಾ ವೇಳೆಯಲ್ಲಿ ಮನೆಯಲ್ಲಿಯೇ ಬಂಧಿಯಾದಾಗ ಏನಾದರೂ ಹೊಸದಾಗಿ ಮಾಡಬೇಕು ಎಂದು ದಿನೇಶ್ ಅವರ ಕುಟುಂಬ ನಿರ್ಧರಿಸುತ್ತದೆ. ಆಗ ವಿವಿಧ ಆಲೋಚನೆಗಳು ಸುಳಿದು ಹೋಗುತ್ತವೆ. ಪರಿವರ್ತ ಹಣ್ಣುಗಳನ್ನು ಬಳಸಿಕೊಂಡು ನೈಸರ್ಗಿಕವಾಗಿ ಐಸ್‌ಕ್ರೀಮ್ ತಯಾರು ಮಾಡಬೇಕು ಎಂದು ಮೊದಲಿಗೆ ಅಂದುಕೊಳ್ಳುತ್ತಾರೆ. ಆದರೆ ಮುಂದೆ ದಾರಿ ಬದಲಾಗಿ ಒಂದೇ ವಸ್ತುವನ್ನು ಗುರಿಯಾಗಿಸಿಕೊಂಡು ಅದರಿಂದಲೇ ಬೇರೆ ಬೇರೆ ರೀತಿಯ ಉತ್ಪನ್ನಗಳನ್ನು ತಯಾರು ಮಾಡಬೇಕು ಎಂದುಕೊಂಡು ಎಳನೀರನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.

ಮನೆಯೇ ಮಳಿಗೆಯಾಯ್ತು

ಎಳನೀರನ್ನು ಕೇಂದ್ರವಾಗಿಟ್ಟುಕೊಂಡು ಉದ್ದಿಮೆ ಶುರುಮಾಡಿದ ಮೇಲೆ ಸೂಕ್ತ ಸ್ಥಳದ ಹುಡುಕಾಟ ನಡೆಯಿತು. ಬೇರೆ ಕಡೆಗಳಲ್ಲಿ ಬಾಡಿಗೆ ಹೆಚ್ಚಾಗುತ್ತದೆ ಎನ್ನುವ ಕಾರಣಕ್ಕೆ ರಮಾನುಜ ರಸ್ತೆಯಲ್ಲಿ ಇರುವ ಮನೆಯ ಒಂದು ಭಾಗವನ್ನೇ ಮಳಿಗೆಯನ್ನಾಗಿ ಪರಿವರ್ತಿಸಲಾಯಿತು. ಆಗ ನಮ್ಮ ಮನಸ್ಸಿನಲ್ಲಿ ಇದ್ದದ್ದು ಒಳ್ಳೆಯ ಸೇವೆ, ಗುಣಮಟ್ಟದ ತಿನಿಸುಗಳನ್ನು ನೀಡಿದರೆ ಗೆಲುವು ಸಿಗುತ್ತದೆ ಎನ್ನುವುದು. ಈಗ ನಮ್ಮ ಪ್ರಯತ್ನಕ್ಕೆ ಒಳ್ಳೆಯ ಪ್ರತಿಫಲ ಸಿಗುತ್ತಿದೆ. ಮುಂದೆ ಬೇಸಿಗೆ ಬರುವುದರಿಂದ ಮತ್ತಷ್ಟು ಬೆಳವಣಿಗೆ ಆಗಬಹುದು ಎನ್ನುವ ಅಂದಾಜಿದೆ ಎನ್ನುವುದು ದಿನೇಶ್ ಅವರ ವಿಶ್ವಾಸ.

ಈಗ ಆರೋಗ್ಯ ಚೆನ್ನಾಗಿ ಇರಬೇಕು ಎಂದು ಎಲ್ಲರೂ ಬಯಸುತ್ತಾರೆ. ಅದಕ್ಕಾಗಿ ಎಳನೀರಿಗೆ ಹೆಚ್ಚಿನ ಬೇಡಿಕೆ ಇದೆ. ನಾವು ಎಳನೀರಿನ ಮೌಲ್ಯವರ್ಧನೆ ಮಾಡಿದ್ದೇವೆ. ಇದರಿಂದ ಕಾಲೇಜು ವಿದ್ಯಾರ್ಥಿಗಳು, ಎಲ್ಲ ವಯೋಮಾನದವರೂ ನಮ್ಮಲ್ಲಿಗೆ ಬರುತ್ತಿದ್ದಾರೆ. ಒಳ್ಳೆಯ ಗುಣಮಟ್ಟ ಮತ್ತು ಕಡಿಮೆ ದರ ಇರುವುದರಿಂದ ಉದ್ಯಮ ಚೆನ್ನಾಗಿ ನಡೆಯುತ್ತಿದೆ. – ದಿನೇಶ್, ಮಾಲೀಕರು, ಕೋಕೋ ಕೇವ್

andolana

Recent Posts

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: ನಿತಿನ್‌ ನಬಿನ್‌ಗೆ ರಾಜೀನಾಮೆ ಸಲ್ಲಿಕೆ

ನವದೆಹಲಿ: ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರನ್ನು ಭೇಟಿಯಾಗಿ ರಾಜೀನಾಮೆ…

15 seconds ago

ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಸಹೋದರ ವಾಸುದೇವನ್‌ ನಿಧನ

ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್‌ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…

30 mins ago

ನಾಳೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…

2 hours ago

ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶ

ಬೆಂಗಳೂರು: ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…

2 hours ago

ನಿನಗೆ ಹುಚ್ಚು ಹಿಡಿದಿದ್ಯಾ?: ನೆತನ್ಯಾಹು ವಿರುದ್ಧ ಡೊನಾಲ್ಡ್‌ ಟ್ರಂಪ್‌ ಕೆಂಡಾಮಂಡಲ

ವಾಷಿಂಗ್ಟನ್:‌ ದೂರವಾಣಿ ಸಂಭಾಷಣೆ ವೇಳೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ವಿರುದ್ಧ ಆಕ್ರೋಶ…

3 hours ago

ಎಲ್ಲೆಂದರಲ್ಲಿ ಕಸ ಎಸೆಯಲು ವಿದ್ಯೆ ಕಲಿಯಬೇಕೆ?!

ಟಿ.ಕೆ.ಹರೀಶ್ (ಲೇಖಕರು ಹಿರಿಯ ಸಹಾಯಕ ನಿರ್ದೇಶಕರು)  ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಪರಿಸರ ಜಾಗೃತಿ ಮೂಡಿಸಬೇಕು ಮೈಸೂರು ತನ್ನದೇ ಆದ ಸುಂದರವಾದ…

7 hours ago