ಆಂದೋಲನ ಪುರವಣಿ

ಯೋಗ ಕ್ಷೇಮ : ಕಿಡ್ನಿ ಸ್ಟೋನ್: ಸ್ಪಷ್ಟತೆ ಇದ್ದರೆ ಅಪಾಯವಿಲ್ಲ

ಕಿಡ್ನಿ ಸ್ಟೋನ್ ಸಮಸ್ಯೆ ಈಗ ಸಾಮಾನ್ಯ ಎಂಬಂತಾಗಿದೆ. ಅತ್ಯಾಧುನಿಕ ಚಿಕಿತ್ಸೆಗಳಿಂದ ಇದನ್ನು ನಿವಾರಣೆ ಮಾಡಬಹುದಾದರೂ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು ಉತ್ತಮ.
ಹೆಚ್ಚು ನೀರು ಕುಡಿಯುವುದು, ಉತ್ತಮ ಆಹಾರ ಸೇವಿಸುವುದರಿಂದಲೇ ಕಿಡ್ನಿಯಲ್ಲಿ ಕಲ್ಲಾಗುವುದನ್ನು ತಪ್ಪಿಸಿ ಆರೋಗ್ಯಯುತ ಜೀವನ ನಡೆಸಬಹುದು.
ತಿಳಿದಿರಬೇಕಾದ ಅಂಶಗಳು
* ದೇಹದಲ್ಲಿ ಉಪ್ಪು, ಕೆಲವು ಲವಣಾಂಶಗಳು ಹರಳಿನ ರೂಪಕ್ಕೆ ಮಾರ್ಪಟ್ಟು ಕಿಡ್ನಿಯಲ್ಲಿ ಸೇರುತ್ತವೆ. ಇವುಗಳನ್ನೇ ಸರಳವಾಗಿ ಕಿಡ್ನಿ ಸ್ಟೋನ್ ಎನ್ನುವುದು.
* ಹೆಚ್ಚು ನೀರು ಅಥವ ನೀರಿ ಅಂಶ ಹೆಚ್ಚಿರುವ ಆಹಾರ ಸೇವನೆಯಿಂದ ಘನ ರೂಪಕ್ಕೆ ತಿರುಗಿನ ಅರಳುಗಳು ಕರಗಿ ಮೂತ್ರದೊಂದಿಗೆ ಹೊರಗೆ ಬರುತ್ತವೆ.
* ನೀರಿನ ಸೇವನೆ ಕಡಿಮೆಯಾದಷ್ಟೂ ದೇಹದಲ್ಲಿನ ಲವಣಾಂಶಗಳು ಘನ ರೂಪಕ್ಕೆ ತಿರುಗಿ ಸಮಸ್ಯೆ ಮತ್ತಷ್ಟು ಜಟಿಲವಾಗುತ್ತಾ ಹೋಗುತ್ತದೆ.
* ಹೊಟ್ಟೆಯ ಕೆಳಗೆ, ಪೆಕ್ಕೆಲುಬುಗಳ ಬಳಿ ನೋವು ಕಾಣಿಸಿಕೊಳ್ಳುವುದು, ಮೂತ್ರ ಮಾಡುವಾಗ ನೋವುಂಟಾಗುವುದು ಕಿಡ್ನಿ ಸ್ಟೋನ್‌ನ ಲಕ್ಷಣ.
* ಕಿಡ್ನಿ ಸ್ಟೋನ್ ಅನುವಂಶೀಯವೂ ಹೌದು. ವೈದ್ಯರ ಸಲಹೆ ಪಡೆದು ಉತ್ತಮ ಆಹಾರ ಕ್ರಮ ರೂಢಿಸಿಕೊಂಡರೆ ಇದನ್ನು ಸಂಪೂರ್ಣವಾಗಿ ನಿಯಂತ್ರಿಸಬಹುದು.
* ಬೇರೆ ಬೇರೆ ಆರೋಗ್ಯ ಸಮಸ್ಯೆಗಳಿಗೆ ಮಾತ್ರೆಗಳನ್ನು ಹೆಚ್ಚಾಗಿ ತೆಗೆದುಕೊಳ್ಳುವುದರಿಂದಲೂ ಕಿಡ್ನಿ ಸ್ಟೋನ್ ಉಂಟಾಗುತ್ತದೆ.
* ನಾವು ಸೇವಿಸುವ ನೀರಿನಲ್ಲಿ ಹೆಚ್ಚಿನ ಕ್ಯಾಲ್ಸಿಯಂ, ಲವಣಾಂಶಗಳು ಇದ್ದರೆ ಅದರಿಂದಲೂ ಕಿಡ್ನಿ ಸ್ಟೋನ್ ಉಂಟಾಗಬಹುದು.
* ದಿನಕ್ಕೆ ಕನಿಷ್ಟ ೪-೬ ಲೀ. ನೀರು ಅಥವಾ ಪೇಯಗಳ ಸೇವನೆಯಿಂದ ಕಿಡ್ನಿ ಸ್ಟೋನ್ ಉಂಟಾಗುವುದನ್ನು ತಡೆಯಬಹುದು.
* ಅಕ್ಸಲೇಟ್ ಅಂಶ ಅಧಿಕವಾಗಿರುವ ಮಾಂಸ, ನಟ್ಸ್, ಬ್ರೋಕಲಿ ಮುಂತಾದ ಆಹಾರಗಳ ಸೇವನೆಗೆ ಮಿತಿ ಹೇರಬೇಕು.
* ತಂಬಾಕು, ಗುಟ್ಕಾ ಸೇವೆನೆ ಅತಿಯಾದರೂ ಕಿಡ್ನಿ ಸ್ಟೋನ್ ಉಂಟಾಗುತ್ತದೆ. ಹಾಗಾಗಿ ಇವುಗಳಿಗೆ ಕಡಿವಾಣ ಹಾಕಬೇಕು.
* ದೇಹದಲ್ಲಿ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿ ಇಟ್ಟುಕೊಂಡು, ಅಧಿಕ ಬೊಜ್ಜು ಉಂಟು ಮಾಡುವ ಆಹಾರಗಳನ್ನು ವರ್ಜಿಸಬೇಕು.
* ಎಳನೀರು, ನಿಂಬೆರಸ, ಬಾರ್ಲಿ ನೀರು, ಬಾಳೆ ದಿಂಡಿನ ರಸ, ದಾಳಿಂಬೆ ಜ್ಯೂಸ್, ಹಣ್ಣುಗಳ ಸೇವನೆ ಒಳ್ಳೆಯದು.
andolanait

Recent Posts

ಕ್ರಿಸ್‌ಮಸ್ ಹಬ್ಬಕ್ಕೆ ಅರಮನೆ ನಗರಿ ಸಜ್ಜು

ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…

3 mins ago

ಡಿಎಚ್‌ಒ ವರ್ಗಾವಣೆಯಲ್ಲಿ ಎಡವಟ್ಟು

ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…

7 mins ago

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

12 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

12 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

13 hours ago