ಆಂದೋಲನ ಪುರವಣಿ

ಮುಪ್ಪು ಎಂಬ ಸುಂದರ ಘಟ್ಟ

ಲೇಖಕರು: ಕೀರ್ತನಾ ಎಂ.

ವಯಸ್ಸು ಎನ್ನುವುದು ಯಾರಿಗೂ ನಿಲ್ಲದು. ಕಾಲ ಚಕ್ರ ತಿರುಗಿದಂತೆ ಬದುಕು ಸಾಗುತ್ತ ಹೋಗುತ್ತದೆ. ಇಂದು ಬಾಲ್ಯದಲ್ಲಿ ಆಟ ಆಡುತ್ತಾ ಇರುವವರು ಯೌವನದ ಸವಿಯನ್ನು ಸವಿಯಲೇಬೇಕು. ಸಂಸಾರದ ಸಾಗರದಲ್ಲಿ ಈಜಲೇಬೇಕು. ಮುಪ್ಪುನ್ನು ಸ್ವಾಗತಿಸಲೇಬೇಕು. ಆದರೆ ಅದರ ಹಿಂದಿನ ಬದುಕಲ್ಲಿ ಬದುಕಿದ ರೀತಿ ಮುಪ್ಪಿನಲ್ಲಿ ಕೊರಗುವಂತೆ ಮಾಡಬಾರದು.

ಸಾವಿತ್ರಿ ಸಂಸ್ಕಾರವಂತ ಮನೆತನದ ಹುಡುಗಿ, ಮದುವೆಯಾಗಿ ಇಪ್ಪತ್ತು ವರ್ಷವಾಗಿದೆ. ಇಬ್ಬರು ಮುದ್ದಿನ ಮಕ್ಕಳು. ಇಚ್ಛೆಯನ್ನು ಅರಿತು ನಡೆಯುವ ಪತಿ. ಮಾವ ಅಗಲಿ ಎರಡು ವರ್ಷವಾದರೆ ಅತ್ತೆ ಸುಶೀಲಮ್ಮ ಹಾಸಿಗೆ ಹಿಡಿದು ಆರು ತಿಂಗಳು ಆಗುತ್ತ ಬಂತು.

‘ಸವಿ…’ ಒಂದು ಕೂಗು ಕೂಗಿದ ತಕ್ಷಣ ದನಿ ಕೇಳಿಯೇ ಯಾವ ಕಾರಣಕ್ಕೆ ಕರೆಯುತ್ತಿದ್ದಾರೆ ಎಂದು ಊಹಿಸಿದ ಸಾವಿತ್ರಿ ಮಾಡುವ ಕೆಲಸ ಬಿಟ್ಟು ಅತ್ತೆ ಇದ್ದ ರೂಮಿಗೆ ಓಡಿದಳು. ಅವರ ಮಿಸುಕಾಟ ಕಂಡು ಒಂದು ನಿಮಿಷ ಅತ್ತೆ ಆಗಿ ಹೋಯ್ತು ಅತ್ತೆ’ ಎನ್ನುತ್ತಾ ಅವರ ಡೈಪರ್ ಬದಲಾಯಿಸಿ ಹಾಸಿಗೆ ಶುಚಿಗೊಳಿಸಿದಳು.

ಸೊಸೆಯ ಸೇವೆ ಪ್ರತಿ ದಿನವೂ ಅವರ ಕಣ್ಣು ತುಂಬಿಸುತ್ತಿತ್ತು. ಒಂದು ಬಾರಿಯಾದರೂ ಅವಳ ಬಳಿ ಕ್ಷಮೆ ಕೇಳಬೇಕು ಎಂದುಕೊಂಡವರ ಗಂಟಲುಬ್ಬಿ ಮಾತು ನಾಳಿಗೆಯಲ್ಲೇ ಉಳಿದು ಹೋಗುತ್ತಿತ್ತು. ಶಾಲೆಯಿಂದ ಬಂದ ಮೊಮ್ಮಕ್ಕಳು ಕೈಕಾಲು ತೊಳೆದು ಬಂದು ಸ್ವಲ್ಪ ಸಮಯ ಅಜ್ಜಿಯ ಜೊತೆ ಕಳೆದು ನಂತರ ಓದಲು ಹೋದರು. ʼಎಷ್ಟು ಒಳ್ಳೆಯ ಸಂಸ್ಥಾರ ಮಕ್ಕಳದು’ ಮಾತಾಡಿಸಲು ಬಂದ ಮಗನಿಗೆ ತಾಯಿಯ ಮಾತು ಕೇಳಿತು.

‘ಎಲ್ಲ ಸವಿ ಪ್ರಭಾವ ಅಮ್ಮ. ಮಕ್ಕಳಿಗೆ ಕೇವಲ ಒಳ್ಳೆಯದನ್ನೇ ಹೇಳಿಕೊಡುತ್ತಾಳೆ. ನೀನು ಕಾಫಿ ಕುಡಿದಿಲ್ಲ ಅಲ್ವಾ ಅಮ್ಮ ಇರು ಬರುತ್ತೇನೆ ಒಟ್ಟಿಗೆ ಕುಡಿಯೋಣ’ ಎಂದು ತಾಯಿಯ ತಲೆ ಸವರಿ ಹೋದ ಅರುಣ್. ಹಾಸಿಗೆ ಹಿಡಿದ ದಿನದಿಂದ ತನ್ನ ಉದ್ಯೋಗವನ್ನು ತ್ಯಜಿಸಿ ಅತ್ತೆಯನ್ನು ನೋಡಿಕೊಳ್ಳುವುದರಲ್ಲೇ ಕಳೆದು ಹೋಗಿರುವ ಸೊಸೆಯ ಮೇಲೆ ಈಗ ಅವರಿಗೆ ಗೌರವ ಹೆಚ್ಚಿದೆ.

ಆರು ತಿಂಗಳ ಹಿಂದೆ ಸಾವಿತ್ರಿ ಕೆಲಸ ಮುಗಿಸಿ ಮನೆಗೆ ಬರುವಾಗ ಸ್ವಲ್ಪ ತಡವಾಗಿತ್ತು. ಆ ದಿನ ಬೆಳಿಗ್ಗೆ ತಾನೇ ಮನೆಗೆ ಬಂದಿದ್ದ ನೆಂಟರೆಲ್ಲ ಹೊರಟು ಹೋಗಿದ್ದರು. ಸಂಜೆ ಮನೆಗೆ ಬಂದ ಸಾವಿತ್ರಿಗೆ ಲಾಟು ಕೆಲಸ ಕಾಯುತ್ತಿತ್ತು. ದಣಿದು ಬಂದವಳನ್ನು ಹೊಸ್ತಿಲು ದಾಟುತ್ತಾ ಇದ್ದಂತೆ ತರಾಟೆಗೆ ತೆಗೆದುಕೊಂಡರು ಸುಶೀಲಮ್ಮ. ಅದಕ್ಕೆ ಹೆಚ್ಚು ಕಿವಿ ಕೊಡದೆ ಕಾಫಿ ಕುಡಿದು ಸ್ವಲ್ಪ ಸುಧಾರಿಸಿಕೊಂಡು ನಂತರ ಕೆಲಸಕ್ಕೆ ಕೈ ಹಚ್ಚೋಣ ಎಂದು ಕಾಫಿ ಕಾಯಿಸಿ ಲೋಟಕ್ಕೆ ಬಗ್ಗಿಸಿದಳು ಅಷ್ಟೇ, ಸಿಟ್ಟಲ್ಲಿ ಬಂದ ಸುಶೀಲಮ್ಮ ಅಷ್ಟು ಕಾಫಿಯನ್ನೂ ಬಚ್ಚಲಿಗೆ ಸುರಿದು ಬಾಯಿಗೆ ಬಂದಂತೆ ಬೈಯುತ್ತಲೇ ನೆಲಕ್ಕೆ ಉರುಳಿದರು.

ಆಸ್ಪತ್ರೆಗೆ ಸೇರಿಸಿದಾಗ ಪಾರ್ಶ್ವವಾಯು ಆಗಿತ್ತು. ಅಂದಿನಿಂದ ಅತ್ತೆಯ ಪೂರ್ತಿ ಜವಾಬ್ದಾರಿ ಸಾವಿತ್ರಿ ಮೇಲೆ ಬಿತ್ತು. ಒಂದು ದಿನವೂ ಬೇಸರಿಸಿಕೊಳ್ಳದೇ ಅಂದಿನಿಂದ ಅವರ ಸೇವೆ ಮಾಡುತ್ತಿದ್ದಾಳೆ ಸಾವಿತ್ರಿ, ಮದುವೆಯಾಗಿ ಬಂದ ದಿನದಿಂದ ಸೊಸೆಯ ಮೇಲೆ ಕೆಂಡ ಕಾರುತ್ತಿದ್ದ ವಯಸ್ಸಾದ ಸುಶೀಲಮ್ಮನಿಗೆ ನಿಜಕ್ಕೂ ಹಿರಿಯರಿಗೆ ಗೌರವ ಕೊಡುವುದು ಎಂದರೆ ಏನೆಂದು ಸಾವಿತ್ರಿ ಕಲಿಸಿದ್ದಳು. ಕೊನೆಗಾಲದಲ್ಲಿ ತನ್ನ ಅತ್ತೆಯನ್ನು ನಾನು ಸರಿಯಾಗಿ ನೋಡಿಕೊಳ್ಳದೆ ನರಳಿಸಿದ್ದು ನೆನಪಾಗಿ ಸುಶೀಲಮ್ಮನ ಕಣ್ಣು ತೇವಗೊಂಡಿತು.

ವಯಸ್ಸಾದವರು ಎಂದರೆ ಅವರಿಂದ ಏನೂ ಆಗದು ಎಂದು ಕಾಲ ಕಸದಂತೆ ನೋಡುವವರಿಗೆ ಸಾವಿತ್ರಿ ಪಾಠವಾಗಿದ್ದಳು. ನಾವು ಮುಂದೆ ಮುಪ್ಪಿನ ಹಾದಿ ತುಳಿಯಲೇಬೇಕು. ಈ ಯೌವನ ಶಾಶ್ವತವಲ್ಲ. ಮುಪ್ಪು ಕೂಡ ಒಂದು ಕಾಲಘಟ್ಟ ಅನುಭವಿಸಲೇಬೇಕು ಎಂದು ಅರಿತು ಪ್ರತಿ ಹಿರಿಯರನ್ನೂ ಗೌರವಿಸುವುದು ಬಹಳ ಮುಖ್ಯವಾಗುತ್ತದೆ. ಆ ಪಾಠವನ್ನು ಬಾಲ್ಯದಿಂದಲೇ ಕಲಿಯಬೇಕು ಕಲಿಸಬೇಕು.
keerthana.manju.guha6@gmail.com

andolana

Recent Posts

ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು

ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್‌ ಕಾಲೋನಿ ಹಾಗೂ ವಸೀಮ್‌ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್‌…

16 mins ago

ಪೈರಸಿ ಬಗ್ಗೆ ಮತ್ತೊಮ್ಮೆ ಖಡಕ್‌ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್‌

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್‌ ಚಿತ್ರಕ್ಕೂ ಪೈರಸಿ…

47 mins ago

ಜೆಡಿಎಸ್‌ ಜೊತೆ ಮೈತ್ರಿ ವಿಚಾರ: ವರಿಷ್ಠರ ತೀರ್ಮಾನಕ್ಕೆ ಬದ್ಧ ಎಂದ ವಿಜಯೇಂದ್ರ

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ…

1 hour ago

ಹೆಸರುಘಟ್ಟ ನೈಸರ್ಗಿಕ ಹುಲ್ಲುಗಾವಲು ಸಂರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…

3 hours ago

ಕಾಸರಗೋಡು| ಹಳಿ ದಾಟುವಾಗ ರೈಲು ರಿಕ್ಕಿ: ಕೊಡಗು ಮೂಲದ ಯುವಕ ಸಾವು

ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…

3 hours ago

ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ: ಕರ್ನಾಟಕದ ವಿರುದ್ಧ ಪಿಣರಾಯಿ ವಿಜಯನ್‌ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಕಾಂಗ್ರೆಸ್‌ ಸರ್ಕಾರದ…

3 hours ago