ಆಂದೋಲನ ಪುರವಣಿ

ಮುಪ್ಪು ಎಂಬ ಸುಂದರ ಘಟ್ಟ

ಲೇಖಕರು: ಕೀರ್ತನಾ ಎಂ.

ವಯಸ್ಸು ಎನ್ನುವುದು ಯಾರಿಗೂ ನಿಲ್ಲದು. ಕಾಲ ಚಕ್ರ ತಿರುಗಿದಂತೆ ಬದುಕು ಸಾಗುತ್ತ ಹೋಗುತ್ತದೆ. ಇಂದು ಬಾಲ್ಯದಲ್ಲಿ ಆಟ ಆಡುತ್ತಾ ಇರುವವರು ಯೌವನದ ಸವಿಯನ್ನು ಸವಿಯಲೇಬೇಕು. ಸಂಸಾರದ ಸಾಗರದಲ್ಲಿ ಈಜಲೇಬೇಕು. ಮುಪ್ಪುನ್ನು ಸ್ವಾಗತಿಸಲೇಬೇಕು. ಆದರೆ ಅದರ ಹಿಂದಿನ ಬದುಕಲ್ಲಿ ಬದುಕಿದ ರೀತಿ ಮುಪ್ಪಿನಲ್ಲಿ ಕೊರಗುವಂತೆ ಮಾಡಬಾರದು.

ಸಾವಿತ್ರಿ ಸಂಸ್ಕಾರವಂತ ಮನೆತನದ ಹುಡುಗಿ, ಮದುವೆಯಾಗಿ ಇಪ್ಪತ್ತು ವರ್ಷವಾಗಿದೆ. ಇಬ್ಬರು ಮುದ್ದಿನ ಮಕ್ಕಳು. ಇಚ್ಛೆಯನ್ನು ಅರಿತು ನಡೆಯುವ ಪತಿ. ಮಾವ ಅಗಲಿ ಎರಡು ವರ್ಷವಾದರೆ ಅತ್ತೆ ಸುಶೀಲಮ್ಮ ಹಾಸಿಗೆ ಹಿಡಿದು ಆರು ತಿಂಗಳು ಆಗುತ್ತ ಬಂತು.

‘ಸವಿ…’ ಒಂದು ಕೂಗು ಕೂಗಿದ ತಕ್ಷಣ ದನಿ ಕೇಳಿಯೇ ಯಾವ ಕಾರಣಕ್ಕೆ ಕರೆಯುತ್ತಿದ್ದಾರೆ ಎಂದು ಊಹಿಸಿದ ಸಾವಿತ್ರಿ ಮಾಡುವ ಕೆಲಸ ಬಿಟ್ಟು ಅತ್ತೆ ಇದ್ದ ರೂಮಿಗೆ ಓಡಿದಳು. ಅವರ ಮಿಸುಕಾಟ ಕಂಡು ಒಂದು ನಿಮಿಷ ಅತ್ತೆ ಆಗಿ ಹೋಯ್ತು ಅತ್ತೆ’ ಎನ್ನುತ್ತಾ ಅವರ ಡೈಪರ್ ಬದಲಾಯಿಸಿ ಹಾಸಿಗೆ ಶುಚಿಗೊಳಿಸಿದಳು.

ಸೊಸೆಯ ಸೇವೆ ಪ್ರತಿ ದಿನವೂ ಅವರ ಕಣ್ಣು ತುಂಬಿಸುತ್ತಿತ್ತು. ಒಂದು ಬಾರಿಯಾದರೂ ಅವಳ ಬಳಿ ಕ್ಷಮೆ ಕೇಳಬೇಕು ಎಂದುಕೊಂಡವರ ಗಂಟಲುಬ್ಬಿ ಮಾತು ನಾಳಿಗೆಯಲ್ಲೇ ಉಳಿದು ಹೋಗುತ್ತಿತ್ತು. ಶಾಲೆಯಿಂದ ಬಂದ ಮೊಮ್ಮಕ್ಕಳು ಕೈಕಾಲು ತೊಳೆದು ಬಂದು ಸ್ವಲ್ಪ ಸಮಯ ಅಜ್ಜಿಯ ಜೊತೆ ಕಳೆದು ನಂತರ ಓದಲು ಹೋದರು. ʼಎಷ್ಟು ಒಳ್ಳೆಯ ಸಂಸ್ಥಾರ ಮಕ್ಕಳದು’ ಮಾತಾಡಿಸಲು ಬಂದ ಮಗನಿಗೆ ತಾಯಿಯ ಮಾತು ಕೇಳಿತು.

‘ಎಲ್ಲ ಸವಿ ಪ್ರಭಾವ ಅಮ್ಮ. ಮಕ್ಕಳಿಗೆ ಕೇವಲ ಒಳ್ಳೆಯದನ್ನೇ ಹೇಳಿಕೊಡುತ್ತಾಳೆ. ನೀನು ಕಾಫಿ ಕುಡಿದಿಲ್ಲ ಅಲ್ವಾ ಅಮ್ಮ ಇರು ಬರುತ್ತೇನೆ ಒಟ್ಟಿಗೆ ಕುಡಿಯೋಣ’ ಎಂದು ತಾಯಿಯ ತಲೆ ಸವರಿ ಹೋದ ಅರುಣ್. ಹಾಸಿಗೆ ಹಿಡಿದ ದಿನದಿಂದ ತನ್ನ ಉದ್ಯೋಗವನ್ನು ತ್ಯಜಿಸಿ ಅತ್ತೆಯನ್ನು ನೋಡಿಕೊಳ್ಳುವುದರಲ್ಲೇ ಕಳೆದು ಹೋಗಿರುವ ಸೊಸೆಯ ಮೇಲೆ ಈಗ ಅವರಿಗೆ ಗೌರವ ಹೆಚ್ಚಿದೆ.

ಆರು ತಿಂಗಳ ಹಿಂದೆ ಸಾವಿತ್ರಿ ಕೆಲಸ ಮುಗಿಸಿ ಮನೆಗೆ ಬರುವಾಗ ಸ್ವಲ್ಪ ತಡವಾಗಿತ್ತು. ಆ ದಿನ ಬೆಳಿಗ್ಗೆ ತಾನೇ ಮನೆಗೆ ಬಂದಿದ್ದ ನೆಂಟರೆಲ್ಲ ಹೊರಟು ಹೋಗಿದ್ದರು. ಸಂಜೆ ಮನೆಗೆ ಬಂದ ಸಾವಿತ್ರಿಗೆ ಲಾಟು ಕೆಲಸ ಕಾಯುತ್ತಿತ್ತು. ದಣಿದು ಬಂದವಳನ್ನು ಹೊಸ್ತಿಲು ದಾಟುತ್ತಾ ಇದ್ದಂತೆ ತರಾಟೆಗೆ ತೆಗೆದುಕೊಂಡರು ಸುಶೀಲಮ್ಮ. ಅದಕ್ಕೆ ಹೆಚ್ಚು ಕಿವಿ ಕೊಡದೆ ಕಾಫಿ ಕುಡಿದು ಸ್ವಲ್ಪ ಸುಧಾರಿಸಿಕೊಂಡು ನಂತರ ಕೆಲಸಕ್ಕೆ ಕೈ ಹಚ್ಚೋಣ ಎಂದು ಕಾಫಿ ಕಾಯಿಸಿ ಲೋಟಕ್ಕೆ ಬಗ್ಗಿಸಿದಳು ಅಷ್ಟೇ, ಸಿಟ್ಟಲ್ಲಿ ಬಂದ ಸುಶೀಲಮ್ಮ ಅಷ್ಟು ಕಾಫಿಯನ್ನೂ ಬಚ್ಚಲಿಗೆ ಸುರಿದು ಬಾಯಿಗೆ ಬಂದಂತೆ ಬೈಯುತ್ತಲೇ ನೆಲಕ್ಕೆ ಉರುಳಿದರು.

ಆಸ್ಪತ್ರೆಗೆ ಸೇರಿಸಿದಾಗ ಪಾರ್ಶ್ವವಾಯು ಆಗಿತ್ತು. ಅಂದಿನಿಂದ ಅತ್ತೆಯ ಪೂರ್ತಿ ಜವಾಬ್ದಾರಿ ಸಾವಿತ್ರಿ ಮೇಲೆ ಬಿತ್ತು. ಒಂದು ದಿನವೂ ಬೇಸರಿಸಿಕೊಳ್ಳದೇ ಅಂದಿನಿಂದ ಅವರ ಸೇವೆ ಮಾಡುತ್ತಿದ್ದಾಳೆ ಸಾವಿತ್ರಿ, ಮದುವೆಯಾಗಿ ಬಂದ ದಿನದಿಂದ ಸೊಸೆಯ ಮೇಲೆ ಕೆಂಡ ಕಾರುತ್ತಿದ್ದ ವಯಸ್ಸಾದ ಸುಶೀಲಮ್ಮನಿಗೆ ನಿಜಕ್ಕೂ ಹಿರಿಯರಿಗೆ ಗೌರವ ಕೊಡುವುದು ಎಂದರೆ ಏನೆಂದು ಸಾವಿತ್ರಿ ಕಲಿಸಿದ್ದಳು. ಕೊನೆಗಾಲದಲ್ಲಿ ತನ್ನ ಅತ್ತೆಯನ್ನು ನಾನು ಸರಿಯಾಗಿ ನೋಡಿಕೊಳ್ಳದೆ ನರಳಿಸಿದ್ದು ನೆನಪಾಗಿ ಸುಶೀಲಮ್ಮನ ಕಣ್ಣು ತೇವಗೊಂಡಿತು.

ವಯಸ್ಸಾದವರು ಎಂದರೆ ಅವರಿಂದ ಏನೂ ಆಗದು ಎಂದು ಕಾಲ ಕಸದಂತೆ ನೋಡುವವರಿಗೆ ಸಾವಿತ್ರಿ ಪಾಠವಾಗಿದ್ದಳು. ನಾವು ಮುಂದೆ ಮುಪ್ಪಿನ ಹಾದಿ ತುಳಿಯಲೇಬೇಕು. ಈ ಯೌವನ ಶಾಶ್ವತವಲ್ಲ. ಮುಪ್ಪು ಕೂಡ ಒಂದು ಕಾಲಘಟ್ಟ ಅನುಭವಿಸಲೇಬೇಕು ಎಂದು ಅರಿತು ಪ್ರತಿ ಹಿರಿಯರನ್ನೂ ಗೌರವಿಸುವುದು ಬಹಳ ಮುಖ್ಯವಾಗುತ್ತದೆ. ಆ ಪಾಠವನ್ನು ಬಾಲ್ಯದಿಂದಲೇ ಕಲಿಯಬೇಕು ಕಲಿಸಬೇಕು.
keerthana.manju.guha6@gmail.com

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

6 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

9 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago